Homeಮುಖಪುಟಕೇಜ್ರಿವಾಲ್ ವಿರುದ್ಧ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿಯಿಂದ ಮಾನನಷ್ಟ ಮೊಕದ್ದಮೆ?

ಕೇಜ್ರಿವಾಲ್ ವಿರುದ್ಧ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿಯಿಂದ ಮಾನನಷ್ಟ ಮೊಕದ್ದಮೆ?

- Advertisement -
- Advertisement -

ಹರಿಯಾಣ ಸರ್ಕಾರ ಕೈಗಾರಿಕಾ ತ್ಯಾಜ್ಯವನ್ನು ಯಮುನಾ ನೀರಿನಲ್ಲಿ ಸುರಿಯುವ ಮೂಲಕ ವಿಷಪೂರಿತಗೊಳಿಸುತ್ತಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೊಂಡ ನಂತರ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ, ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲು ಬಿಜೆಪಿ ಭಾರತೀಯ ಚುನಾವಣಾ ಆಯೋಗಕ್ಕೂ (ಇಸಿ) ಭೇಟಿ ನೀಡಲಿದೆ. ಕೇಜ್ರಿವಾಲ್ ಆರೋಪ ಮಾಡುವ ಬದಲು ಆಡಳಿತದತ್ತ ಗಮನಹರಿಸಬೇಕೆಂದು ಸಿಎಂ ಸೈನಿ ಸಲಹೆ ನೀಡಿದರು.

ಕೇಜ್ರಿವಾಲ್ ಆರೋಪಗಳನ್ನು ಮಾಡುವ ಮತ್ತು ಪಲಾಯನ ಅಭ್ಯಾಸವನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು. “ಅರವಿಂದ್ ಕೇಜ್ರಿವಾಲ್ ಅಮೋನಿಯಾ ಬಗ್ಗೆ ಮಾತನಾಡುತ್ತಾರೆ. ಅವರು ನೀರಿನ ಕೊರತೆಯನ್ನು ಹೇಳಿಕೊಳ್ಳುತ್ತಾರೆ. ಆದರೆ, ಯಾವುದೇ ಕೊರತೆಯಿಲ್ಲ; ವಿತರಣಾ ವ್ಯವಸ್ಥೆಯಲ್ಲಿ ಸಮಸ್ಯೆ ಇದೆ. ಅವರು 10 ವರ್ಷಗಳಲ್ಲಿ ನೀರಿನ ವಿತರಣೆಯನ್ನು ನಿರ್ವಹಿಸಲು ಸಾಧ್ಯವಿಲ್ಲ. ಅವರು ಭರವಸೆ ನೀಡಿದ್ದರೂ ಜನರಿಗೆ ಕಲುಷಿತ ನೀರು ಸಿಗುತ್ತಿದೆ” ಎಂದು ಸೈನಿ ಹೇಳಿದರು.

“ಆರೋಪ ಮಾಡಿ ನಂತರ ಪಲಾಯನ ಅವರ (ಅರವಿಂದ್ ಕೇಜ್ರಿವಾಲ್) ಸ್ವಭಾವ ಮತ್ತು ಚಿಂತನೆ. ‘ಥೂಕೋ ಉಗುಳಿ ಓಡಿ ಎಂಬ ಮಾತಿದೆ; ಕೇಜ್ರಿವಾಲ್ ಮಾಡುವುದೂ ಇದನ್ನೇ. ನೀವು ನಿಮ್ಮ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಬೇಕೆಂದು ನಾನು ಹೇಳಿದೆ ಮತ್ತು ನಾನು ನನ್ನ ಮುಖ್ಯ ಕಾರ್ಯದರ್ಶಿಯನ್ನು ಸೋನಿಪತ್‌ನಲ್ಲಿ ನೀರಿನ ಗುಣಮಟ್ಟವನ್ನು ಪರಿಶೀಲಿಸಲು ಕೇಳುತ್ತೇನೆ. ಯಮುನಾ ದೆಹಲಿಗೆ ಎಲ್ಲಿಂದ ಪ್ರವೇಶಿಸುತ್ತಿದೆ ಎಂಬುದನ್ನು ಪರಿಶೀಲಿಸಲಿ” ಎಂದು ಸೈನಿ ಹೇಳಿದರು.

ಹರಿಯಾಣ ಸರ್ಕಾರದ ಸಚಿವ ಶ್ಯಾಮ್ ಸಿಂಗ್ ರಾಣಾ, “ಆಪ್ ಸರ್ಕಾರ ತಮ್ಮ ಮುಖ್ಯ ಕಾರ್ಯದರ್ಶಿ ಅಥವಾ ಮುಖ್ಯ ಎಂಜಿನಿಯರ್ ಅನ್ನು ಕಳುಹಿಸಿ, ದೆಹಲಿಗೆ ಕಳುಹಿಸಲಾಗುತ್ತಿರುವ ನೀರನ್ನು ಪರೀಕ್ಷಿಸಬಹುದು, ನಂತರವೇ ಅವರು ಏನಾದರೂ ಹೇಳಬೇಕು” ಎಂದು ಹೇಳಿದರು.

