Homeಮುಖಪುಟಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

- Advertisement -
- Advertisement -

ಸೋಮವಾರ ಹರಿಯಾಣ ರಾಜ್ಯದ ಮುಸ್ಲಿಂ ಪ್ರಾಬಲ್ಯದ ನುಹ್ ಜಿಲ್ಲೆಯಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವಿನ ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಪ್ರದೇಶದಲ್ಲಿ ಆರಂಭವಾದ ಹಿಂಸಾಚಾರ ಮುಂದುವರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತಾದ ಪೋಸ್ಟ್‌ಗಳು ಹರಿದಾಡುತ್ತಿರುವುದು ಹಿಂಸಾಚಾರದ ಪ್ರಚೋದನೆಗೆ ಕಾರಣವಾಗಿದೆ.

ಹರಿಯಾಣದಲ್ಲಿ ಭುಗಿಲೆದ್ದಿರುವ ಕೋಮುಗಲಭೆ ದೆಹಲಿಗೂ ವ್ಯಾಪಿಸುವ ಭೀತಿ ಎದುರಾಗಿದೆ. ಗುರುಗ್ರಾಮದ ಸಕ್ಕರೆ 70ರಲ್ಲಿ ಹಲವು ಅಂಗಡಿ ಹಾಗೂ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿದೆ ಗಲಭೆ ನಿಯಂತ್ರಿಸಲು ಪೆಟ್ರೋಲ್ ಹಾಗೂ ಡೀಸೆಲ್ ಚಿಲ್ಲರೆ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ವೇಳೆ ಸೋಮವಾರ ಪ್ರಾರಂಭವಾದ ಘರ್ಷಣೆಯು ಮಂಗಳವಾರ ಹೊತ್ತಿಗೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತು. ಗುರುಗ್ರಾಮದ ಸೆಕ್ಕರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಸಿಟ್ಟರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

ಹರಿಯಾಣದ ಕೋಮು ಸಂಘರ್ಷದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಬೆಂಬಲಿಗರು ಹರ್ಯಾಣದಲ್ಲಿ ನಡೆದ ಕೋಮು ಹಿಂಸಾಚಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರಣ, ಯಾವುದೇ ಹಿಂಸಾಚಾರ ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನೆಗಳ ಬಿಗಿ ಭದ್ರತೆ ಮತ್ತು ಸಿಸಿಟಿವಿ ಕಣ್ಗಾವಲು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ.

ಈ ಪ್ರತಿಭಟನೆಗಳಲ್ಲಿ ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಅರೆಸೇನಾ ಪಡೆಗಳ ಸಿಬ್ಬಂದಿ ಸೇರಿದಂತೆ ಸಾಕಷ್ಟು ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

”ದಯವಿಟ್ಟು ಯಾವುದೇ ಹಿಂಸಾಚಾರ ಮತ್ತು ದ್ವೇಷದ ಭಾಷಣಗಳು ನಡೆಯದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಖಚಿತಪಡಿಸಿಕೊಳ್ಳಿ. ಸಿಸಿಟಿವಿಗಳನ್ನು ನಿಯೋಜಿಸಿ ಇದರಿಂದ ಎಲ್ಲವೂ ರೆಕಾರ್ಡ್ ಆಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಮನೆಯಿಂದಲೇ ಕೆಲಸ ಮಾಡುವಂತೆ ಬಹುರಾಷ್ಟ್ರೀಯ ಕಂಪನಿ ಅಮೆರಿಕನ್ ಎಕ್ಸ್‌ಪ್ರೆಸ್ ಹಾಗೂ ಕೆಪಿಎಂಜಿ ತನ್ನ ಉದ್ಯೋಗಿಗಳಿಗೆ ತಿಳಿಸಿದೆ. ಗುರುಗ್ರಾಮದ ಗಡಿ ಪ್ರದೇಶದ ಸೊಕ್ಕಾದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ದೊಡ್ ಮೂಲಕ ಸಲಕ, ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ:

ಕಳೆದ ವರ್ಷ ಇಬ್ಬರು ಮುಸ್ಲಿಂ ಜಾನುವಾರು ವ್ಯಾಪಾರಿಗಳ ಹತ್ಯೆಯ ಆರೋಪಿ ಸ್ವಯಂಘೋಷಿತ ‘ಗೋ ರಕ್ಷಕ’ ಅಥವಾ ಗೋರಕ್ಷಕ ಮೋನು ಮಾನೇಸರ್ ಎನ್ನುವವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊ ಪ್ರಸ್ತುತ ನಡೆಯುತ್ತಿರುವ ಘರ್ಷಣೆಗಳಿಗೆ ಭಾಗಶಃ ಕಾರಣವಾಗಿವೆ. ಮನೇಸರ್ ಅವರ ವೀಡಿಯೊದಲ್ಲಿ ಅವರು ಈ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶವನ್ನು ಘೋಷಿಸಿದರು ಮತ್ತು ಇತರರನ್ನು ತನ್ನೊಂದಿಗೆ ಸೇರುವಂತೆ ಕರೆ ಕೊಟ್ಟಿದ್ದಾರೆ. ಇದು ಮುಸ್ಲಿಂ ಸಮುದಾಯವನ್ನು ಕೆರಳಿಸಿತು, ಕೆಲವರು ಮನೇಸರ್‌ಗೆ ಪ್ರತಿಯಾಗಿ ಸವಾಲು ಮತ್ತು ಬೆದರಿಕೆ ಹಾಕಿದರು.

