Homeಮುಖಪುಟಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಹರ್ಯಾಣ ಸಿಎಂ

ಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಹರ್ಯಾಣ ಸಿಎಂ

- Advertisement -
- Advertisement -

ಹೈಕೋರ್ಟ್ ನ್ಯಾಯಾಧೀಶರ ಕುರಿತು ನೀಡಿದ್ದ ಹೇಳಿಕೆಯನ್ನು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸೋಮವಾರ ಹಿಂತೆಗೆದುಕೊಂಡಿದ್ದಾರೆ. ಅವರು ನೀಡಿದ್ದ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು.

ಭಿವಾನಿಯಲ್ಲಿ ಹಿಂದಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಖಟ್ಟರ್, “ಇದು ಅಸ್ವಾಭಾವಿಕ ಅಭಿಪ್ರಾಯ. ಈ ಹೇಳಿಕೆಯನ್ನು ನೀಡಬಾರದಿತ್ತು” ಎಂದಿದ್ದಾರೆ.

ಮೂರು ದಿನಗಳ ಪ್ರವಾಸವನ್ನು ಆರಂಭಿಸಿದ ಭಿವಾನಿಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಖಟ್ಟರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತು.

2019ರ ಹರಿಯಾಣ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಖಟ್ಟರ್‌, “ಆ ಸಮಸ್ಯೆ ಬಗೆಹರಿಯುತ್ತದೆ. ನ್ಯಾಯಾಧೀಶರಿದ್ದಾರೆ, ಅವರ ತಲೆಯಲ್ಲಿ ಕೆಲವು ಸಮಸ್ಯೆ ಇದೆ. ನಾವು ಅದನ್ನು ಸರಿಪಡಿಸುತ್ತೇವೆ. ನನಗೆ ಸಂಪೂರ್ಣ ವಿಷಯ ತಿಳಿದಿದೆ. ಮೂರು ಸಾವಿರ ಮಂದಿ ಈಗಾಗಲೇ ನೇಮಕವಾಗಿದ್ದಾರೆ. 5,000ದಲ್ಲಿ ಮೂರು ಸಾವಿರ ಸೇರಿದ್ದಾರೆ. ಇನ್ನುಳಿದ 2,000 ಮಂದಿ ಶೀಘ್ರದಲ್ಲೇ ನ್ಯಾಯಾಲಯದ ತೀರ್ಪು ಪಡೆಯುತ್ತಾರೆ” ಎಂದಿದ್ದರು. ಇದು ವೈರಲ್ ವಿಡಿಯೊದಲ್ಲಿ ಸೆರೆಯಾಗಿದೆ.

ಹರಿಯಾಣ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇಮಕಾತಿಗೆ ಸಂಬಂಧಿಸಿದ 2019ರ ಪ್ರಕರಣವನ್ನು ಉಲ್ಲೇಖಿಸಿ ಖಟ್ಟರ್‌ ಮಾತನಾಡಿದ್ದಾರೆಂದು ಮೂಲಗಳು ತಿಳಿಸಿವೆ. ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆಕ್ಷೇಪಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಭರ್ತಿ ಮಾಡಬೇಕಿದ್ದ 5,000 ಹುದ್ದೆಗಳ ಪೈಕಿ ಕನಿಷ್ಠ 833 ಅಭ್ಯರ್ಥಿಗಳ ಬಯೋಮೆಟ್ರಿಕ್‌ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹರಿಯಾಣ ಸಿಬ್ಬಂದಿ ಆಯ್ಕೆ ಆಯೋಗ ಹೇಳಿದೆ. ಹೈಕೋರ್ಟ್‌‌ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಆ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಖಟ್ಟರ್, “ನಾನು ನ್ಯಾಯಾಲಯಗಳನ್ನು ಗೌರವಿಸುತ್ತೇನೆ. ನ್ಯಾಯಾಲಯಗಳು ಏನೇ ತೀರ್ಪು ನೀಡಿದರೂ ಅದು ಅಂತಿಮ ತೀರ್ಪು ಎಂಬುದರಲ್ಲಿ ಸಂದೇಹವಿಲ್ಲ ಎಂದು ನಾನು ತಕ್ಷಣ ಹೇಳಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ವಿಷಯಗಳು ಮುಂದುವರಿಯುತ್ತವೆ. ಎಲ್ಲರೂ ಸಾರ್ವಜನಿಕ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಾರೆ. ವಿಪರೀತ ವಿಳಂಬಕ್ಕೆ ಸಂಬಂಧಿಸಿದ ಪ್ರಶ್ನೆ ಇದಾಗಿತ್ತು. ಪರೀಕ್ಷೆ ನಡೆಯಿತು, ಮತ್ತು ಫಲಿತಾಂಶವನ್ನು ಪ್ರಕಟಿಸಲಾಯಿತು, ಆದರೆ ತಡೆಯಾಜ್ಞೆ ವಿಧಿಸಲಾಯಿತು. ಹೀಗಾಗಿ, ಅಸ್ವಾಭಾವಿಕ ಅಭಿಪ್ರಾಯ ಹೊರಬಿದ್ದಿದೆ, ನಾನು ಈ ಹೇಳಿಕೆ ನೀಡಬಾರದಿತ್ತು ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

