Homeಮುಖಪುಟಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರನ್ನು ತಡೆಯಲು ಹರಿಯಾಣ-ಪಂಜಾಬ್‌ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಣಾಮ ಗಡಿ ಪ್ರದೇಶ ಯುದ್ಧ ಭೂಮಿಯಂತಾಗಿದೆ.

ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಪಂಜಾಬ್‌ನ ಭೂ ಪ್ರದೇಶದೊಳಗೆ ನುಗ್ಗಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ನಮ್ಮ ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ 100ಕ್ಕೂ ಅಧಿಕ ಪ್ರತಿಭಟನಾ ನಿರತರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನ 12:30ರ ಸುಮಾರಿಗೆ ಪಂಜಾಬ್‌-ಹರಿಯಾಣ ಗಡಿಯಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳ ಬಳಿ ರೈತರು ತಲುಪಿದಾಗ ಪೊಲೀಸರು ಅಶ್ರುವಾಯು ಶೆಲ್ ದಾಳಿ ಆರಂಭಿಸಿದ್ದರು. ಅಪರಾಹ್ನ 2 ಗಂಟೆಯವರೆಗೆ ಶೆಲ್ ದಾಳಿ ಮುಂದುವರೆದಿತ್ತು. ಈ ವೇಳೆ ಪೊಲೀಸರುನ್ನು ಎದುರಿಸಲು ರೈತರು ಜಮೀನಿಗೆ ತೆರಳಿ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಸಂಜೆ 3:15ರ ಸುಮಾರಿಗೆ ಪೊಲೀಸರು ಮತ್ತೆ ಶೆಲ್ ದಾಳಿ ಪುನರಾರಂಭಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಪೊಲೀಸರು ಪಂಜಾಬ್‌ನ ಭೂ ಪ್ರದೇಶದ ಕೃಷಿ ಭೂಮಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಎದುರಿಸಲು ರೈತರು ಹುಲ್ಲಿಗೆ ಬೆಂಕಿ ಹಾಕಿದಷ್ಟೆ, ಅವರಿಗೆ ಬಹಳ ಹಿಂಸೆಯಾಗಿದೆ. ಕಳೆದ ಒಂದು ವಾರದಿಂದ ಅವರು ರೈತರಿಗೆ ಅದೇ ರೀತಿಯ ಹಿಂಸೆ ನೀಡುತ್ತಿದ್ದಾರೆ. ಪೊಲೀಸರು 12 ಬೋರ್ ಗನ್‌ಗಳಿಂದ ನಮ್ಮ ಮೇಲೆ ಗುಂಡು ಹಾರಿಸಿದ್ದಾರೆ. ನಾವು ರೈತರು, ಭಯೋತ್ಪಾದಕರಲ್ಲ” ಎಂದು ಪೊಲೀಸ್ ದಾಳಿಯಿಂದ ಗಾಯಗೊಂಡ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸರೋನ್ ಗ್ರಾಮದ ರೈತ ಜರ್ನೈಲ್ ಸಿಂಗ್ (46) ಹೇಳಿದ್ದಾರೆ

ಹರಿಯಾಣ ಪೊಲೀಸರು ತಮ್ಮ ಗಡಿಯೊಳಗೆ ನುಗ್ಗಿರುವುದನ್ನು ಪಂಜಾಬ್‌ ಪೊಲೀಸರು ನಿರಾಕರಿಸಿದ್ದಾರೆ. ಬ್ಯಾರಿಕೇಡ್‌ನಿಂದ ಸುಮಾರು 500 ಮೀಟರ್ ಜಾಗ ಹರಿಯಾಣ ರಾಜ್ಯಕ್ಕೆ ಸೇರಿದ್ದು ಎಂದು ಪತ್ರಾನ್ ಡಿಎಸ್ಪಿ ದಲ್ಜಿತ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

“ಎರಡೂ ಕಡೆಯಿಂದ ಸಂಘರ್ಷದ ವರದಿಗಳು ಬಂದಿರುವುದರಿಂದ ನಾನು ಸತ್ಯಾಸತ್ಯತೆ ಪರಿಶೀಲಿಸುತ್ತೇನೆ. ಹರಿಯಾಣದ ವಾದವನ್ನು ಆಲಿಸುತ್ತೇನೆ. ಪ್ರತಿಭಟನಾ ನಿರತ ರೈತರು ಹುಲ್ಲು ಸುಟ್ಟಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆಯ ಸಂದರ್ಭ ನಾನು ಸ್ಥಳಲದಲ್ಲಿ ಇರಲಿಲ್ಲ. ಸತ್ಯಾಸತ್ಯತೆ ತಿಳಿದು ಮಾತನಾಡುತ್ತೇನೆ” ಎಂದು ಪಟಿಯಾಲ ಡೆಪ್ಯುಟಿ ಕಮಿಷನರ್ ಶೌಖತ್ ಅಹ್ಮದ್ ಪರ್ರೆ ಹೇಳಿದ್ದಾರೆ.

“ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ರೈತರ ಮೇಲೆ ದೌರ್ಜನ್ಯ ಎಸಗಿದ್ದು, ಒಬ್ಬ ರೈತನನ್ನು ಹತ್ಯೆ ಮಾಡಿದ್ದಾರೆ. ಹಲವರನ್ನು ಗಾಯಗೊಳಿಸಿದ್ದಾರೆ. ಪೊಲೀಸರು ಪಂಜಾಬ್ ಗಡಿಯೊಳಗೆ ನುಗ್ಗಿ ಟ್ರ್ಯಾಕ್ಟರ್‌ಗಳು ಸೇರಿದಂತೆ ರೈತರ ವಾಹನಗಳನ್ನು ಜಖಂಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರು ಶಾಂತಿಯುತವಾಗಿ ಮುಂದುವರಿಯಲು ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕೆಂದು ಅವರು ಬಯಸಿದ್ದರು ಆದರೆ ಪೊಲೀಸರು ಭಾರೀ ಶೆಲ್ ದಾಳಿ ನಡೆಸಿದರು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದರು. “ದೇಶದ ರೈತರ ಹಿತದೃಷ್ಟಿಯಿಂದ ನಾವು ಸಾಯಲು ಮತ್ತು ಗುಂಡು ಹಾರಿಸಲು ಸಿದ್ಧರಿದ್ದೇವೆ, ನಾವು ದೆಹಲಿ ತಲುಪಲು ಅಚಲವಾಗಿದ್ದೇವೆ, ಆದರೆ ಅವರು ಗುಂಡಿನ ದಾಳಿ ಮಾಡಿದರೆ ಅಥವಾ ಬಲಪ್ರಯೋಗ ಮಾಡಿದರೆ, ಏನು ಸಂಭವಿಸಿದರೂ ಈ ಬ್ಯಾರಿಕೇಡ್‌ಗಳನ್ನು ಹಾಕಿದವರ ಜವಾಬ್ದಾರಿ.” ದಲ್ಲೆವಾಲ್ ಮತ್ತು ಪಂಧೇರ್ ಹೇಳಿದರು.

“ರೈತರು ಶಾಂತಿಯುತವಾಗಿ ದೆಹಲಿಗೆ ತೆರಳಲು ಅನುಮತಿಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಾವು ಆಗ್ರಹಿಸುತ್ತೇವೆ. ಪೊಲೀಸರು ಶೆಲ್ ದಾಳಿ ನಡೆಸಿದರೆ, ದೇಶದ ರೈತರಿಗಾಗಿ ಸಾಯಲೂ ನಾವು ಸಿದ್ದ. ದೆಹಲಿಗೆ ತೆರಳುವ ವಿಚಾರದಲ್ಲಿ ನಾವು ಅಚಲವಾಗಿದ್ದೇವೆ. ಭದ್ರತಾ ಪಡೆಗಳ ಬಳಕೆ, ಗುಂಡಿನ ದಾಳಿಯಿಂದ ಏನಾದರು ಸಂಭವಿಸಿದರೆ ಬ್ಯಾರಿಕೇಡ್ ಹಾಕಿದವರೇ ಅದಕ್ಕೆ ನೇರ ಹೊಣೆ” ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ನಾವು ಶಾಂತಿಯುತವಾಗಿ ಮುಂದುವರೆಯಲು ನಿರ್ಧರಿಸಿದ್ದೇವೆ. ಆದರೆ, ಸರ್ಕಾರ ರೈತರ ರಕ್ತದಲ್ಲಿ ಹೋಳಿ ಆಡಲು ಭಯಸುತ್ತಿದೆ. ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ನಾವು ಯಾವುದೇ ಅಡೆತಡೆಗಳಿಲ್ಲದೆ ದೆಹಲಿ ಪ್ರವೇಶಿಸಲು ಅನುಮತಿ ನೀಡಬೇಕು. ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯ ಕರ್ತವ್ಯ ಎಂದು ದಲ್ಲೆವಾಲ್ ಮತ್ತು ಪಂಧೇರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ನಮ್ಮ ಕಡೆಯಿಂದ ಶಾಂತಿಯುತವಾಗಿ ಉಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ಇದು ಗುರುಕಾ ಬಾಗ್‌ನಂತಹ ಮೋರ್ಚಾ ಆಗಿರುತ್ತದೆ, ಅಲ್ಲಿ ನಾವು ಸರ್ಕಾರದ ಮೇಲೆ ಹೊರೆ ಹೊತ್ತಿದ್ದೇವೆ ಆದರೆ ಕೈ ಎತ್ತಲಿಲ್ಲ. ಕೇಂದ್ರವು ರೈತರ ರಕ್ತದಿಂದ ಹೋಳಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ. ಕಾರ್ಮಿಕರು, ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು, ಕೇಂದ್ರವು ಬೇಡಿಕೆಯನ್ನು ಒಪ್ಪಿಕೊಳ್ಳುವಲ್ಲಿ ಸ್ವಲ್ಪ ಅನುಮಾನವಿದೆ ಎಂದು ಭಾವಿಸಿದರೆ, ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯವರ ಕರ್ತವ್ಯ ಎಂದು ನಾವು ವಿನಂತಿಸುತ್ತೇವೆ, ಅದರಂತೆ ನಮಗೆ ಅವಕಾಶ ನೀಡಬೇಕು. ಅಡೆತಡೆಗಳನ್ನು ತೆರೆಯುವ ಮೂಲಕ ದೆಹಲಿಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ”ಎಂದು ದಲ್ಲೆವಾಲ್ ಅವರೊಂದಿಗೆ ಬೆಳಿಗ್ಗೆ ಮಾಧ್ಯಮಗೋಷ್ಠಿಯಲ್ಲಿ ಪಂಧೇರ್ ಹೇಳಿದರು.

ಇದನ್ನೂ ಓದಿ : ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...