ಮಾನೇಸರ್ ಅಂತಿಮವಾಗಿ ಕಾರ್ಯಕ್ರಮಕ್ಕೆ ಹಾಜರಾಗದಿದ್ದರೂ, ಅವರ ಪೋಸ್ಟ್ ಮಾತ್ರ ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ.

ಈ ಬಗ್ಗೆ ನುಹ್‌ನ ಶಾಸಕ ಚೌಧರಿ ಅಫ್ತಾಬ್ ಅಹ್ಮದ್ ಎನ್‌ಡಿಟಿವಿ ಜೊತೆ ಮಾತನಾಡಿದ್ದು, ”ಇದು ಆಡಳಿತದ ವೈಫಲ್ಯ. ವಾತಾವರಣವು ಉದ್ವಿಗ್ನಗೊಳ್ಳುವ ಮೊದಲು ನಾವು ಅಧಿಕಾರಿಗಳ ಬಳಿಗೆ ಹೋಗಿ ಅದು ಉಲ್ಬಣಗೊಳ್ಳುವ ಮೊದಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಸೂಕ್ತ ಸಮಯದಲ್ಲಿ  ಕ್ರಮ ಕೈಗೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಮೋನು ಮನೇಸರ್ ಇಲ್ಲಿದ್ದಾರೆ ಎಂಬ ವದಂತಿಯೂ ಇದಕ್ಕೆ ಸೇರಿದೆ.

ನುಹ್ ಮತ್ತು ಗುರುಗ್ರಾಮ್ ಎರಡರಲ್ಲೂ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮಂಗಳವಾರ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ, ಶಾಂತವಾಗಿರುವಂತೆ ಮನವಿ ಮಾಡಿದರು. ಆದರೆ ಗುರುಗ್ರಾಮ್ ಅಶಾಂತಿಯ ಪರಿಸ್ಥಿತಿ ಮುಂದುವರೆದಿದೆ. ಕೋಮು ಗುಂಪುಗಳು ಬೀದಿಗಳಿದಿವೆ, ಸ್ಕ್ರ್ಯಾಪ್ ಅಂಗಡಿಗಳಿಗೆ ಬೆಂಕಿ ಹಚ್ಚಿವೆ ಮತ್ತು ಸಣ್ಣ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ಸೋಮವಾರ ಪ್ರಾರಂಭವಾದ ಘರ್ಷಣೆಯು ಮಂಗಳವಾರ ಹೊತ್ತಿಗೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತು. ಗುರುಗ್ರಾಮದ ಸೆಕ್ಕರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಸಿಟ್ಟರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

ಸೆಕ್ಸ‌ 57ರಲ್ಲಿರುವ ಅಂಜುಮನ್ ಮಸೀದಿಗೆ ಮಧ್ಯರಾತ್ರಿ ಗುಂಪು ತಲುಪಿದ್ದು, ಗುಂಪಿನಲ್ಲಿದ್ದವರು ಮಸೀದಿಗೆ ಬೆಂಕಿ ಹಚ್ಚಿದ್ದಾರೆ, ಗಲಭೆಯು ಬುಧವಾರ ಸೆಕ್ಕ‌ 70ರವರೆಗೂ ವ್ಯಾಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಗ್ರಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. 20 ಜನ ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ. ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಳ್ಳಲಿಲ್ಲ, ಮೋನು ಮಾನೇಸರ್‌ನನ್ನು ಇನ್ನೂ ಏಕೆ ಪತ್ತೆ ಮಾಡಿ ಬಂಧಿಸಲಾಗಿಲ್ಲ, ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ನಿರೀಕ್ಷಿಸಲು ಏಕೆ ವಿಫಲರಾದರು ಎಂಬ ಪ್ರಶ್ನೆಗಳು ಕಾಡುತ್ತಿವೆ.

ಗಲಭೆಯಲ್ಲಿ ಗಾಯಗೊಂಡ ಭಜರಂಗದಳದ 6 ಜನ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ ಎಂದು ವಿಶ್ವ ಹಿಂದು ಪರಿಷತ್‌ ಹೇಳಿದೆ. ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ ತನ್ಮಾರ್ ಅವರು ಮಾಹಿತಿ ನೀಡಿ, ನೂಹನಲ್ಲಿ ಸೋಮವಾರ ನಡೆದ ಗಲಭೆಯಲ್ಲಿ ಭಜರಂಗದಳದ ಕಾರ್ಯಕರ್ತ ಪ್ರದೀಪ್ ಶರ್ಮಾ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿ ಗಾಯಗೊಳಿಸಿತ್ತು. ಅವರನ್ನು ದೆಹಲಿಯ ಸಪದರ್ರಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ವದಂತಿಗಳನ್ನು ನಾಗರಿಕರು ನಂಬದಂತೆ ಪೊಲೀಸರು ಕೋರಿದ್ದಾರೆ ದೆಹಲಿಯಲ್ಲಿ ಶಾಲಾ, ಕಾಲೇಜು ಹಾಗೂ ಕಚೇರಿಗಳು ಮುಚ್ಚಲಾಗಿವೆ ಎಂಬ ವದಂತಿ ಸುಳ್ಳು, ಎಲ್ಲವೂ ಎಂದಿನಂತೆಯೇ ಇದೆ’ ಎಂದು ಗುರುಗ್ರಾಮದ ಸಹಾಯಕ ಪೊಲೀಸ್ ಆಯುಕ್ತ ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...