Homeಮುಖಪುಟರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

- Advertisement -
- Advertisement -

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಬೆಂಬಲಿಸಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೋದಲ್ಲೆಲ್ಲಾ ರೈತರು ಪ್ರತಿಭಟನೆ ನಡೆಸುವ ಮೂಲಕ, ಘೇರಾವ್ ಮಾಡುವ ಮೂಲಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಈ ನಡುವೆ ವಿಶ್ವ ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕಾಗಿ ಕರ್ನಲ್‌ಗೆ ಬೆಳಗ್ಗೆ 10 ಗಂಟೆಗೆ ಭೇಟಿ ನೀಡಬೇಕಿದ್ದ ಖಟ್ಟರ್ ಅವರು, ನಿಗದಿತ ಸಮಯಕ್ಕಿಂತ ಒಂದೂವರೆ ಗಂಟೆ ಮುಂಚಿತವಾಗಿಯೇ (ಬೆಳಗ್ಗೆ 8:30) ಸ್ಥಳಕ್ಕೆ ಆಗಮಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನೂರಾರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ರಸ್ತೆಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿದ್ದು ಓಡಾಟ ನಿಬಂರ್ಧಿಸಲಾಗಿದೆ.

ರೈತರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕುತ್ತಾರೆ ಎಂಬ ಭಯದಿಂದ ಸಿಎಂ ನಿಗಧಿತ ಸಮಯಕ್ಕಿಂತ ಮೊದಲೇ ಕಾರ್ಯಕ್ರಮ ಆರಂಭಿಸಿ ಮುಗಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಖಟ್ಟರ್ ಅವರ ಆಗಮನದ ಬಗ್ಗೆ ಜಿಲ್ಲಾಡಳಿತ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಖಟ್ಟರ್ ಮುಂಚಿತವಾಗಿಯೇ ಬರುತ್ತಿರುವ ಮಾಹಿತಿ ಸೋರಿಕೆಯಾಗಿದ್ದು, ರೈತ ಮುಖಂಡರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಭಟನೆಗಾಗಿ ಕರ್ನಲ್-ಬಸ್ತರ್ ಟೋಲ್ ಪ್ಲಾಜಾದಲ್ಲಿ ಒಗ್ಗೂಡಬೇಕೆಂದು ಕೇಳಿಕೊಂಡಿದ್ದರು.

ಈ ಕುರಿತು ಮಾತನಾಡಿರುವ ಖಟ್ಟರ್, ’ರೈತರು ಶಾಂತಿಯುತವಾಗಿ ಪ್ರತಿಭಟನೆಗಳನ್ನು ನಡೆಸಬಹುದು. ಆದರೆ, ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ. ಭದ್ರತೆಯ ದೃಷ್ಟಿಯಿಂದ ಕರ್ನಲ್‌ಗೆ ಭೇಟಿ ನೀಡುವ ಮುನ್ನ ಜಿಲ್ಲಾಡಳಿತ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿದ್ದು, ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿದೆ ಎಂದು ತಿಳಿಸಿದ್ದಾರೆ.

ಮಳೆ ಮುನ್ಸೂಚನೆಯಿಂದಾಗಿ ಖಟ್ಟರ್ ಅವರು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಕರ್ನಾಲ್ ಉಪ ಆಯುಕ್ತ ನಿಶಾಂತ್ ಕುಮಾರ್ ಯಾದವ್ ತಿಳಿಸಿದರು.

ಖಟ್ಟರ್ ಅವರು ಶನಿವಾರ ಕರ್ನಲ್‌ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಇದನ್ನು ವಿರೋಧಿಸಿ, ಪ್ರತಿಭಟನೆ ನಡೆಸು ವಂತೆ ರೈತರನ್ನು ಕೋರಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ನ ಸ್ಥಳೀಯ ಮುಖಂಡರಾದ ಜಗದೀಪ್ ಸಿಂಗ್ ಔಲಾಖ್ ತಿಳಿಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಈ ಹಿಂದೆ ಹಲವು ಬಾರಿ ರೈತರಿಂದ ಪ್ರತಿಭಟನೆಯನ್ನು ಎದುರಿಸಿರುವ ಖಟ್ಟರ್ ಅವರು, ಕರ್ನಲ್‌ನಲ್ಲಿ ರೈತರೊಂದಿಗೆ ಯಾವುದೇ ಮುಖಾಮುಖಿಯನ್ನು ಬಯಸುವುದಿಲ್ಲ. ಆದ್ದರಿಂದ ಯೋಜಿತ ಸಮಯಕ್ಕಿಂತ ಮುಂಚಿತವಾಗಿ ಭೇಟಿ ನೀಡಿದ್ಧಾರೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ರೈತ ಸಂಘಟನೆಗಳು ಹರಿಯಾಣದ ವಿವಿಧ ಜಿಲ್ಲೆಗಳಲ್ಲಿ ರೈತರು ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸುತ್ತಿದ್ದಾರೆ.

ಪಂಚಕುಲದಲ್ಲಿ ರೈತರ ಮೇಲೆ ಲಾಠೀಚಾರ್ಜ್

ಇನ್ನೊಂದೆಡೆ ಸಂಪೂರ್ಣ ಕ್ರಾಂತಿ ದಿವಸ್ ಅಂಗವಾಗಿ ಹರಿಯಾಣ ಸ್ಪೀಕರ್ ಗೈನ್ ಚಂದ್ ಗುಪ್ತಾ ನಿವಾಸದ ಮುಂದೆ ಪ್ರತಿಭಟನೆ ಮಾಡಲು ತೆರಳುತ್ತಿದ್ದ ರೈತರ ಮೇಲೆ ಪಂಚಕುಲದಲ್ಲಿ ಪೊಲೀಸರು ಲಾಠೀಚಾರ್ಜ್ ನಡೆಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...