Homeಮುಖಪುಟಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

- Advertisement -
- Advertisement -

ಸೋಮವಾರ ಹರಿಯಾಣ ರಾಜ್ಯದ ಮುಸ್ಲಿಂ ಪ್ರಾಬಲ್ಯದ ನುಹ್ ಜಿಲ್ಲೆಯಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಪ್ರದೇಶದಲ್ಲಿ ಆರಂಭವಾದ ಹಿಂಸಾಚಾರ ಮುಂದುವರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತಾದ ಪೋಸ್ಟ್‌ಗಳು ಹರಿದಾಡುತ್ತಿರುವುದು ಹಿಂಸಾಚಾರದ ಪ್ರಚೋದನೆಗೆ ಕಾರಣವಾಗಿದೆ.

ಹರಿಯಾಣದಲ್ಲಿ ಭುಗಿಲೆದ್ದಿರುವ ಕೋಮುಗಲಭೆ ದೆಹಲಿಗೂ ವ್ಯಾಪಿಸುವ ಭೀತಿ ಎದುರಾಗಿದೆ. ಗುರುಗ್ರಾಮದ ಸಕ್ಕರೆ 70ರಲ್ಲಿ ಹಲವು ಅಂಗಡಿ ಹಾಗೂ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿದೆ ಗಲಭೆ ನಿಯಂತ್ರಿಸಲು ಪೆಟ್ರೋಲ್ ಹಾಗೂ ಡೀಸೆಲ್ ಚಿಲ್ಲರೆ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ವೇಳೆ ಸೋಮವಾರ ಪ್ರಾರಂಭವಾದ ಘರ್ಷಣೆಯು ಮಂಗಳವಾರ ಹೊತ್ತಿಗೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತು. ಗುರುಗ್ರಾಮದ ಸೆಕ್ಕರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಸಿಟ್ಟರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

ಹರಿಯಾಣದ ಕೋಮು ಸಂಘರ್ಷದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಬೆಂಬಲಿಗರು ಹರ್ಯಾಣದಲ್ಲಿ ನಡೆದ ಕೋಮು ಹಿಂಸಾಚಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರಣ, ಯಾವುದೇ ಹಿಂಸಾಚಾರ ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನೆಗಳ ಬಿಗಿ ಭದ್ರತೆ ಮತ್ತು ಸಿಸಿಟಿವಿ ಕಣ್ಗಾವಲು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ.

ಈ ಪ್ರತಿಭಟನೆಗಳಲ್ಲಿ ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಅರೆಸೇನಾ ಪಡೆಗಳ ಸಿಬ್ಬಂದಿ ಸೇರಿದಂತೆ ಸಾಕಷ್ಟು ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

”ದಯವಿಟ್ಟು ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಖಚಿತಪಡಿಸಿಕೊಳ್ಳಿ. ಸಿಸಿಟಿವಿಗಳನ್ನು ನಿಯೋಜಿಸಿ ಇದರಿಂದ ಎಲ್ಲವೂ ರೆಕಾರ್ಡ್ ಆಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಮನೆಯಿಂದಲೇ ಕೆಲಸ ಮಾಡುವಂತೆ ಬಹುರಾಷ್ಟ್ರೀಯ ಕಂಪನಿ ಅಮೆರಿಕನ್ ಎಕ್ಸ್‌ಪ್ರೆಸ್ ಹಾಗೂ ಕೆಪಿಎಂಜಿ ತನ್ನ ಉದ್ಯೋಗಿಗಳಿಗೆ ತಿಳಿಸಿದೆ. ಗುರುಗ್ರಾಮದ ಗಡಿ ಪ್ರದೇಶದ ಸೊಕ್ಕಾದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ದೊಡ್ ಮೂಲಕ ಸಲಕ, ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ:

ಕಳೆದ ವರ್ಷ ಇಬ್ಬರು ಮುಸ್ಲಿಂ ಜಾನುವಾರು ವ್ಯಾಪಾರಿಗಳ ಹತ್ಯೆಯ ಆರೋಪಿ ಸ್ವಯಂಘೋಷಿತ ‘ಗೋ ರಕ್ಷಕ’ ಅಥವಾ ಗೋರಕ್ಷಕ ಮೋನು ಮಾನೇಸರ್ ಎನ್ನುವವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊ ಪ್ರಸ್ತುತ ನಡೆಯುತ್ತಿರುವ ಘರ್ಷಣೆಗಳಿಗೆ ಭಾಗಶಃ ಕಾರಣವಾಗಿವೆ. ಮನೇಸರ್ ಅವರ ವೀಡಿಯೊದಲ್ಲಿ ಅವರು ಈ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶವನ್ನು ಘೋಷಿಸಿದರು ಮತ್ತು ಇತರರನ್ನು ತನ್ನೊಂದಿಗೆ ಸೇರುವಂತೆ ಕರೆ ಕೊಟ್ಟಿದ್ದಾರೆ. ಇದು ಮುಸ್ಲಿಂ ಸಮುದಾಯವನ್ನು ಕೆರಳಿಸಿತು, ಕೆಲವರು ಮನೇಸರ್‌ಗೆ ಪ್ರತಿಯಾಗಿ ಸವಾಲು ಮತ್ತು ಬೆದರಿಕೆ ಹಾಕಿದರು.

