Homeಮುಖಪುಟಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರನ್ನು ತಡೆಯಲು ಹರಿಯಾಣ-ಪಂಜಾಬ್‌ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಣಾಮ ಗಡಿ ಪ್ರದೇಶ ಯುದ್ಧ ಭೂಮಿಯಂತಾಗಿದೆ.

ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಪಂಜಾಬ್‌ನ ಭೂ ಪ್ರದೇಶದೊಳಗೆ ನುಗ್ಗಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ನಮ್ಮ ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ 100ಕ್ಕೂ ಅಧಿಕ ಪ್ರತಿಭಟನಾ ನಿರತರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನ 12:30ರ ಸುಮಾರಿಗೆ ಪಂಜಾಬ್‌-ಹರಿಯಾಣ ಗಡಿಯಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳ ಬಳಿ ರೈತರು ತಲುಪಿದಾಗ ಪೊಲೀಸರು ಅಶ್ರುವಾಯು ಶೆಲ್ ದಾಳಿ ಆರಂಭಿಸಿದ್ದರು. ಅಪರಾಹ್ನ 2 ಗಂಟೆಯವರೆಗೆ ಶೆಲ್ ದಾಳಿ ಮುಂದುವರೆದಿತ್ತು. ಈ ವೇಳೆ ಪೊಲೀಸರುನ್ನು ಎದುರಿಸಲು ರೈತರು ಜಮೀನಿಗೆ ತೆರಳಿ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಸಂಜೆ 3:15ರ ಸುಮಾರಿಗೆ ಪೊಲೀಸರು ಮತ್ತೆ ಶೆಲ್ ದಾಳಿ ಪುನರಾರಂಭಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಪೊಲೀಸರು ಪಂಜಾಬ್‌ನ ಭೂ ಪ್ರದೇಶದ ಕೃಷಿ ಭೂಮಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಎದುರಿಸಲು ರೈತರು ಹುಲ್ಲಿಗೆ ಬೆಂಕಿ ಹಾಕಿದಷ್ಟೆ, ಅವರಿಗೆ ಬಹಳ ಹಿಂಸೆಯಾಗಿದೆ. ಕಳೆದ ಒಂದು ವಾರದಿಂದ ಅವರು ರೈತರಿಗೆ ಅದೇ ರೀತಿಯ ಹಿಂಸೆ ನೀಡುತ್ತಿದ್ದಾರೆ. ಪೊಲೀಸರು 12 ಬೋರ್ ಗನ್‌ಗಳಿಂದ ನಮ್ಮ ಮೇಲೆ ಗುಂಡು ಹಾರಿಸಿದ್ದಾರೆ. ನಾವು ರೈತರು, ಭಯೋತ್ಪಾದಕರಲ್ಲ” ಎಂದು ಪೊಲೀಸ್ ದಾಳಿಯಿಂದ ಗಾಯಗೊಂಡ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸರೋನ್ ಗ್ರಾಮದ ರೈತ ಜರ್ನೈಲ್ ಸಿಂಗ್ (46) ಹೇಳಿದ್ದಾರೆ

ಹರಿಯಾಣ ಪೊಲೀಸರು ತಮ್ಮ ಗಡಿಯೊಳಗೆ ನುಗ್ಗಿರುವುದನ್ನು ಪಂಜಾಬ್‌ ಪೊಲೀಸರು ನಿರಾಕರಿಸಿದ್ದಾರೆ. ಬ್ಯಾರಿಕೇಡ್‌ನಿಂದ ಸುಮಾರು 500 ಮೀಟರ್ ಜಾಗ ಹರಿಯಾಣ ರಾಜ್ಯಕ್ಕೆ ಸೇರಿದ್ದು ಎಂದು ಪತ್ರಾನ್ ಡಿಎಸ್ಪಿ ದಲ್ಜಿತ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

“ಎರಡೂ ಕಡೆಯಿಂದ ಸಂಘರ್ಷದ ವರದಿಗಳು ಬಂದಿರುವುದರಿಂದ ನಾನು ಸತ್ಯಾಸತ್ಯತೆ ಪರಿಶೀಲಿಸುತ್ತೇನೆ. ಹರಿಯಾಣದ ವಾದವನ್ನು ಆಲಿಸುತ್ತೇನೆ. ಪ್ರತಿಭಟನಾ ನಿರತ ರೈತರು ಹುಲ್ಲು ಸುಟ್ಟಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆಯ ಸಂದರ್ಭ ನಾನು ಸ್ಥಳಲದಲ್ಲಿ ಇರಲಿಲ್ಲ. ಸತ್ಯಾಸತ್ಯತೆ ತಿಳಿದು ಮಾತನಾಡುತ್ತೇನೆ” ಎಂದು ಪಟಿಯಾಲ ಡೆಪ್ಯುಟಿ ಕಮಿಷನರ್ ಶೌಖತ್ ಅಹ್ಮದ್ ಪರ್ರೆ ಹೇಳಿದ್ದಾರೆ.

“ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ರೈತರ ಮೇಲೆ ದೌರ್ಜನ್ಯ ಎಸಗಿದ್ದು, ಒಬ್ಬ ರೈತನನ್ನು ಹತ್ಯೆ ಮಾಡಿದ್ದಾರೆ. ಹಲವರನ್ನು ಗಾಯಗೊಳಿಸಿದ್ದಾರೆ. ಪೊಲೀಸರು ಪಂಜಾಬ್ ಗಡಿಯೊಳಗೆ ನುಗ್ಗಿ ಟ್ರ್ಯಾಕ್ಟರ್‌ಗಳು ಸೇರಿದಂತೆ ರೈತರ ವಾಹನಗಳನ್ನು ಜಖಂಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರು ಶಾಂತಿಯುತವಾಗಿ ಮುಂದುವರಿಯಲು ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕೆಂದು ಅವರು ಬಯಸಿದ್ದರು ಆದರೆ ಪೊಲೀಸರು ಭಾರೀ ಶೆಲ್ ದಾಳಿ ನಡೆಸಿದರು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದರು. “ದೇಶದ ರೈತರ ಹಿತದೃಷ್ಟಿಯಿಂದ ನಾವು ಸಾಯಲು ಮತ್ತು ಗುಂಡು ಹಾರಿಸಲು ಸಿದ್ಧರಿದ್ದೇವೆ, ನಾವು ದೆಹಲಿ ತಲುಪಲು ಅಚಲವಾಗಿದ್ದೇವೆ, ಆದರೆ ಅವರು ಗುಂಡಿನ ದಾಳಿ ಮಾಡಿದರೆ ಅಥವಾ ಬಲಪ್ರಯೋಗ ಮಾಡಿದರೆ, ಏನು ಸಂಭವಿಸಿದರೂ ಈ ಬ್ಯಾರಿಕೇಡ್‌ಗಳನ್ನು ಹಾಕಿದವರ ಜವಾಬ್ದಾರಿ.” ದಲ್ಲೆವಾಲ್ ಮತ್ತು ಪಂಧೇರ್ ಹೇಳಿದರು.

“ರೈತರು ಶಾಂತಿಯುತವಾಗಿ ದೆಹಲಿಗೆ ತೆರಳಲು ಅನುಮತಿಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಾವು ಆಗ್ರಹಿಸುತ್ತೇವೆ. ಪೊಲೀಸರು ಶೆಲ್ ದಾಳಿ ನಡೆಸಿದರೆ, ದೇಶದ ರೈತರಿಗಾಗಿ ಸಾಯಲೂ ನಾವು ಸಿದ್ದ. ದೆಹಲಿಗೆ ತೆರಳುವ ವಿಚಾರದಲ್ಲಿ ನಾವು ಅಚಲವಾಗಿದ್ದೇವೆ. ಭದ್ರತಾ ಪಡೆಗಳ ಬಳಕೆ, ಗುಂಡಿನ ದಾಳಿಯಿಂದ ಏನಾದರು ಸಂಭವಿಸಿದರೆ ಬ್ಯಾರಿಕೇಡ್ ಹಾಕಿದವರೇ ಅದಕ್ಕೆ ನೇರ ಹೊಣೆ” ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ನಾವು ಶಾಂತಿಯುತವಾಗಿ ಮುಂದುವರೆಯಲು ನಿರ್ಧರಿಸಿದ್ದೇವೆ. ಆದರೆ, ಸರ್ಕಾರ ರೈತರ ರಕ್ತದಲ್ಲಿ ಹೋಳಿ ಆಡಲು ಭಯಸುತ್ತಿದೆ. ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ನಾವು ಯಾವುದೇ ಅಡೆತಡೆಗಳಿಲ್ಲದೆ ದೆಹಲಿ ಪ್ರವೇಶಿಸಲು ಅನುಮತಿ ನೀಡಬೇಕು. ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯ ಕರ್ತವ್ಯ ಎಂದು ದಲ್ಲೆವಾಲ್ ಮತ್ತು ಪಂಧೇರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ನಮ್ಮ ಕಡೆಯಿಂದ ಶಾಂತಿಯುತವಾಗಿ ಉಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ಇದು ಗುರುಕಾ ಬಾಗ್‌ನಂತಹ ಮೋರ್ಚಾ ಆಗಿರುತ್ತದೆ, ಅಲ್ಲಿ ನಾವು ಸರ್ಕಾರದ ಮೇಲೆ ಹೊರೆ ಹೊತ್ತಿದ್ದೇವೆ ಆದರೆ ಕೈ ಎತ್ತಲಿಲ್ಲ. ಕೇಂದ್ರವು ರೈತರ ರಕ್ತದಿಂದ ಹೋಳಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ. ಕಾರ್ಮಿಕರು, ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು, ಕೇಂದ್ರವು ಬೇಡಿಕೆಯನ್ನು ಒಪ್ಪಿಕೊಳ್ಳುವಲ್ಲಿ ಸ್ವಲ್ಪ ಅನುಮಾನವಿದೆ ಎಂದು ಭಾವಿಸಿದರೆ, ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯವರ ಕರ್ತವ್ಯ ಎಂದು ನಾವು ವಿನಂತಿಸುತ್ತೇವೆ, ಅದರಂತೆ ನಮಗೆ ಅವಕಾಶ ನೀಡಬೇಕು. ಅಡೆತಡೆಗಳನ್ನು ತೆರೆಯುವ ಮೂಲಕ ದೆಹಲಿಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ”ಎಂದು ದಲ್ಲೆವಾಲ್ ಅವರೊಂದಿಗೆ ಬೆಳಿಗ್ಗೆ ಮಾಧ್ಯಮಗೋಷ್ಠಿಯಲ್ಲಿ ಪಂಧೇರ್ ಹೇಳಿದರು.

ಇದನ್ನೂ ಓದಿ : ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...