Homeಮುಖಪುಟರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದು ಕಡೆ ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ ಹಾಗೂ ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಪ್ರತಿಭಟನೆಗಳು ಜರುಗುತ್ತಿವೆ. ಈ ಕಾನೂನುಗಳನ್ನು ಸಂಪೂರ್ಣವಾಗಿ ರೈತ ವಿರೋಧಿ ಎಂದು ಆ ಜನರು ಭಾವಿಸಿದ್ದಾರೆ. ಇವುಗಳನ್ನು ಬೆಂಬಲಿಸುವ ರಾಜಕೀಯ ನಾಯಕರು ಹಾಗೂ ಬಿಜೆಪಿ-ಜೆಜೆಪಿ ಶಾಸಕರು ಭೇಟಿ ನೀಡಿದ ಸ್ಥಳಗಳಲ್ಲೆಲ್ಲಾ ಪ್ರತಿಭಟನೆ ನಡೆಸುತ್ತಾ, ಮುತ್ತಿಗೆ ಹಾಕುತ್ತಾ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದೇ ರೀತಿ ಪದೇ ಪದೇ ರೈತರ ಪ್ರತಿಭಟನೆಯನ್ನು ಎದುರಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ರವರಿಗೆ ಈ ರೈತ ಹೋರಾಟ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅವರು ರೈತ ಪ್ರತಿಭಟನೆಯನ್ನು ಎದುರಿಸಲಾಗದೇ ವರ್ಚುವಲ್‌ ಕಾರ್ಯಕ್ರಮಗಳ ಮೊರೆ ಹೋಗಿದ್ದಾರೆ! ಈ ಹಿನ್ನೆಲೆಯಲ್ಲಿ ಗುರುವಾರ 16 ಜಿಲ್ಲೆಗಳಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆಯನ್ನು ಆನ್‌ಲೈನ್‌ ಮೂಲಕ ಉದ್ಘಾಟಿಸಿದ್ದಾರೆ ಎನ್ನಲಾಗಿದೆ.

ಇದೇ ಕಾರ್ಯಕ್ರಮದ ಭಾಗವಾಗಿ ದಾದ್ರಿಗೆ ಭೇಟಿ ನೀಡಿದ್ದ ಹರಿಯಾಣ ಮಹಿಳಾ ಅಭಿವೃದ್ದಿ ಇಲಾಖೆಯ ಅಧ್ಯಕ್ಷರಾದ ಬಬಿತಾ ಪೋಗಾಟ್‌ ಹಾಗೂ ಕೈತಾಲ್‌ಗೆ ತೆರಳಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಮಲೇಶ್ ಧಂಡಾ ವಿರುದ್ಧ ರೈತರು ಕಪ್ಪು ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ರೈತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರಿಂದ ಬಬಿತಾ ಪೋಗಾಟ್‌ ನಿರ್ಗಮಿಸಲು ಆಡಳಿತವು ಬೇರೆ ಮಾರ್ಗವನ್ನು ಬಳಸಿದೆ ಎಂದು ರೈತರು ತಿಳಿಸಿದ್ದಾರೆ.

ಬಬಿತಾ ಅವರ ಆಪ್ತ ಸಹವರ್ತಿ ರಾಹುಲ್‌ ಪೋಗಾಟ್‌ ಮಾತನಾಡಿ, ರೈತ ಪ್ರತಿಭಟನಾಕಾರರನ್ನು ಮುಖಾಮುಖಿಯಾಗುವುದನ್ನು ತಪ್ಪಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಆಡಳಿತವು ಅವರನ್ನು ಬೇರೆ ಮಾರ್ಗದಲ್ಲಿ ಕಳುಹಿಸಿದೆ ಎಂದು ಹೇಳಿದ್ದಾರೆ.

ಈ ನಡುವೆ ಕೈತಾಲ್‌ನ ಬಿಕೆಯು ಅಧ್ಯಕ್ಷ ಹೋಶಿಯಾರ್‌ ಸಿಂಗ್‌ ಗಿಲ್‌, ಬಿಜೆಪಿಯ ಕಮಲೇಶ್‌ ಧಂಡಾ ಸ್ಥಳೀಯ ಸರ್ಕಾರಿ ಕಚೇರಿಗೆ ಭೇಟಿನೀಡಿದ ಸಂದರ್ಭದಲ್ಲಿ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾಗಿ ತಿಳಿಸಿದರು. ರೈತ ಮಹಿಳೆಯರು ಸೇರಿದಂತೆ ಎರಡು ಟ್ರ್ಯಾಕ್ಟರ್‌ ಟ್ಯ್ರಾಲಿಗಳಲ್ಲಿ ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜೂನ್‌ 5 ರಂದು ಕರ್ನಾಲ್‌ನಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಖಟ್ಟರ್‌ರವರಿಂದ ಗಿಡ ನೆಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅಲ್ಲಿ ಪ್ರತಿಭಟನೆಗೆ ರೈತರು ಸಹ ಸಜ್ಜುಗೊಂಡಿದ್ದರು. ಇದರ ಸುಳಿವು ಅರಿತ ಮುಖ್ಯಮಂತ್ರಿಗಳು ರೈತರ ಪ್ರತಿಭಟನೆಯನ್ನು ಎದುರಿಸಲಾರದೇ ಒಂದೂವರೆ ಗಂಟೆ ಮುಂಚೆಯೇ ಸ್ಥಳಕ್ಕೆ ಆಗಮಿಸಿ ಗಡಿಬಿಡಿಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಹೊರಟು ಹೋಗಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಮದುವೆ ಮತ್ತು ಶವಸಂಸ್ಕಾರಗಳಂತಹ ವೈಯಕ್ತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಬಿಜೆಪಿ ನಾಯಕರ ಭೇಟಿಯನ್ನು ವಿರೋಧಿಸದಿರಲು ಸಂಯುಕ್ತ ಕಿಸಾನ್‌ ಮೋರ್ಚಾ ನಿರ್ಧರಿಸಿದೆ. ಆದರೆ, ಅವರ ರಾಜಕೀಯ ಅಥವಾ ಆಡಳಿತವು ಆಯೋಜಿಸಿರುವ ಕಾರ್ಯಕ್ರಮಗಳಿಗೆ ಹೋದಾಗಲೆಲ್ಲಾ ನಾವು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ನಂಬರ್‌ದಾರ್‌ ತಿಳಿಸಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...