Homeಮುಖಪುಟರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ ಎಂದು ಹರಿಯಾಣ ಸಿಎಂ ಖಟ್ಟರ್‌, ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ.

- Advertisement -
- Advertisement -

“ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ಉತ್ತರ ಹಾಗೂ ಪಶ್ಚಿಮ ಹರ್ಯಾಣದಲ್ಲಿ ಈ ಸಮಸ್ಯೆ ಇಲ್ಲ. ಇಲ್ಲೇ ನಮ್ಮವರನ್ನು ಸ್ವಯಂಸೇವರಕರನ್ನಾಗಿ ಮಾಡಿ. 500-1000ರ ಗುಂಪು ಮಾಡಿ. ಪ್ರತಿ ಜಾಗದಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ…”

-ಇದು ಹರಿಯಾಣದ ಮುಖ್ಯಮಂತ್ರಿ ಮನೋಹರ್‌‌ಲಾಲ್‌ ಖಟ್ಟರ್‌ ಅವರ ಪ್ರಚೋದನಾತ್ಮಕ ಹೇಳಿಕೆ. ರೈತ ಸಮುದಾಯದ ವಿರುದ್ಧ ಕಾರ್ಯಕರ್ತರನ್ನು ಖಟ್ಟರ್‌ ಪ್ರಚೋದಿಸಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಇದನ್ನೂ ಓದಿರಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

“ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ. ಕೋಲು ಎತ್ತಿಕೊಂಡರೆ ಸಮಯದ ಬಗ್ಗೆ ಚಿಂತೆ ಮಾಡಬೇಡಿ. ತಿಂಗಳೆರಡು ತಿಂಗಳಾದರೂ, ಇಲ್ಲಿ ಕಲಿಯುವುದಕ್ಕಿಂತ ಅಲ್ಲಿ ಕಲಿಯುತ್ತೀರಿ. ಲೀಡರ್‌ ಆಗಿಬಿಡಬಹುದು. ಇದು ಇತಿಹಾಸದಲ್ಲಿ ದಾಖಲಾಗಿ ಬಿಡುತ್ತದೆ” ಎಂದು ಹಿಂಸೆಗೆ ಪ್ರೇರೇಪಿಸಿದ್ದಾರೆ.

ಭಾನುವಾರ ನಡೆದ ಬಿಜೆಪಿಯ ಕಿಸಾನ್ ಮೋರ್ಚಾದ ಸಭೆಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಲು ಸಿದ್ದವಿರುವವರು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ರೈತ ಹೋರಾಟ ಆರಂಭವಾದಾಗಿನಿಂದ ರೈತರ ವಿರುದ್ಧ ಮಾತನಾಡುತ್ತಾ ಬಂದಿರುವ ಖಟ್ಟರ್‌ ಈ ವಿಡಿಯೋ ಹೋರಾಟ ನಿರಂತರ ರೈತರನ್ನು ಇನ್ನಷ್ಟು ಕೆರಳಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ಪಂಜಾಬ್‌ನಲ್ಲಿ ನಂತರದಲ್ಲಿ ಹರ್ಯಾಣದಲ್ಲಿ ರೈತರು ಹೋರಾಟ ಆರಂಭಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿರುವ ಹರ್ಯಾಣ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದಾಗಲೆಲ್ಲಾ, ತೀವ್ರವಾದ ಪ್ರತಿಭಟನೆ ವ್ಯಕ್ತವಾಗಲಾರಂಭಿಸಿತು.

ಕಳೆದ ತಿಂಗಳು ಬಸ್ತಾರಾ ಟಾಲ್‌ಪ್ಲಾಜ ಬಳಿ ಎಸ್‌ಡಿಎಂ ರೈತರ ತಲೆ ಒಡೆಯುವಂತೆ ಕರೆ ನೀಡಿದ್ದರು, ಆಗಲೂ ಹಿಂಸಾಚಾರ ನಡೆದಿತ್ತು. ಇದನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದರೂ ಕೂಡ. ಅಧಿಕಾರವನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಪ್ರತಿಕಾರದ ನಡೆಯನ್ನು ಅನುಸರಿಸುತ್ತಿರುವ ಖಟ್ಟರ್‌ ಅವರ ನಿಲುವನ್ನು ರೈತ ಸಂಘಟನೆಗಳು ತೀವ್ರವಾಗಿ ವಿರೋಧಿಸಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಲಾಖಿಮ್‌ಪುರ್‌ ಖೇರಿ ಹಿಂಸಾಚಾರವನ್ನು ಪ್ರತಿಭಟಿಸಿ, ಹಾಗೂ ಖಟ್ಟರ್‌ ಹೇಳಿಕೆಯನ್ನು ಖಂಡಿಸಿ ಅಕ್ಟೋಬರ್‌ 4ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಪಡೆ ರೈತರ ಮೇಲೆ ವಾಹನಗಳನ್ನು ಹತ್ತಿಸಿ, ನಾಲ್ವರು ರೈತರನ್ನು ಕೊಂದಿದ್ದಾರೆ. ಸಾಂವಿಧಾನಿಕವಾಗಿ ಹೋರಾಡುತ್ತಿರುವವರ ಮೇಲೆ ಬಿಜೆಪಿಯವರು ಪ್ರಯೋಗಿಸುತ್ತಿರುವ  ಕ್ರೌರ್ಯದ ಅಸ್ತ್ರ ಆತಂಕಕ್ಕೆ ಕಾರಣವಾಗಿದೆ.

ಛತ್ತೀಸ್‌ಘಡ ಮುಖ್ಯಮಂತ್ರಿ ಪ್ರತಿಕ್ರಿಯೆ

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಹೇಳಿಕೆ ಹಾಗೂ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಆಗಿರುವ ದಾಳಿಯನ್ನು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಕಟುವಾಗಿ ಟೀಕಿಸಿದ್ದಾರೆ.

“ಲಖಿಂಪುರ್‌‌ ಖೇರಿಗೆ ಭೇಟಿ ನೀಡಲು ಹಾಗೂ ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ. ನಿನ್ನೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಸೀತಾಪುರಕ್ಕೆ ಅವರು ತೆರಳದಂತೆ, ಯಾವುದೇ ವಾರಂಟ್‌ ಇಲ್ಲದೆಯೂ ತಡೆದಿದ್ದಾರೆ” ಎಂದು ರಾಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

“ತನ್ನ ವಿರುದ್ಧದ ಯಾವುದೇ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಬಯಸುತ್ತಿದೆ. ಖಟ್ಟರ್‌ ಹೇಳಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದ್ದು, ಅವರು ಎಲ್ಲ ವಿರೋಧಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಇದು ಸರ್ವಾಧಿಕಾರವಾಗಿದೆ. ಇದನ್ನು ನಾವು ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...