Homeಮುಖಪುಟರೈತರ ‘ದಿಲ್ಲಿ ಚಲೋ': 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 13ರಂದು ರೈತರು ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200ಕ್ಕೂ ಹೆಚ್ಚು ರೈತ ಸಂಘಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದೆ. ಮಂಗಳವಾರ ದೆಹಲಿಗೆ ಸಾವಿರಾರು ರೈತರು ನಡೆಸಲಿರುವ ಮೆರವಣಿಗೆಗೆ ಮುನ್ನ ಹರಿಯಾಣ ಸರಕಾರ ಎರಡು ದೊಡ್ಡ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳನ್ನಾಗಿ ಪರಿವರ್ತಿಸಿದೆ.

ಸಿರ್ಸಾದ ಚೌಧರಿ ದಲ್ಬೀರ್ ಸಿಂಗ್ ಒಳಾಂಗಣ ಕ್ರೀಡಾಂಗಣ ಮತ್ತು ದಬ್ವಾಲಿಯ ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣಗಳನ್ನು ತಾತ್ಕಾಲಿಕ ಬಂಧನ ಕೇಂದ್ರಗಳನ್ನಾಗಿ ಮಾಡಿದ ಹರ್ಯಾಣದ ಬಿಜೆಪಿ ಸರಕಾರ ರೈತರು ಮೆರವಣಿಗೆಯನ್ನು ಮುಂದುವರೆಸಿದರೆ ಬಂಧಿಸಲು ಮುಂದಾಗಿದೆ. ಯಾವುದೇ ಅಹಿತಕರ ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂಧಿತ ರೈತರನ್ನು ತಾತ್ಕಾಲಿಕ ಜೈಲುಗಳಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ವಿವಿಧ ಭಾಗಗಳ ರೈತರು ಕೇಂದ್ರ ಸರ್ಕಾರದ ವಿರುದ್ದ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದು, ರೈತರು ರಾಜಧಾನಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ರಸ್ತೆಗಳನ್ನೇ ಮುಚ್ಚಿದ್ದಾರೆ. ಅಧಿಕಾರಿಗಳು ಅನೇಕ ಸ್ಥಳಗಳಲ್ಲಿ ಕಾಂಕ್ರೀಟ್ ಬ್ಲಾಕ್‌ಗಳಿಂದ ಗಡಿಗಳನ್ನು ಮುಚ್ಚಿದ್ದಾರೆ, ಅಂತರಾಜ್ಯ ಗಡಿಯಲ್ಲಿ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಯಾಣ ಪೊಲೀಸರು ಅಂಬಾಲಾದ ಘಗ್ಗರ್ ನದಿಯ ಹೆದ್ದಾರಿಯ ಎರಡೂ ಬದಿಗಳನ್ನು ಮುಚ್ಚಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಅಳವಡಿಸಿದ್ದಾರೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹೆದ್ದಾರಿಗೆ ಬರುವುದನ್ನು ತಡೆಯಲು ಘಗ್ಗರ್ ನದಿಯ ಬದಿಯನ್ನು ಅಗೆದು ಹೊಂಡ ನಿರ್ಮಿಸಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧದ 2020ರ ಪ್ರತಿಭಟನೆಯನ್ನು ಉಲ್ಲೇಖಿಸಿ ಹರ್ಯಾಣ ಮತ್ತು ದೆಹಲಿಯ ಅಧಿಕಾರಿಗಳು ನಿರ್ಬಂಧಗಳನ್ನು ಸಮರ್ಥಿಸಿಕೊಂಡಿದ್ದಾರೆ. ರೈತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ಗಡಿಗಳನ್ನು ನಿರ್ಬಂಧಿಸುವ ಕ್ರಮವು ವಿರೋಧ ಪಕ್ಷಗಳು ಮತ್ತು ರೈತ ಗುಂಪುಗಳಿಂದ ಟೀಕೆಗೆ ಗುರಿಯಾಗಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ರಾಜ್ಯದ ಗಡಿಗಳಲ್ಲಿ ರಸ್ತೆಗೆ  ತಡೆಗೋಡೆಗಳನ್ನು ಹಾಕಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರೈತರ ಹಾದಿಯಲ್ಲಿ ಮೊಳೆ-ಮುಳ್ಳುಗಳನ್ನು ಹಾಕುವುದು ‘ಅಮೃತಕಾಲ’ ಅಥವಾ ‘ಅನ್ಯಾಯಕಾಲವೇ? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ದೆಹಲಿ ಮತ್ತು ಹರ್ಯಾಣವನ್ನು ಪ್ರವೇಶಿಸುವ ರಸ್ತೆಗಳನ್ನು ಭಾರತ-ಪಾಕಿಸ್ತಾನ ನಿಯಂತ್ರಣ ರೇಖೆಗೆ (ಎಲ್‌ಒಸಿ) ಹೋಲಿಸಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಿ ಅವರ ನಿಜವಾದ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ, ಪಾಕಿಸ್ತಾನದ ಗಡಿಯಲ್ಲಿರುವಂತೆ ದೆಹಲಿಗೆ ಹೋಗುವ ರಸ್ತೆಗಳಲ್ಲಿ ಅನೇಕ ತಂತಿಗಳನ್ನು ಹಾಕಲಾಗಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ (SKM) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್, ರಸ್ತೆಗಳ ತಡೆ ನಡೆಸಿರುವುದನ್ನು ಖಂಡಿಸಿದ್ದಾರೆ. ಸರ್ಕಾರವೇಕೆ ಹೆದರುತ್ತಿದೆ? ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಇದು ಪ್ರಜಾಪ್ರಭುತ್ವವೇ? ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕೆ ಖಟ್ಟರ್ ಸರ್ಕಾರವೇ ಹೊಣೆ ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಹರ್ಯಾಣವು ಅಂಬಾಲಾ ಬಳಿಯ ಶಂಭು ಎಂಬಲ್ಲಿ ಪಂಜಾಬ್‌ನ ಗಡಿಯನ್ನು ಮುಚ್ಚಿದೆ. ಮೆರವಣಿಗೆಯನ್ನು ತಡೆಯಲು ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳ ಗಡಿಯಲ್ಲಿ ದೊಡ್ಡ ವ್ಯವಸ್ಥೆ ಮಾಡಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 13ರ ಮಧ್ಯಾಹ್ನದವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು, ಮೆಸೇಜ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

2020ರಲ್ಲಿ ಕೇಂದ್ರದ 3 ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ವೇಳೆ ಪಂಜಾಬ್ ಮತ್ತು ಅಂಬಾಲಾದ ಹತ್ತಿರದ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಶಂಭು ಗಡಿಯಲ್ಲಿ ಜಮಾಯಿಸಿದ್ದರು ಮತ್ತು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಮುರಿದು ದೆಹಲಿಯತ್ತ ಮೆರವಣಿಗೆ ಸಾಗಿದ್ದರು. ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದ ರೈತರು, ದೆಹಲಿಯ ಗಡಿ ಭಾಗವಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಧರಣಿ ನಡೆಸಿದ್ದರು. ಬಳಿಕ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರು ಕೃಷಿ ಕಾಯ್ದೆಯನ್ನು ವಾಪಾಸ್ಸು ಪಡೆದುಕೊಂಡಿತ್ತು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...