Homeಚಳವಳಿರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

ರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಮತ್ತೊಮ್ಮೆ ಬೆಂಬಲಿಸಿರುವ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್, ಕರ್ನಾಲ್‌ನಲ್ಲಿ ಹರಿಯಾಣ ಸರ್ಕಾರ ನಡೆಸಿರುವ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಮ್ಮೆ ಆಡಳಿತಾರೂ ಬಿಜೆಪಿಯನ್ನು ಟೀಕಿಸಿರುವ ಸತ್ಯಪಾಲ್ ಮಲಿಕ್, ರೈತರ ತಲೆ ಒಡೆಯಲು ಆದೇಶ ನೀಡಿದ ಅಧಿಕಾರಿಯನ್ನು ತಕ್ಷಣ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಕರ್ನಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಇದರಲ್ಲಿ 10 ಜನರು ಗಾಯಗೊಂಡಿದ್ದರು ಎಂದು ವರದಿಯಾಗಿದೆ.

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರ ವಿಡಿಯೋ ವೈರಲ್ ಆದ ಬಳಿಕ ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ಪೊಲೀಸರ ಹಲ್ಲೆ: ಆಯುಷ್‌ ಸಿನ್ಹಾ ಸರ್ಕಾರಿ ತಾಲಿಬಾನ್‌ ಕಮಾಂಡರ್‌- ರಾಕೇಶ್ ಟಿಕಾಯತ್ ಕಿಡಿ

“ಮನೋಹರ್ ಲಾಲ್ ಖಟ್ಟರ್ ರೈತರ ಕ್ಷಮೆ ಕೇಳಬೇಕು … ಹರಿಯಾಣ ಮುಖ್ಯಮಂತ್ರಿ ರೈತರ ಮೇಲೆ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪೊಲೀಸರನ್ನು ಬಳಸಬೇಡಿ ಎಂದು ನಾನು ಉನ್ನತ ನಾಯಕತ್ವಕ್ಕೆ ಹೇಳಿದ್ದೇನೆ” ಎಂದು ಮಲಿಕ್ ಹೇಳಿದ್ದಾರೆ. ಜೊತೆಗೆ  ತನ್ನನ್ನು ತಾನು ರೈತರ ಮಗ ಎಂದು ಕರೆದುಕೊಂಡಿದ್ದಾರೆ.

“ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಯುಷ್ ಸಿನ್ಹಾ (ಎಸ್‌ಡಿಎಂ) ಅವರನ್ನು ತಕ್ಷಣವೇ ವಜಾ ಮಾಡಬೇಕು. ಅವರು ಎಸ್‌ಡಿಎಂ ಹುದ್ದೆಗೆ ಅರ್ಹರಲ್ಲ. ಆದರೆ, ಸರ್ಕಾರವು ಅವರನ್ನು ಬೆಂಬಲಿಸುತ್ತಿದೆ” ಎಂದು ಹೇಳಿದ್ದಾರೆ.

ಈ ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರವು ಯಾವುದೇ ಸಾಂತ್ವನವನ್ನು ನೀಡಿಲ್ಲ. ಇದರಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ ಎಂದು ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳಲ್ಲಿ 600 ರೈತರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾರೂ ಸಮಾಧಾನದ ಮಾತನ್ನೂ ಹೇಳಲಿಲ್ಲ” ಎಂದಿದ್ದಾರೆ.

ತಮ್ಮ ಹೇಳಿಕೆ ವಿರುದ್ಧ ಸರ್ಕಾರ ಏನು ಪ್ರತಿಕ್ರಿಯೆ ನೀಡಿದರೂ ನಾನು ಹೆದರುವುದಿಲ್ಲ ಎಂದಿದ್ದಾರೆ. “ನಾನು ಈ ರಾಜ್ಯಪಾಲರ ಹುದ್ದೆಯನ್ನು ಪ್ರೀತಿಸುತ್ತಿಲ್ಲ. ನಾನು ಏನೇ ಹೇಳಿದರೂ ನನ್ನ ಮನಸ್ಸಿನಿಂದ ಮಾತನಾಡುತ್ತೇನೆ. ನಾನು ರೈತರ ಬಳಿಗೆ ಮರಳಬೇಕು ಎಂದು ಅನಿಸುತ್ತಿದೆ” ಎಂದಿದ್ದಾರೆ.

ಈ ಮೊದಲು ಕೂಡ ರೈತ ಹೋರಾಟವನ್ನು ಬೆಂಬಲಿಸಿದ್ದ ಇವರು, “ಈ ರೈತ ಚಳುವಳಿ ಹೀಗೇ ಮುಂದುವರೆದರೆ, ಮುಂದೆ ಪಶ್ಚಿಮ ಯುಪಿ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಬಿಜೆಪಿ ಸೋಲುತ್ತದೆ” ಎಂದು ಹೇಳಿದ್ದರು.

ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರ, ಗೋವಾ, ಬಿಹಾರ ಮತ್ತು ಒಡಿಶಾದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...