Homeಮುಖಪುಟಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಹರ್ಯಾಣ ಸಿಎಂ

ಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಹರ್ಯಾಣ ಸಿಎಂ

- Advertisement -
- Advertisement -

ಹೈಕೋರ್ಟ್ ನ್ಯಾಯಾಧೀಶರ ಕುರಿತು ನೀಡಿದ್ದ ಹೇಳಿಕೆಯನ್ನು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸೋಮವಾರ ಹಿಂತೆಗೆದುಕೊಂಡಿದ್ದಾರೆ. ಅವರು ನೀಡಿದ್ದ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು.

ಭಿವಾನಿಯಲ್ಲಿ ಹಿಂದಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಖಟ್ಟರ್, “ಇದು ಅಸ್ವಾಭಾವಿಕ ಅಭಿಪ್ರಾಯ. ಈ ಹೇಳಿಕೆಯನ್ನು ನೀಡಬಾರದಿತ್ತು” ಎಂದಿದ್ದಾರೆ.

ಮೂರು ದಿನಗಳ ಪ್ರವಾಸವನ್ನು ಆರಂಭಿಸಿದ ಭಿವಾನಿಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಖಟ್ಟರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತು.

2019ರ ಹರಿಯಾಣ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಖಟ್ಟರ್‌, “ಆ ಸಮಸ್ಯೆ ಬಗೆಹರಿಯುತ್ತದೆ. ನ್ಯಾಯಾಧೀಶರಿದ್ದಾರೆ, ಅವರ ತಲೆಯಲ್ಲಿ ಕೆಲವು ಸಮಸ್ಯೆ ಇದೆ. ನಾವು ಅದನ್ನು ಸರಿಪಡಿಸುತ್ತೇವೆ. ನನಗೆ ಸಂಪೂರ್ಣ ವಿಷಯ ತಿಳಿದಿದೆ. ಮೂರು ಸಾವಿರ ಮಂದಿ ಈಗಾಗಲೇ ನೇಮಕವಾಗಿದ್ದಾರೆ. 5,000ದಲ್ಲಿ ಮೂರು ಸಾವಿರ ಸೇರಿದ್ದಾರೆ. ಇನ್ನುಳಿದ 2,000 ಮಂದಿ ಶೀಘ್ರದಲ್ಲೇ ನ್ಯಾಯಾಲಯದ ತೀರ್ಪು ಪಡೆಯುತ್ತಾರೆ” ಎಂದಿದ್ದರು. ಇದು ವೈರಲ್ ವಿಡಿಯೊದಲ್ಲಿ ಸೆರೆಯಾಗಿದೆ.

ಹರಿಯಾಣ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇಮಕಾತಿಗೆ ಸಂಬಂಧಿಸಿದ 2019ರ ಪ್ರಕರಣವನ್ನು ಉಲ್ಲೇಖಿಸಿ ಖಟ್ಟರ್‌ ಮಾತನಾಡಿದ್ದಾರೆಂದು ಮೂಲಗಳು ತಿಳಿಸಿವೆ. ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆಕ್ಷೇಪಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಭರ್ತಿ ಮಾಡಬೇಕಿದ್ದ 5,000 ಹುದ್ದೆಗಳ ಪೈಕಿ ಕನಿಷ್ಠ 833 ಅಭ್ಯರ್ಥಿಗಳ ಬಯೋಮೆಟ್ರಿಕ್‌ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹರಿಯಾಣ ಸಿಬ್ಬಂದಿ ಆಯ್ಕೆ ಆಯೋಗ ಹೇಳಿದೆ. ಹೈಕೋರ್ಟ್‌‌ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಆ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಖಟ್ಟರ್, “ನಾನು ನ್ಯಾಯಾಲಯಗಳನ್ನು ಗೌರವಿಸುತ್ತೇನೆ. ನ್ಯಾಯಾಲಯಗಳು ಏನೇ ತೀರ್ಪು ನೀಡಿದರೂ ಅದು ಅಂತಿಮ ತೀರ್ಪು ಎಂಬುದರಲ್ಲಿ ಸಂದೇಹವಿಲ್ಲ ಎಂದು ನಾನು ತಕ್ಷಣ ಹೇಳಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ವಿಷಯಗಳು ಮುಂದುವರಿಯುತ್ತವೆ. ಎಲ್ಲರೂ ಸಾರ್ವಜನಿಕ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಾರೆ. ವಿಪರೀತ ವಿಳಂಬಕ್ಕೆ ಸಂಬಂಧಿಸಿದ ಪ್ರಶ್ನೆ ಇದಾಗಿತ್ತು. ಪರೀಕ್ಷೆ ನಡೆಯಿತು, ಮತ್ತು ಫಲಿತಾಂಶವನ್ನು ಪ್ರಕಟಿಸಲಾಯಿತು, ಆದರೆ ತಡೆಯಾಜ್ಞೆ ವಿಧಿಸಲಾಯಿತು. ಹೀಗಾಗಿ, ಅಸ್ವಾಭಾವಿಕ ಅಭಿಪ್ರಾಯ ಹೊರಬಿದ್ದಿದೆ, ನಾನು ಈ ಹೇಳಿಕೆ ನೀಡಬಾರದಿತ್ತು ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