ಮಾನೇಸರ್ ಅಂತಿಮವಾಗಿ ಕಾರ್ಯಕ್ರಮಕ್ಕೆ ಹಾಜರಾಗದಿದ್ದರೂ, ಅವರ ಪೋಸ್ಟ್ ಮಾತ್ರ ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ.

ಈ ಬಗ್ಗೆ ನುಹ್‌ನ ಶಾಸಕ ಚೌಧರಿ ಅಫ್ತಾಬ್ ಅಹ್ಮದ್ ಎನ್‌ಡಿಟಿವಿ ಜೊತೆ ಮಾತನಾಡಿದ್ದು, ”ಇದು ಆಡಳಿತದ ವೈಫಲ್ಯ. ವಾತಾವರಣವು ಉದ್ವಿಗ್ನಗೊಳ್ಳುವ ಮೊದಲು ನಾವು ಅಧಿಕಾರಿಗಳ ಬಳಿಗೆ ಹೋಗಿ ಅದು ಉಲ್ಬಣಗೊಳ್ಳುವ ಮೊದಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೂಕ್ತ ಸಮಯದಲ್ಲಿ  ಕ್ರಮ ಕೈಗೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಮೋನು ಮನೇಸರ್ ಇಲ್ಲಿದ್ದಾರೆ ಎಂಬ ವದಂತಿಯೂ ಇದಕ್ಕೆ ಸೇರಿದೆ.

ನುಹ್ ಮತ್ತು ಗುರುಗ್ರಾಮ್ ಎರಡರಲ್ಲೂ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮಂಗಳವಾರ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ, ಶಾಂತವಾಗಿರುವಂತೆ ಮನವಿ ಮಾಡಿದರು. ಆದರೆ ಗುರುಗ್ರಾಮ್ ಅಶಾಂತಿಯ ಪರಿಸ್ಥಿತಿ ಮುಂದುವರೆದಿದೆ. ಕೋಮು ಗುಂಪುಗಳು ಬೀದಿಗಳಿದಿವೆ, ಸ್ಕ್ರ್ಯಾಪ್ ಅಂಗಡಿಗಳಿಗೆ ಬೆಂಕಿ ಹಚ್ಚಿವೆ ಮತ್ತು ಸಣ್ಣ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ಸೋಮವಾರ ಪ್ರಾರಂಭವಾದ ಘರ್ಷಣೆಯು ಮಂಗಳವಾರ ಹೊತ್ತಿಗೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತು. ಗುರುಗ್ರಾಮದ ಸೆಕ್ಕರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಸಿಟ್ಟರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

ಸೆಕ್ಸ‌ 57ರಲ್ಲಿರುವ ಅಂಜುಮನ್ ಮಸೀದಿಗೆ ಮಧ್ಯರಾತ್ರಿ ಗುಂಪು ತಲುಪಿದ್ದು, ಗುಂಪಿನಲ್ಲಿದ್ದವರು ಮಸೀದಿಗೆ ಬೆಂಕಿ ಹಚ್ಚಿದ್ದಾರೆ, ಗಲಭೆಯು ಬುಧವಾರ ಸೆಕ್ಕ‌ 70ರವರೆಗೂ ವ್ಯಾಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಗ್ರಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. 20 ಜನ ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ. ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಳ್ಳಲಿಲ್ಲ, ಮೋನು ಮಾನೇಸರ್‌ನನ್ನು ಇನ್ನೂ ಏಕೆ ಪತ್ತೆ ಮಾಡಿ ಬಂಧಿಸಲಾಗಿಲ್ಲ, ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ನಿರೀಕ್ಷಿಸಲು ಏಕೆ ವಿಫಲರಾದರು ಎಂಬ ಪ್ರಶ್ನೆಗಳು ಕಾಡುತ್ತಿವೆ.

ಗಲಭೆಯಲ್ಲಿ ಗಾಯಗೊಂಡ ಭಜರಂಗದಳದ 6 ಜನ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ ಎಂದು ವಿಶ್ವ ಹಿಂದು ಪರಿಷತ್‌ ಹೇಳಿದೆ. ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ ತನ್ಮಾರ್ ಅವರು ಮಾಹಿತಿ ನೀಡಿ, ನೂಹನಲ್ಲಿ ಸೋಮವಾರ ನಡೆದ ಗಲಭೆಯಲ್ಲಿ ಭಜರಂಗದಳದ ಕಾರ್ಯಕರ್ತ ಪ್ರದೀಪ್ ಶರ್ಮಾ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿ ಗಾಯಗೊಳಿಸಿತ್ತು. ಅವರನ್ನು ದೆಹಲಿಯ ಸಪದರ್ರಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ವದಂತಿಗಳನ್ನು ನಾಗರಿಕರು ನಂಬದಂತೆ ಪೊಲೀಸರು ಕೋರಿದ್ದಾರೆ ದೆಹಲಿಯಲ್ಲಿ ಶಾಲಾ, ಕಾಲೇಜು ಹಾಗೂ ಕಚೇರಿಗಳು ಮುಚ್ಚಲಾಗಿವೆ ಎಂಬ ವದಂತಿ ಸುಳ್ಳು, ಎಲ್ಲವೂ ಎಂದಿನಂತೆಯೇ ಇದೆ’ ಎಂದು ಗುರುಗ್ರಾಮದ ಸಹಾಯಕ ಪೊಲೀಸ್ ಆಯುಕ್ತ ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...