Homeಮುಖಪುಟಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರನ್ನು ತಡೆಯಲು ಹರಿಯಾಣ-ಪಂಜಾಬ್‌ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಣಾಮ ಗಡಿ ಪ್ರದೇಶ ಯುದ್ಧ ಭೂಮಿಯಂತಾಗಿದೆ.

ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಪಂಜಾಬ್‌ನ ಭೂ ಪ್ರದೇಶದೊಳಗೆ ನುಗ್ಗಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ನಮ್ಮ ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ 100ಕ್ಕೂ ಅಧಿಕ ಪ್ರತಿಭಟನಾ ನಿರತರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನ 12:30ರ ಸುಮಾರಿಗೆ ಪಂಜಾಬ್‌-ಹರಿಯಾಣ ಗಡಿಯಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳ ಬಳಿ ರೈತರು ತಲುಪಿದಾಗ ಪೊಲೀಸರು ಅಶ್ರುವಾಯು ಶೆಲ್ ದಾಳಿ ಆರಂಭಿಸಿದ್ದರು. ಅಪರಾಹ್ನ 2 ಗಂಟೆಯವರೆಗೆ ಶೆಲ್ ದಾಳಿ ಮುಂದುವರೆದಿತ್ತು. ಈ ವೇಳೆ ಪೊಲೀಸರುನ್ನು ಎದುರಿಸಲು ರೈತರು ಜಮೀನಿಗೆ ತೆರಳಿ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಸಂಜೆ 3:15ರ ಸುಮಾರಿಗೆ ಪೊಲೀಸರು ಮತ್ತೆ ಶೆಲ್ ದಾಳಿ ಪುನರಾರಂಭಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಪೊಲೀಸರು ಪಂಜಾಬ್‌ನ ಭೂ ಪ್ರದೇಶದ ಕೃಷಿ ಭೂಮಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಎದುರಿಸಲು ರೈತರು ಹುಲ್ಲಿಗೆ ಬೆಂಕಿ ಹಾಕಿದಷ್ಟೆ, ಅವರಿಗೆ ಬಹಳ ಹಿಂಸೆಯಾಗಿದೆ. ಕಳೆದ ಒಂದು ವಾರದಿಂದ ಅವರು ರೈತರಿಗೆ ಅದೇ ರೀತಿಯ ಹಿಂಸೆ ನೀಡುತ್ತಿದ್ದಾರೆ. ಪೊಲೀಸರು 12 ಬೋರ್ ಗನ್‌ಗಳಿಂದ ನಮ್ಮ ಮೇಲೆ ಗುಂಡು ಹಾರಿಸಿದ್ದಾರೆ. ನಾವು ರೈತರು, ಭಯೋತ್ಪಾದಕರಲ್ಲ” ಎಂದು ಪೊಲೀಸ್ ದಾಳಿಯಿಂದ ಗಾಯಗೊಂಡ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸರೋನ್ ಗ್ರಾಮದ ರೈತ ಜರ್ನೈಲ್ ಸಿಂಗ್ (46) ಹೇಳಿದ್ದಾರೆ

ಹರಿಯಾಣ ಪೊಲೀಸರು ತಮ್ಮ ಗಡಿಯೊಳಗೆ ನುಗ್ಗಿರುವುದನ್ನು ಪಂಜಾಬ್‌ ಪೊಲೀಸರು ನಿರಾಕರಿಸಿದ್ದಾರೆ. ಬ್ಯಾರಿಕೇಡ್‌ನಿಂದ ಸುಮಾರು 500 ಮೀಟರ್ ಜಾಗ ಹರಿಯಾಣ ರಾಜ್ಯಕ್ಕೆ ಸೇರಿದ್ದು ಎಂದು ಪತ್ರಾನ್ ಡಿಎಸ್ಪಿ ದಲ್ಜಿತ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

“ಎರಡೂ ಕಡೆಯಿಂದ ಸಂಘರ್ಷದ ವರದಿಗಳು ಬಂದಿರುವುದರಿಂದ ನಾನು ಸತ್ಯಾಸತ್ಯತೆ ಪರಿಶೀಲಿಸುತ್ತೇನೆ. ಹರಿಯಾಣದ ವಾದವನ್ನು ಆಲಿಸುತ್ತೇನೆ. ಪ್ರತಿಭಟನಾ ನಿರತ ರೈತರು ಹುಲ್ಲು ಸುಟ್ಟಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆಯ ಸಂದರ್ಭ ನಾನು ಸ್ಥಳಲದಲ್ಲಿ ಇರಲಿಲ್ಲ. ಸತ್ಯಾಸತ್ಯತೆ ತಿಳಿದು ಮಾತನಾಡುತ್ತೇನೆ” ಎಂದು ಪಟಿಯಾಲ ಡೆಪ್ಯುಟಿ ಕಮಿಷನರ್ ಶೌಖತ್ ಅಹ್ಮದ್ ಪರ್ರೆ ಹೇಳಿದ್ದಾರೆ.

“ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ರೈತರ ಮೇಲೆ ದೌರ್ಜನ್ಯ ಎಸಗಿದ್ದು, ಒಬ್ಬ ರೈತನನ್ನು ಹತ್ಯೆ ಮಾಡಿದ್ದಾರೆ. ಹಲವರನ್ನು ಗಾಯಗೊಳಿಸಿದ್ದಾರೆ. ಪೊಲೀಸರು ಪಂಜಾಬ್ ಗಡಿಯೊಳಗೆ ನುಗ್ಗಿ ಟ್ರ್ಯಾಕ್ಟರ್‌ಗಳು ಸೇರಿದಂತೆ ರೈತರ ವಾಹನಗಳನ್ನು ಜಖಂಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರು ಶಾಂತಿಯುತವಾಗಿ ಮುಂದುವರಿಯಲು ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕೆಂದು ಅವರು ಬಯಸಿದ್ದರು ಆದರೆ ಪೊಲೀಸರು ಭಾರೀ ಶೆಲ್ ದಾಳಿ ನಡೆಸಿದರು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದರು. “ದೇಶದ ರೈತರ ಹಿತದೃಷ್ಟಿಯಿಂದ ನಾವು ಸಾಯಲು ಮತ್ತು ಗುಂಡು ಹಾರಿಸಲು ಸಿದ್ಧರಿದ್ದೇವೆ, ನಾವು ದೆಹಲಿ ತಲುಪಲು ಅಚಲವಾಗಿದ್ದೇವೆ, ಆದರೆ ಅವರು ಗುಂಡಿನ ದಾಳಿ ಮಾಡಿದರೆ ಅಥವಾ ಬಲಪ್ರಯೋಗ ಮಾಡಿದರೆ, ಏನು ಸಂಭವಿಸಿದರೂ ಈ ಬ್ಯಾರಿಕೇಡ್‌ಗಳನ್ನು ಹಾಕಿದವರ ಜವಾಬ್ದಾರಿ.” ದಲ್ಲೆವಾಲ್ ಮತ್ತು ಪಂಧೇರ್ ಹೇಳಿದರು.

“ರೈತರು ಶಾಂತಿಯುತವಾಗಿ ದೆಹಲಿಗೆ ತೆರಳಲು ಅನುಮತಿಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಾವು ಆಗ್ರಹಿಸುತ್ತೇವೆ. ಪೊಲೀಸರು ಶೆಲ್ ದಾಳಿ ನಡೆಸಿದರೆ, ದೇಶದ ರೈತರಿಗಾಗಿ ಸಾಯಲೂ ನಾವು ಸಿದ್ದ. ದೆಹಲಿಗೆ ತೆರಳುವ ವಿಚಾರದಲ್ಲಿ ನಾವು ಅಚಲವಾಗಿದ್ದೇವೆ. ಭದ್ರತಾ ಪಡೆಗಳ ಬಳಕೆ, ಗುಂಡಿನ ದಾಳಿಯಿಂದ ಏನಾದರು ಸಂಭವಿಸಿದರೆ ಬ್ಯಾರಿಕೇಡ್ ಹಾಕಿದವರೇ ಅದಕ್ಕೆ ನೇರ ಹೊಣೆ” ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ನಾವು ಶಾಂತಿಯುತವಾಗಿ ಮುಂದುವರೆಯಲು ನಿರ್ಧರಿಸಿದ್ದೇವೆ. ಆದರೆ, ಸರ್ಕಾರ ರೈತರ ರಕ್ತದಲ್ಲಿ ಹೋಳಿ ಆಡಲು ಭಯಸುತ್ತಿದೆ. ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ನಾವು ಯಾವುದೇ ಅಡೆತಡೆಗಳಿಲ್ಲದೆ ದೆಹಲಿ ಪ್ರವೇಶಿಸಲು ಅನುಮತಿ ನೀಡಬೇಕು. ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯ ಕರ್ತವ್ಯ ಎಂದು ದಲ್ಲೆವಾಲ್ ಮತ್ತು ಪಂಧೇರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ನಮ್ಮ ಕಡೆಯಿಂದ ಶಾಂತಿಯುತವಾಗಿ ಉಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ಇದು ಗುರುಕಾ ಬಾಗ್‌ನಂತಹ ಮೋರ್ಚಾ ಆಗಿರುತ್ತದೆ, ಅಲ್ಲಿ ನಾವು ಸರ್ಕಾರದ ಮೇಲೆ ಹೊರೆ ಹೊತ್ತಿದ್ದೇವೆ ಆದರೆ ಕೈ ಎತ್ತಲಿಲ್ಲ. ಕೇಂದ್ರವು ರೈತರ ರಕ್ತದಿಂದ ಹೋಳಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ. ಕಾರ್ಮಿಕರು, ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು, ಕೇಂದ್ರವು ಬೇಡಿಕೆಯನ್ನು ಒಪ್ಪಿಕೊಳ್ಳುವಲ್ಲಿ ಸ್ವಲ್ಪ ಅನುಮಾನವಿದೆ ಎಂದು ಭಾವಿಸಿದರೆ, ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯವರ ಕರ್ತವ್ಯ ಎಂದು ನಾವು ವಿನಂತಿಸುತ್ತೇವೆ, ಅದರಂತೆ ನಮಗೆ ಅವಕಾಶ ನೀಡಬೇಕು. ಅಡೆತಡೆಗಳನ್ನು ತೆರೆಯುವ ಮೂಲಕ ದೆಹಲಿಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ”ಎಂದು ದಲ್ಲೆವಾಲ್ ಅವರೊಂದಿಗೆ ಬೆಳಿಗ್ಗೆ ಮಾಧ್ಯಮಗೋಷ್ಠಿಯಲ್ಲಿ ಪಂಧೇರ್ ಹೇಳಿದರು.

ಇದನ್ನೂ ಓದಿ : ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...