Homeಚಳವಳಿರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

ರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಮತ್ತೊಮ್ಮೆ ಬೆಂಬಲಿಸಿರುವ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್, ಕರ್ನಾಲ್‌ನಲ್ಲಿ ಹರಿಯಾಣ ಸರ್ಕಾರ ನಡೆಸಿರುವ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಮ್ಮೆ ಆಡಳಿತಾರೂ ಬಿಜೆಪಿಯನ್ನು ಟೀಕಿಸಿರುವ ಸತ್ಯಪಾಲ್ ಮಲಿಕ್, ರೈತರ ತಲೆ ಒಡೆಯಲು ಆದೇಶ ನೀಡಿದ ಅಧಿಕಾರಿಯನ್ನು ತಕ್ಷಣ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಕರ್ನಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಇದರಲ್ಲಿ 10 ಜನರು ಗಾಯಗೊಂಡಿದ್ದರು ಎಂದು ವರದಿಯಾಗಿದೆ.

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರ ವಿಡಿಯೋ ವೈರಲ್ ಆದ ಬಳಿಕ ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ಪೊಲೀಸರ ಹಲ್ಲೆ: ಆಯುಷ್‌ ಸಿನ್ಹಾ ಸರ್ಕಾರಿ ತಾಲಿಬಾನ್‌ ಕಮಾಂಡರ್‌- ರಾಕೇಶ್ ಟಿಕಾಯತ್ ಕಿಡಿ

“ಮನೋಹರ್ ಲಾಲ್ ಖಟ್ಟರ್ ರೈತರ ಕ್ಷಮೆ ಕೇಳಬೇಕು … ಹರಿಯಾಣ ಮುಖ್ಯಮಂತ್ರಿ ರೈತರ ಮೇಲೆ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪೊಲೀಸರನ್ನು ಬಳಸಬೇಡಿ ಎಂದು ನಾನು ಉನ್ನತ ನಾಯಕತ್ವಕ್ಕೆ ಹೇಳಿದ್ದೇನೆ” ಎಂದು ಮಲಿಕ್ ಹೇಳಿದ್ದಾರೆ. ಜೊತೆಗೆ  ತನ್ನನ್ನು ತಾನು ರೈತರ ಮಗ ಎಂದು ಕರೆದುಕೊಂಡಿದ್ದಾರೆ.

“ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಯುಷ್ ಸಿನ್ಹಾ (ಎಸ್‌ಡಿಎಂ) ಅವರನ್ನು ತಕ್ಷಣವೇ ವಜಾ ಮಾಡಬೇಕು. ಅವರು ಎಸ್‌ಡಿಎಂ ಹುದ್ದೆಗೆ ಅರ್ಹರಲ್ಲ. ಆದರೆ, ಸರ್ಕಾರವು ಅವರನ್ನು ಬೆಂಬಲಿಸುತ್ತಿದೆ” ಎಂದು ಹೇಳಿದ್ದಾರೆ.

ಈ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರವು ಯಾವುದೇ ಸಾಂತ್ವನವನ್ನು ನೀಡಿಲ್ಲ. ಇದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ ಎಂದು ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳಲ್ಲಿ 600 ರೈತರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾರೂ ಸಮಾಧಾನದ ಮಾತನ್ನೂ ಹೇಳಲಿಲ್ಲ” ಎಂದಿದ್ದಾರೆ.

ತಮ್ಮ ಹೇಳಿಕೆ ವಿರುದ್ಧ ಸರ್ಕಾರ ಏನು ಪ್ರತಿಕ್ರಿಯೆ ನೀಡಿದರೂ ನಾನು ಹೆದರುವುದಿಲ್ಲ ಎಂದಿದ್ದಾರೆ. “ನಾನು ಈ ರಾಜ್ಯಪಾಲರ ಹುದ್ದೆಯನ್ನು ಪ್ರೀತಿಸುತ್ತಿಲ್ಲ. ನಾನು ಏನೇ ಹೇಳಿದರೂ ನನ್ನ ಮನಸ್ಸಿನಿಂದ ಮಾತನಾಡುತ್ತೇನೆ. ನಾನು ರೈತರ ಬಳಿಗೆ ಮರಳಬೇಕು ಎಂದು ಅನಿಸುತ್ತಿದೆ” ಎಂದಿದ್ದಾರೆ.

ಈ ಮೊದಲು ಕೂಡ ರೈತ ಹೋರಾಟವನ್ನು ಬೆಂಬಲಿಸಿದ್ದ ಇವರು, “ಈ ರೈತ ಚಳುವಳಿ ಹೀಗೇ ಮುಂದುವರೆದರೆ, ಮುಂದೆ ಪಶ್ಚಿಮ ಯುಪಿ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಬಿಜೆಪಿ ಸೋಲುತ್ತದೆ” ಎಂದು ಹೇಳಿದ್ದರು.

ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರ, ಗೋವಾ, ಬಿಹಾರ ಮತ್ತು ಒಡಿಶಾದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...