“ಒಂದು ವಿಷಯ ನಿರ್ದಿಷ್ಟ ನ್ಯಾಯಾಧೀಶರನ್ನು ತಲುಪಿದ್ದರೂ ಸಹ, ನಾನು ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ಆದರೆ, ಈ ವಿಳಂಬದಿಂದ ಸಾವಿರಾರು ಜನರು ತೊಂದರೆಗೀಡಾಗಿದ್ದಾರೆ. ಅವರ ತರಬೇತಿಗೆ ಸಾಕಷ್ಟು ಸಮಯ ಸಿಗುತ್ತಿಲ್ಲ. ನಿನ್ನೆಯ ಸಾರ್ವಜನಿಕ ಸಭೆಗೆ, ತಮ್ಮ ಕೆಲಸಕ್ಕೆ ಸೇರಲು ಸಾಧ್ಯವಾಗದ ಅಂತಹ ಜನರೆಲ್ಲರೂ ಬಂದಿದ್ದರು. ಹೀಗಾಗಿ, ಅಸ್ವಾಭಾವಿಕ ಹೇಳಿಕೆ ನೀಡಲಾಯಿತು. ಅದಕ್ಕಾಗಿ ನಾನು ವಿಷಾದಿಸುತ್ತೇನೆ” ಎಂದು ಕಟ್ಟರ್‌ ಸ್ಪಷ್ಟಪಡಿಸಿದ್ದಾರೆ.

ಖಟ್ಟರ್ ಅವರ ವೀಡಿಯೊ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಕಾಂಗ್ರೆಸ್ ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯಿಸಿ, “ಇದು ನ್ಯಾಯಾಂಗದ ಮೇಲಿನ ನೇರ ದಾಳಿ” ಎಂದು ಟೀಕಿಸಿದರು.

ಖಟ್ಟರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, “ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ), ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಈ ವಿಷಯವನ್ನು ಅರಿತುಕೊಳ್ಳಬೇಕು. ಹರಿಯಾಣ ಮುಖ್ಯಮಂತ್ರಿಗೆ ನಿಂದನೆ ನೋಟಿಸ್ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ಆಯೋಗವು 833 ಅಭ್ಯರ್ಥಿಗಳ ಬಯೋಮೆಟ್ರಿಕ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಅಧ್ಯಕ್ಷರು ಒಪ್ಪಿಕೊಳ್ಳುತ್ತಿದ್ದಾರೆ. ಅಲ್ಲದೆ, ಜೂನ್ 2019ರಲ್ಲಿ ಪ್ರಾರಂಭವಾದ ನೇಮಕಾತಿ ಇನ್ನೂ ಏಕೆ ಪೂರ್ಣಗೊಂಡಿಲ್ಲ ಎಂಬುದನ್ನು ಸರ್ಕಾರವು ವಿವರಿಸಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿಗಳು ಎಲ್ಲದ್ದಕ್ಕೂ ನ್ಯಾಯಾಧೀಶರನ್ನು ದೂಷಿಸುವುದು ಸರಿಯೇ? ಸುಮಾರು ನಾಲ್ಕು ವರ್ಷಗಳಿಂದ ನೇಮಕಾತಿ ಪೂರ್ಣಗೊಳ್ಳದಿರುವುದು ಯಾರ ತಪ್ಪೆಂದು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...