Homeಮುಖಪುಟರೈತರ ‘ದಿಲ್ಲಿ ಚಲೋ': 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 13ರಂದು ರೈತರು ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200ಕ್ಕೂ ಹೆಚ್ಚು ರೈತ ಸಂಘಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದೆ. ಮಂಗಳವಾರ ದೆಹಲಿಗೆ ಸಾವಿರಾರು ರೈತರು ನಡೆಸಲಿರುವ ಮೆರವಣಿಗೆಗೆ ಮುನ್ನ ಹರಿಯಾಣ ಸರಕಾರ ಎರಡು ದೊಡ್ಡ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳನ್ನಾಗಿ ಪರಿವರ್ತಿಸಿದೆ.

ಸಿರ್ಸಾದ ಚೌಧರಿ ದಲ್ಬೀರ್ ಸಿಂಗ್ ಒಳಾಂಗಣ ಕ್ರೀಡಾಂಗಣ ಮತ್ತು ದಬ್ವಾಲಿಯ ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣಗಳನ್ನು ತಾತ್ಕಾಲಿಕ ಬಂಧನ ಕೇಂದ್ರಗಳನ್ನಾಗಿ ಮಾಡಿದ ಹರ್ಯಾಣದ ಬಿಜೆಪಿ ಸರಕಾರ ರೈತರು ಮೆರವಣಿಗೆಯನ್ನು ಮುಂದುವರೆಸಿದರೆ ಬಂಧಿಸಲು ಮುಂದಾಗಿದೆ. ಯಾವುದೇ ಅಹಿತಕರ ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂಧಿತ ರೈತರನ್ನು ತಾತ್ಕಾಲಿಕ ಜೈಲುಗಳಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ವಿವಿಧ ಭಾಗಗಳ ರೈತರು ಕೇಂದ್ರ ಸರ್ಕಾರದ ವಿರುದ್ದ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದು, ರೈತರು ರಾಜಧಾನಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ರಸ್ತೆಗಳನ್ನೇ ಮುಚ್ಚಿದ್ದಾರೆ. ಅಧಿಕಾರಿಗಳು ಅನೇಕ ಸ್ಥಳಗಳಲ್ಲಿ ಕಾಂಕ್ರೀಟ್ ಬ್ಲಾಕ್‌ಗಳಿಂದ ಗಡಿಗಳನ್ನು ಮುಚ್ಚಿದ್ದಾರೆ, ಅಂತರಾಜ್ಯ ಗಡಿಯಲ್ಲಿ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಯಾಣ ಪೊಲೀಸರು ಅಂಬಾಲಾದ ಘಗ್ಗರ್ ನದಿಯ ಹೆದ್ದಾರಿಯ ಎರಡೂ ಬದಿಗಳನ್ನು ಮುಚ್ಚಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಅಳವಡಿಸಿದ್ದಾರೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹೆದ್ದಾರಿಗೆ ಬರುವುದನ್ನು ತಡೆಯಲು ಘಗ್ಗರ್ ನದಿಯ ಬದಿಯನ್ನು ಅಗೆದು ಹೊಂಡ ನಿರ್ಮಿಸಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧದ 2020ರ ಪ್ರತಿಭಟನೆಯನ್ನು ಉಲ್ಲೇಖಿಸಿ ಹರ್ಯಾಣ ಮತ್ತು ದೆಹಲಿಯ ಅಧಿಕಾರಿಗಳು ನಿರ್ಬಂಧಗಳನ್ನು ಸಮರ್ಥಿಸಿಕೊಂಡಿದ್ದಾರೆ. ರೈತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ಗಡಿಗಳನ್ನು ನಿರ್ಬಂಧಿಸುವ ಕ್ರಮವು ವಿರೋಧ ಪಕ್ಷಗಳು ಮತ್ತು ರೈತ ಗುಂಪುಗಳಿಂದ ಟೀಕೆಗೆ ಗುರಿಯಾಗಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ರಾಜ್ಯದ ಗಡಿಗಳಲ್ಲಿ ರಸ್ತೆಗೆ  ತಡೆಗೋಡೆಗಳನ್ನು ಹಾಕಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರೈತರ ಹಾದಿಯಲ್ಲಿ ಮೊಳೆ-ಮುಳ್ಳುಗಳನ್ನು ಹಾಕುವುದು ‘ಅಮೃತಕಾಲ’ ಅಥವಾ ‘ಅನ್ಯಾಯಕಾಲವೇ? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ದೆಹಲಿ ಮತ್ತು ಹರ್ಯಾಣವನ್ನು ಪ್ರವೇಶಿಸುವ ರಸ್ತೆಗಳನ್ನು ಭಾರತ-ಪಾಕಿಸ್ತಾನ ನಿಯಂತ್ರಣ ರೇಖೆಗೆ (ಎಲ್‌ಒಸಿ) ಹೋಲಿಸಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಿ ಅವರ ನಿಜವಾದ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ, ಪಾಕಿಸ್ತಾನದ ಗಡಿಯಲ್ಲಿರುವಂತೆ ದೆಹಲಿಗೆ ಹೋಗುವ ರಸ್ತೆಗಳಲ್ಲಿ ಅನೇಕ ತಂತಿಗಳನ್ನು ಹಾಕಲಾಗಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ (SKM) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್, ರಸ್ತೆಗಳ ತಡೆ ನಡೆಸಿರುವುದನ್ನು ಖಂಡಿಸಿದ್ದಾರೆ. ಸರ್ಕಾರವೇಕೆ ಹೆದರುತ್ತಿದೆ? ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಇದು ಪ್ರಜಾಪ್ರಭುತ್ವವೇ? ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕೆ ಖಟ್ಟರ್ ಸರ್ಕಾರವೇ ಹೊಣೆ ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಹರ್ಯಾಣವು ಅಂಬಾಲಾ ಬಳಿಯ ಶಂಭು ಎಂಬಲ್ಲಿ ಪಂಜಾಬ್‌ನ ಗಡಿಯನ್ನು ಮುಚ್ಚಿದೆ. ಮೆರವಣಿಗೆಯನ್ನು ತಡೆಯಲು ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳ ಗಡಿಯಲ್ಲಿ ದೊಡ್ಡ ವ್ಯವಸ್ಥೆ ಮಾಡಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 13ರ ಮಧ್ಯಾಹ್ನದವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು, ಮೆಸೇಜ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

2020ರಲ್ಲಿ ಕೇಂದ್ರದ 3 ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ವೇಳೆ ಪಂಜಾಬ್ ಮತ್ತು ಅಂಬಾಲಾದ ಹತ್ತಿರದ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಶಂಭು ಗಡಿಯಲ್ಲಿ ಜಮಾಯಿಸಿದ್ದರು ಮತ್ತು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಮುರಿದು ದೆಹಲಿಯತ್ತ ಮೆರವಣಿಗೆ ಸಾಗಿದ್ದರು. ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದ ರೈತರು, ದೆಹಲಿಯ ಗಡಿ ಭಾಗವಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಧರಣಿ ನಡೆಸಿದ್ದರು. ಬಳಿಕ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರು ಕೃಷಿ ಕಾಯ್ದೆಯನ್ನು ವಾಪಾಸ್ಸು ಪಡೆದುಕೊಂಡಿತ್ತು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...