Homeಮುಖಪುಟರೈತರ ‘ದಿಲ್ಲಿ ಚಲೋ': 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 13ರಂದು ರೈತರು ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200ಕ್ಕೂ ಹೆಚ್ಚು ರೈತ ಸಂಘಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದೆ. ಮಂಗಳವಾರ ದೆಹಲಿಗೆ ಸಾವಿರಾರು ರೈತರು ನಡೆಸಲಿರುವ ಮೆರವಣಿಗೆಗೆ ಮುನ್ನ ಹರಿಯಾಣ ಸರಕಾರ ಎರಡು ದೊಡ್ಡ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳನ್ನಾಗಿ ಪರಿವರ್ತಿಸಿದೆ.

ಸಿರ್ಸಾದ ಚೌಧರಿ ದಲ್ಬೀರ್ ಸಿಂಗ್ ಒಳಾಂಗಣ ಕ್ರೀಡಾಂಗಣ ಮತ್ತು ದಬ್ವಾಲಿಯ ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣಗಳನ್ನು ತಾತ್ಕಾಲಿಕ ಬಂಧನ ಕೇಂದ್ರಗಳನ್ನಾಗಿ ಮಾಡಿದ ಹರ್ಯಾಣದ ಬಿಜೆಪಿ ಸರಕಾರ ರೈತರು ಮೆರವಣಿಗೆಯನ್ನು ಮುಂದುವರೆಸಿದರೆ ಬಂಧಿಸಲು ಮುಂದಾಗಿದೆ. ಯಾವುದೇ ಅಹಿತಕರ ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂಧಿತ ರೈತರನ್ನು ತಾತ್ಕಾಲಿಕ ಜೈಲುಗಳಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ವಿವಿಧ ಭಾಗಗಳ ರೈತರು ಕೇಂದ್ರ ಸರ್ಕಾರದ ವಿರುದ್ದ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದು, ರೈತರು ರಾಜಧಾನಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ರಸ್ತೆಗಳನ್ನೇ ಮುಚ್ಚಿದ್ದಾರೆ. ಅಧಿಕಾರಿಗಳು ಅನೇಕ ಸ್ಥಳಗಳಲ್ಲಿ ಕಾಂಕ್ರೀಟ್ ಬ್ಲಾಕ್‌ಗಳಿಂದ ಗಡಿಗಳನ್ನು ಮುಚ್ಚಿದ್ದಾರೆ, ಅಂತರಾಜ್ಯ ಗಡಿಯಲ್ಲಿ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಯಾಣ ಪೊಲೀಸರು ಅಂಬಾಲಾದ ಘಗ್ಗರ್ ನದಿಯ ಹೆದ್ದಾರಿಯ ಎರಡೂ ಬದಿಗಳನ್ನು ಮುಚ್ಚಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಅಳವಡಿಸಿದ್ದಾರೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹೆದ್ದಾರಿಗೆ ಬರುವುದನ್ನು ತಡೆಯಲು ಘಗ್ಗರ್ ನದಿಯ ಬದಿಯನ್ನು ಅಗೆದು ಹೊಂಡ ನಿರ್ಮಿಸಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧದ 2020ರ ಪ್ರತಿಭಟನೆಯನ್ನು ಉಲ್ಲೇಖಿಸಿ ಹರ್ಯಾಣ ಮತ್ತು ದೆಹಲಿಯ ಅಧಿಕಾರಿಗಳು ನಿರ್ಬಂಧಗಳನ್ನು ಸಮರ್ಥಿಸಿಕೊಂಡಿದ್ದಾರೆ. ರೈತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ಗಡಿಗಳನ್ನು ನಿರ್ಬಂಧಿಸುವ ಕ್ರಮವು ವಿರೋಧ ಪಕ್ಷಗಳು ಮತ್ತು ರೈತ ಗುಂಪುಗಳಿಂದ ಟೀಕೆಗೆ ಗುರಿಯಾಗಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ರಾಜ್ಯದ ಗಡಿಗಳಲ್ಲಿ ರಸ್ತೆಗೆ  ತಡೆಗೋಡೆಗಳನ್ನು ಹಾಕಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರೈತರ ಹಾದಿಯಲ್ಲಿ ಮೊಳೆ-ಮುಳ್ಳುಗಳನ್ನು ಹಾಕುವುದು ‘ಅಮೃತಕಾಲ’ ಅಥವಾ ‘ಅನ್ಯಾಯಕಾಲವೇ? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ದೆಹಲಿ ಮತ್ತು ಹರ್ಯಾಣವನ್ನು ಪ್ರವೇಶಿಸುವ ರಸ್ತೆಗಳನ್ನು ಭಾರತ-ಪಾಕಿಸ್ತಾನ ನಿಯಂತ್ರಣ ರೇಖೆಗೆ (ಎಲ್‌ಒಸಿ) ಹೋಲಿಸಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಿ ಅವರ ನಿಜವಾದ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ, ಪಾಕಿಸ್ತಾನದ ಗಡಿಯಲ್ಲಿರುವಂತೆ ದೆಹಲಿಗೆ ಹೋಗುವ ರಸ್ತೆಗಳಲ್ಲಿ ಅನೇಕ ತಂತಿಗಳನ್ನು ಹಾಕಲಾಗಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ (SKM) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್, ರಸ್ತೆಗಳ ತಡೆ ನಡೆಸಿರುವುದನ್ನು ಖಂಡಿಸಿದ್ದಾರೆ. ಸರ್ಕಾರವೇಕೆ ಹೆದರುತ್ತಿದೆ? ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಇದು ಪ್ರಜಾಪ್ರಭುತ್ವವೇ? ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕೆ ಖಟ್ಟರ್ ಸರ್ಕಾರವೇ ಹೊಣೆ ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಹರ್ಯಾಣವು ಅಂಬಾಲಾ ಬಳಿಯ ಶಂಭು ಎಂಬಲ್ಲಿ ಪಂಜಾಬ್‌ನ ಗಡಿಯನ್ನು ಮುಚ್ಚಿದೆ. ಮೆರವಣಿಗೆಯನ್ನು ತಡೆಯಲು ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳ ಗಡಿಯಲ್ಲಿ ದೊಡ್ಡ ವ್ಯವಸ್ಥೆ ಮಾಡಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 13ರ ಮಧ್ಯಾಹ್ನದವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು, ಮೆಸೇಜ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

2020ರಲ್ಲಿ ಕೇಂದ್ರದ 3 ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ವೇಳೆ ಪಂಜಾಬ್ ಮತ್ತು ಅಂಬಾಲಾದ ಹತ್ತಿರದ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಶಂಭು ಗಡಿಯಲ್ಲಿ ಜಮಾಯಿಸಿದ್ದರು ಮತ್ತು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಮುರಿದು ದೆಹಲಿಯತ್ತ ಮೆರವಣಿಗೆ ಸಾಗಿದ್ದರು. ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದ ರೈತರು, ದೆಹಲಿಯ ಗಡಿ ಭಾಗವಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಧರಣಿ ನಡೆಸಿದ್ದರು. ಬಳಿಕ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರು ಕೃಷಿ ಕಾಯ್ದೆಯನ್ನು ವಾಪಾಸ್ಸು ಪಡೆದುಕೊಂಡಿತ್ತು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...