ಮುಖ್ಯವಾಗಿ, ದೆಹಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳ ಮೊದಲು, ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವು ದೆಹಲಿಗೆ ಸರಬರಾಜು ಮಾಡಲಾದ ಯಮುನಾ ನೀರನ್ನು ‘ವಿಷ’ಗೊಳಿಸಿದೆ ಎಂದು ಕೇಜ್ರಿವಾಲ್ ಆರೋಪಿಸಿದರು. ಇದು ಸಾಮೂಹಿಕ ಸಾವುನೋವುಗಳಿಗೆ ಕಾರಣವಾಗಬಹುದು ಎಂದು ಹೇಳಿಕೊಂಡರು.

“ಬಿಜೆಪಿಯ ಹರಿಯಾಣ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ” ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದೆಹಲಿ ಜಲ ಮಂಡಳಿಯ ಜಾಗರೂಕತೆಯು ಕುಡಿಯುವ ನೀರಿನೊಂದಿಗೆ ವಿಷಪೂರಿತ ನೀರನ್ನು ಬೆರೆಸುವುದನ್ನು ತಡೆಯಿತು ಎಂದು ಹೇಳಿಕೊಂಡರು.

“ಈ ನೀರು ದೆಹಲಿಗೆ ಬಂದು ಕುಡಿಯುವ ನೀರಿನೊಂದಿಗೆ ಬೆರೆತಿದ್ದರೆ, ದೆಹಲಿಯಲ್ಲಿ ಅನೇಕ ಜನರು ಸಾಯುತ್ತಿದ್ದರು. ಇದು ಸಾಮೂಹಿಕ ನರಮೇಧಕ್ಕೆ ಕಾರಣವಾಗುತ್ತಿತ್ತು” ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಆರೋಪಿಸಿದರು. ದೆಹಲಿಯಲ್ಲಿರುವ ನೀರು ಸಂಸ್ಕರಣಾ ಘಟಕಗಳು ಈ ರೀತಿಯ ಕಲುಷಿತ ನೀರನ್ನು ಸಂಸ್ಕರಿಸಲು ಸಜ್ಜಾಗಿಲ್ಲ. ಇದು ದೆಹಲಿಯ ಮೂರನೇ ಒಂದು ಭಾಗದಷ್ಟು ನೀರಿನ ಕೊರತೆಯನ್ನು ಉಂಟುಮಾಡಿದೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿ ಜಲ ಮಂಡಳಿಯ ಸಿಇಒ ಏನು ಹೇಳಿದ್ದೇನು?

ಕೇಜ್ರಿವಾಲ್ ಅವರ ಹೇಳಿಕೆಯ ನಂತರ ದೆಹಲಿ ಜಲ ಮಂಡಳಿಯ ಸಿಇಒ ಶಿಲ್ಪಾ ಶಿಂಧೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಹರಿಯಾಣವು ಯಮುನಾ ಮೂಲಕ ದೆಹಲಿಯನ್ನು ತಲುಪುವ ಕಚ್ಚಾ ನೀರಿನಲ್ಲಿ ವಿಷವನ್ನು ಬಿಡುಗಡೆ ಮಾಡಿದೆ ಎಂಬ ಆರೋಪಗಳು ವಾಸ್ತವಿಕವಾಗಿ ತಪ್ಪಾಗಿದ್ದು, ಯಾವುದೇ ಆಧಾರವಿಲ್ಲದೆ ಮತ್ತು ದಾರಿತಪ್ಪಿಸುತ್ತವೆ ಎಂದು ಹೇಳಿದರು. ಇಂತಹ ಸುಳ್ಳು ಹೇಳಿಕೆಗಳು ದೆಹಲಿ ನಿವಾಸಿಗಳಲ್ಲಿ ಭಯ ಹುಟ್ಟಿಸಲು ಕಾರಣವಾಗುತ್ತವೆ ಮತ್ತು ಮೇಲ್ಭಾಗದ ರಾಜ್ಯಗಳೊಂದಿಗಿನ ಸಂಬಂಧಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದರು.

ಇದನ್ನೂ ಓದಿ; ಉತ್ತರ ಪ್ರದೇಶ| ಶಿಕ್ಷಕಿ ಮತ್ತು ಆಕೆಯ ಪತಿ ಮೇಲೆ ಶಾಲಾ ಪ್ರಾಂಶುಪಾಲರ ತಂಡದಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...