“ಒಂದು ವಿಷಯ ನಿರ್ದಿಷ್ಟ ನ್ಯಾಯಾಧೀಶರನ್ನು ತಲುಪಿದ್ದರೂ ಸಹ, ನಾನು ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ಆದರೆ, ಈ ವಿಳಂಬದಿಂದ ಸಾವಿರಾರು ಜನರು ತೊಂದರೆಗೀಡಾಗಿದ್ದಾರೆ. ಅವರ ತರಬೇತಿಗೆ ಸಾಕಷ್ಟು ಸಮಯ ಸಿಗುತ್ತಿಲ್ಲ. ನಿನ್ನೆಯ ಸಾರ್ವಜನಿಕ ಸಭೆಗೆ, ತಮ್ಮ ಕೆಲಸಕ್ಕೆ ಸೇರಲು ಸಾಧ್ಯವಾಗದ ಅಂತಹ ಜನರೆಲ್ಲರೂ ಬಂದಿದ್ದರು. ಹೀಗಾಗಿ, ಅಸ್ವಾಭಾವಿಕ ಹೇಳಿಕೆ ನೀಡಲಾಯಿತು. ಅದಕ್ಕಾಗಿ ನಾನು ವಿಷಾದಿಸುತ್ತೇನೆ” ಎಂದು ಕಟ್ಟರ್‌ ಸ್ಪಷ್ಟಪಡಿಸಿದ್ದಾರೆ.

ಖಟ್ಟರ್ ಅವರ ವೀಡಿಯೊ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಕಾಂಗ್ರೆಸ್ ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯಿಸಿ, “ಇದು ನ್ಯಾಯಾಂಗದ ಮೇಲಿನ ನೇರ ದಾಳಿ” ಎಂದು ಟೀಕಿಸಿದರು.

ಖಟ್ಟರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, “ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ), ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಈ ವಿಷಯವನ್ನು ಅರಿತುಕೊಳ್ಳಬೇಕು. ಹರಿಯಾಣ ಮುಖ್ಯಮಂತ್ರಿಗೆ ನಿಂದನೆ ನೋಟಿಸ್ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ಆಯೋಗವು 833 ಅಭ್ಯರ್ಥಿಗಳ ಬಯೋಮೆಟ್ರಿಕ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಅಧ್ಯಕ್ಷರು ಒಪ್ಪಿಕೊಳ್ಳುತ್ತಿದ್ದಾರೆ. ಅಲ್ಲದೆ, ಜೂನ್ 2019ರಲ್ಲಿ ಪ್ರಾರಂಭವಾದ ನೇಮಕಾತಿ ಇನ್ನೂ ಏಕೆ ಪೂರ್ಣಗೊಂಡಿಲ್ಲ ಎಂಬುದನ್ನು ಸರ್ಕಾರವು ವಿವರಿಸಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿಗಳು ಎಲ್ಲದ್ದಕ್ಕೂ ನ್ಯಾಯಾಧೀಶರನ್ನು ದೂಷಿಸುವುದು ಸರಿಯೇ? ಸುಮಾರು ನಾಲ್ಕು ವರ್ಷಗಳಿಂದ ನೇಮಕಾತಿ ಪೂರ್ಣಗೊಳ್ಳದಿರುವುದು ಯಾರ ತಪ್ಪೆಂದು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...