Homeಮುಖಪುಟಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರನ್ನು ತಡೆಯಲು ಹರಿಯಾಣ-ಪಂಜಾಬ್‌ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಣಾಮ ಗಡಿ ಪ್ರದೇಶ ಯುದ್ಧ ಭೂಮಿಯಂತಾಗಿದೆ.

ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಪಂಜಾಬ್‌ನ ಭೂ ಪ್ರದೇಶದೊಳಗೆ ನುಗ್ಗಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ನಮ್ಮ ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ 100ಕ್ಕೂ ಅಧಿಕ ಪ್ರತಿಭಟನಾ ನಿರತರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನ 12:30ರ ಸುಮಾರಿಗೆ ಪಂಜಾಬ್‌-ಹರಿಯಾಣ ಗಡಿಯಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳ ಬಳಿ ರೈತರು ತಲುಪಿದಾಗ ಪೊಲೀಸರು ಅಶ್ರುವಾಯು ಶೆಲ್ ದಾಳಿ ಆರಂಭಿಸಿದ್ದರು. ಅಪರಾಹ್ನ 2 ಗಂಟೆಯವರೆಗೆ ಶೆಲ್ ದಾಳಿ ಮುಂದುವರೆದಿತ್ತು. ಈ ವೇಳೆ ಪೊಲೀಸರುನ್ನು ಎದುರಿಸಲು ರೈತರು ಜಮೀನಿಗೆ ತೆರಳಿ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಸಂಜೆ 3:15ರ ಸುಮಾರಿಗೆ ಪೊಲೀಸರು ಮತ್ತೆ ಶೆಲ್ ದಾಳಿ ಪುನರಾರಂಭಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಪೊಲೀಸರು ಪಂಜಾಬ್‌ನ ಭೂ ಪ್ರದೇಶದ ಕೃಷಿ ಭೂಮಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಎದುರಿಸಲು ರೈತರು ಹುಲ್ಲಿಗೆ ಬೆಂಕಿ ಹಾಕಿದಷ್ಟೆ, ಅವರಿಗೆ ಬಹಳ ಹಿಂಸೆಯಾಗಿದೆ. ಕಳೆದ ಒಂದು ವಾರದಿಂದ ಅವರು ರೈತರಿಗೆ ಅದೇ ರೀತಿಯ ಹಿಂಸೆ ನೀಡುತ್ತಿದ್ದಾರೆ. ಪೊಲೀಸರು 12 ಬೋರ್ ಗನ್‌ಗಳಿಂದ ನಮ್ಮ ಮೇಲೆ ಗುಂಡು ಹಾರಿಸಿದ್ದಾರೆ. ನಾವು ರೈತರು, ಭಯೋತ್ಪಾದಕರಲ್ಲ” ಎಂದು ಪೊಲೀಸ್ ದಾಳಿಯಿಂದ ಗಾಯಗೊಂಡ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸರೋನ್ ಗ್ರಾಮದ ರೈತ ಜರ್ನೈಲ್ ಸಿಂಗ್ (46) ಹೇಳಿದ್ದಾರೆ

ಹರಿಯಾಣ ಪೊಲೀಸರು ತಮ್ಮ ಗಡಿಯೊಳಗೆ ನುಗ್ಗಿರುವುದನ್ನು ಪಂಜಾಬ್‌ ಪೊಲೀಸರು ನಿರಾಕರಿಸಿದ್ದಾರೆ. ಬ್ಯಾರಿಕೇಡ್‌ನಿಂದ ಸುಮಾರು 500 ಮೀಟರ್ ಜಾಗ ಹರಿಯಾಣ ರಾಜ್ಯಕ್ಕೆ ಸೇರಿದ್ದು ಎಂದು ಪತ್ರಾನ್ ಡಿಎಸ್ಪಿ ದಲ್ಜಿತ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

“ಎರಡೂ ಕಡೆಯಿಂದ ಸಂಘರ್ಷದ ವರದಿಗಳು ಬಂದಿರುವುದರಿಂದ ನಾನು ಸತ್ಯಾಸತ್ಯತೆ ಪರಿಶೀಲಿಸುತ್ತೇನೆ. ಹರಿಯಾಣದ ವಾದವನ್ನು ಆಲಿಸುತ್ತೇನೆ. ಪ್ರತಿಭಟನಾ ನಿರತ ರೈತರು ಹುಲ್ಲು ಸುಟ್ಟಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆಯ ಸಂದರ್ಭ ನಾನು ಸ್ಥಳಲದಲ್ಲಿ ಇರಲಿಲ್ಲ. ಸತ್ಯಾಸತ್ಯತೆ ತಿಳಿದು ಮಾತನಾಡುತ್ತೇನೆ” ಎಂದು ಪಟಿಯಾಲ ಡೆಪ್ಯುಟಿ ಕಮಿಷನರ್ ಶೌಖತ್ ಅಹ್ಮದ್ ಪರ್ರೆ ಹೇಳಿದ್ದಾರೆ.

“ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ರೈತರ ಮೇಲೆ ದೌರ್ಜನ್ಯ ಎಸಗಿದ್ದು, ಒಬ್ಬ ರೈತನನ್ನು ಹತ್ಯೆ ಮಾಡಿದ್ದಾರೆ. ಹಲವರನ್ನು ಗಾಯಗೊಳಿಸಿದ್ದಾರೆ. ಪೊಲೀಸರು ಪಂಜಾಬ್ ಗಡಿಯೊಳಗೆ ನುಗ್ಗಿ ಟ್ರ್ಯಾಕ್ಟರ್‌ಗಳು ಸೇರಿದಂತೆ ರೈತರ ವಾಹನಗಳನ್ನು ಜಖಂಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರು ಶಾಂತಿಯುತವಾಗಿ ಮುಂದುವರಿಯಲು ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕೆಂದು ಅವರು ಬಯಸಿದ್ದರು ಆದರೆ ಪೊಲೀಸರು ಭಾರೀ ಶೆಲ್ ದಾಳಿ ನಡೆಸಿದರು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದರು. “ದೇಶದ ರೈತರ ಹಿತದೃಷ್ಟಿಯಿಂದ ನಾವು ಸಾಯಲು ಮತ್ತು ಗುಂಡು ಹಾರಿಸಲು ಸಿದ್ಧರಿದ್ದೇವೆ, ನಾವು ದೆಹಲಿ ತಲುಪಲು ಅಚಲವಾಗಿದ್ದೇವೆ, ಆದರೆ ಅವರು ಗುಂಡಿನ ದಾಳಿ ಮಾಡಿದರೆ ಅಥವಾ ಬಲಪ್ರಯೋಗ ಮಾಡಿದರೆ, ಏನು ಸಂಭವಿಸಿದರೂ ಈ ಬ್ಯಾರಿಕೇಡ್‌ಗಳನ್ನು ಹಾಕಿದವರ ಜವಾಬ್ದಾರಿ.” ದಲ್ಲೆವಾಲ್ ಮತ್ತು ಪಂಧೇರ್ ಹೇಳಿದರು.

“ರೈತರು ಶಾಂತಿಯುತವಾಗಿ ದೆಹಲಿಗೆ ತೆರಳಲು ಅನುಮತಿಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಾವು ಆಗ್ರಹಿಸುತ್ತೇವೆ. ಪೊಲೀಸರು ಶೆಲ್ ದಾಳಿ ನಡೆಸಿದರೆ, ದೇಶದ ರೈತರಿಗಾಗಿ ಸಾಯಲೂ ನಾವು ಸಿದ್ದ. ದೆಹಲಿಗೆ ತೆರಳುವ ವಿಚಾರದಲ್ಲಿ ನಾವು ಅಚಲವಾಗಿದ್ದೇವೆ. ಭದ್ರತಾ ಪಡೆಗಳ ಬಳಕೆ, ಗುಂಡಿನ ದಾಳಿಯಿಂದ ಏನಾದರು ಸಂಭವಿಸಿದರೆ ಬ್ಯಾರಿಕೇಡ್ ಹಾಕಿದವರೇ ಅದಕ್ಕೆ ನೇರ ಹೊಣೆ” ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ನಾವು ಶಾಂತಿಯುತವಾಗಿ ಮುಂದುವರೆಯಲು ನಿರ್ಧರಿಸಿದ್ದೇವೆ. ಆದರೆ, ಸರ್ಕಾರ ರೈತರ ರಕ್ತದಲ್ಲಿ ಹೋಳಿ ಆಡಲು ಭಯಸುತ್ತಿದೆ. ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ನಾವು ಯಾವುದೇ ಅಡೆತಡೆಗಳಿಲ್ಲದೆ ದೆಹಲಿ ಪ್ರವೇಶಿಸಲು ಅನುಮತಿ ನೀಡಬೇಕು. ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯ ಕರ್ತವ್ಯ ಎಂದು ದಲ್ಲೆವಾಲ್ ಮತ್ತು ಪಂಧೇರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ನಮ್ಮ ಕಡೆಯಿಂದ ಶಾಂತಿಯುತವಾಗಿ ಉಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ಇದು ಗುರುಕಾ ಬಾಗ್‌ನಂತಹ ಮೋರ್ಚಾ ಆಗಿರುತ್ತದೆ, ಅಲ್ಲಿ ನಾವು ಸರ್ಕಾರದ ಮೇಲೆ ಹೊರೆ ಹೊತ್ತಿದ್ದೇವೆ ಆದರೆ ಕೈ ಎತ್ತಲಿಲ್ಲ. ಕೇಂದ್ರವು ರೈತರ ರಕ್ತದಿಂದ ಹೋಳಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ. ಕಾರ್ಮಿಕರು, ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು, ಕೇಂದ್ರವು ಬೇಡಿಕೆಯನ್ನು ಒಪ್ಪಿಕೊಳ್ಳುವಲ್ಲಿ ಸ್ವಲ್ಪ ಅನುಮಾನವಿದೆ ಎಂದು ಭಾವಿಸಿದರೆ, ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯವರ ಕರ್ತವ್ಯ ಎಂದು ನಾವು ವಿನಂತಿಸುತ್ತೇವೆ, ಅದರಂತೆ ನಮಗೆ ಅವಕಾಶ ನೀಡಬೇಕು. ಅಡೆತಡೆಗಳನ್ನು ತೆರೆಯುವ ಮೂಲಕ ದೆಹಲಿಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ”ಎಂದು ದಲ್ಲೆವಾಲ್ ಅವರೊಂದಿಗೆ ಬೆಳಿಗ್ಗೆ ಮಾಧ್ಯಮಗೋಷ್ಠಿಯಲ್ಲಿ ಪಂಧೇರ್ ಹೇಳಿದರು.

ಇದನ್ನೂ ಓದಿ : ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...