Homeಚಳವಳಿರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

ರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಮತ್ತೊಮ್ಮೆ ಬೆಂಬಲಿಸಿರುವ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್, ಕರ್ನಾಲ್‌ನಲ್ಲಿ ಹರಿಯಾಣ ಸರ್ಕಾರ ನಡೆಸಿರುವ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಮ್ಮೆ ಆಡಳಿತಾರೂ ಬಿಜೆಪಿಯನ್ನು ಟೀಕಿಸಿರುವ ಸತ್ಯಪಾಲ್ ಮಲಿಕ್, ರೈತರ ತಲೆ ಒಡೆಯಲು ಆದೇಶ ನೀಡಿದ ಅಧಿಕಾರಿಯನ್ನು ತಕ್ಷಣ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಕರ್ನಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಇದರಲ್ಲಿ 10 ಜನರು ಗಾಯಗೊಂಡಿದ್ದರು ಎಂದು ವರದಿಯಾಗಿದೆ.

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರ ವಿಡಿಯೋ ವೈರಲ್ ಆದ ಬಳಿಕ ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ಪೊಲೀಸರ ಹಲ್ಲೆ: ಆಯುಷ್‌ ಸಿನ್ಹಾ ಸರ್ಕಾರಿ ತಾಲಿಬಾನ್‌ ಕಮಾಂಡರ್‌- ರಾಕೇಶ್ ಟಿಕಾಯತ್ ಕಿಡಿ

“ಮನೋಹರ್ ಲಾಲ್ ಖಟ್ಟರ್ ರೈತರ ಕ್ಷಮೆ ಕೇಳಬೇಕು … ಹರಿಯಾಣ ಮುಖ್ಯಮಂತ್ರಿ ರೈತರ ಮೇಲೆ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪೊಲೀಸರನ್ನು ಬಳಸಬೇಡಿ ಎಂದು ನಾನು ಉನ್ನತ ನಾಯಕತ್ವಕ್ಕೆ ಹೇಳಿದ್ದೇನೆ” ಎಂದು ಮಲಿಕ್ ಹೇಳಿದ್ದಾರೆ. ಜೊತೆಗೆ  ತನ್ನನ್ನು ತಾನು ರೈತರ ಮಗ ಎಂದು ಕರೆದುಕೊಂಡಿದ್ದಾರೆ.

“ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಯುಷ್ ಸಿನ್ಹಾ (ಎಸ್‌ಡಿಎಂ) ಅವರನ್ನು ತಕ್ಷಣವೇ ವಜಾ ಮಾಡಬೇಕು. ಅವರು ಎಸ್‌ಡಿಎಂ ಹುದ್ದೆಗೆ ಅರ್ಹರಲ್ಲ. ಆದರೆ, ಸರ್ಕಾರವು ಅವರನ್ನು ಬೆಂಬಲಿಸುತ್ತಿದೆ” ಎಂದು ಹೇಳಿದ್ದಾರೆ.

ಈ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರವು ಯಾವುದೇ ಸಾಂತ್ವನವನ್ನು ನೀಡಿಲ್ಲ. ಇದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ ಎಂದು ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳಲ್ಲಿ 600 ರೈತರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾರೂ ಸಮಾಧಾನದ ಮಾತನ್ನೂ ಹೇಳಲಿಲ್ಲ” ಎಂದಿದ್ದಾರೆ.

ತಮ್ಮ ಹೇಳಿಕೆ ವಿರುದ್ಧ ಸರ್ಕಾರ ಏನು ಪ್ರತಿಕ್ರಿಯೆ ನೀಡಿದರೂ ನಾನು ಹೆದರುವುದಿಲ್ಲ ಎಂದಿದ್ದಾರೆ. “ನಾನು ಈ ರಾಜ್ಯಪಾಲರ ಹುದ್ದೆಯನ್ನು ಪ್ರೀತಿಸುತ್ತಿಲ್ಲ. ನಾನು ಏನೇ ಹೇಳಿದರೂ ನನ್ನ ಮನಸ್ಸಿನಿಂದ ಮಾತನಾಡುತ್ತೇನೆ. ನಾನು ರೈತರ ಬಳಿಗೆ ಮರಳಬೇಕು ಎಂದು ಅನಿಸುತ್ತಿದೆ” ಎಂದಿದ್ದಾರೆ.

ಈ ಮೊದಲು ಕೂಡ ರೈತ ಹೋರಾಟವನ್ನು ಬೆಂಬಲಿಸಿದ್ದ ಇವರು, “ಈ ರೈತ ಚಳುವಳಿ ಹೀಗೇ ಮುಂದುವರೆದರೆ, ಮುಂದೆ ಪಶ್ಚಿಮ ಯುಪಿ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಬಿಜೆಪಿ ಸೋಲುತ್ತದೆ” ಎಂದು ಹೇಳಿದ್ದರು.

ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರ, ಗೋವಾ, ಬಿಹಾರ ಮತ್ತು ಒಡಿಶಾದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...