Homeಮುಖಪುಟಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರನ್ನು ತಡೆಯಲು ಹರಿಯಾಣ-ಪಂಜಾಬ್‌ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಣಾಮ ಗಡಿ ಪ್ರದೇಶ ಯುದ್ಧ ಭೂಮಿಯಂತಾಗಿದೆ.

ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಪಂಜಾಬ್‌ನ ಭೂ ಪ್ರದೇಶದೊಳಗೆ ನುಗ್ಗಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ನಮ್ಮ ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ 100ಕ್ಕೂ ಅಧಿಕ ಪ್ರತಿಭಟನಾ ನಿರತರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನ 12:30ರ ಸುಮಾರಿಗೆ ಪಂಜಾಬ್‌-ಹರಿಯಾಣ ಗಡಿಯಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳ ಬಳಿ ರೈತರು ತಲುಪಿದಾಗ ಪೊಲೀಸರು ಅಶ್ರುವಾಯು ಶೆಲ್ ದಾಳಿ ಆರಂಭಿಸಿದ್ದರು. ಅಪರಾಹ್ನ 2 ಗಂಟೆಯವರೆಗೆ ಶೆಲ್ ದಾಳಿ ಮುಂದುವರೆದಿತ್ತು. ಈ ವೇಳೆ ಪೊಲೀಸರುನ್ನು ಎದುರಿಸಲು ರೈತರು ಜಮೀನಿಗೆ ತೆರಳಿ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಸಂಜೆ 3:15ರ ಸುಮಾರಿಗೆ ಪೊಲೀಸರು ಮತ್ತೆ ಶೆಲ್ ದಾಳಿ ಪುನರಾರಂಭಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಪೊಲೀಸರು ಪಂಜಾಬ್‌ನ ಭೂ ಪ್ರದೇಶದ ಕೃಷಿ ಭೂಮಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಎದುರಿಸಲು ರೈತರು ಹುಲ್ಲಿಗೆ ಬೆಂಕಿ ಹಾಕಿದಷ್ಟೆ, ಅವರಿಗೆ ಬಹಳ ಹಿಂಸೆಯಾಗಿದೆ. ಕಳೆದ ಒಂದು ವಾರದಿಂದ ಅವರು ರೈತರಿಗೆ ಅದೇ ರೀತಿಯ ಹಿಂಸೆ ನೀಡುತ್ತಿದ್ದಾರೆ. ಪೊಲೀಸರು 12 ಬೋರ್ ಗನ್‌ಗಳಿಂದ ನಮ್ಮ ಮೇಲೆ ಗುಂಡು ಹಾರಿಸಿದ್ದಾರೆ. ನಾವು ರೈತರು, ಭಯೋತ್ಪಾದಕರಲ್ಲ” ಎಂದು ಪೊಲೀಸ್ ದಾಳಿಯಿಂದ ಗಾಯಗೊಂಡ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸರೋನ್ ಗ್ರಾಮದ ರೈತ ಜರ್ನೈಲ್ ಸಿಂಗ್ (46) ಹೇಳಿದ್ದಾರೆ

ಹರಿಯಾಣ ಪೊಲೀಸರು ತಮ್ಮ ಗಡಿಯೊಳಗೆ ನುಗ್ಗಿರುವುದನ್ನು ಪಂಜಾಬ್‌ ಪೊಲೀಸರು ನಿರಾಕರಿಸಿದ್ದಾರೆ. ಬ್ಯಾರಿಕೇಡ್‌ನಿಂದ ಸುಮಾರು 500 ಮೀಟರ್ ಜಾಗ ಹರಿಯಾಣ ರಾಜ್ಯಕ್ಕೆ ಸೇರಿದ್ದು ಎಂದು ಪತ್ರಾನ್ ಡಿಎಸ್ಪಿ ದಲ್ಜಿತ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

“ಎರಡೂ ಕಡೆಯಿಂದ ಸಂಘರ್ಷದ ವರದಿಗಳು ಬಂದಿರುವುದರಿಂದ ನಾನು ಸತ್ಯಾಸತ್ಯತೆ ಪರಿಶೀಲಿಸುತ್ತೇನೆ. ಹರಿಯಾಣದ ವಾದವನ್ನು ಆಲಿಸುತ್ತೇನೆ. ಪ್ರತಿಭಟನಾ ನಿರತ ರೈತರು ಹುಲ್ಲು ಸುಟ್ಟಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆಯ ಸಂದರ್ಭ ನಾನು ಸ್ಥಳಲದಲ್ಲಿ ಇರಲಿಲ್ಲ. ಸತ್ಯಾಸತ್ಯತೆ ತಿಳಿದು ಮಾತನಾಡುತ್ತೇನೆ” ಎಂದು ಪಟಿಯಾಲ ಡೆಪ್ಯುಟಿ ಕಮಿಷನರ್ ಶೌಖತ್ ಅಹ್ಮದ್ ಪರ್ರೆ ಹೇಳಿದ್ದಾರೆ.

“ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ರೈತರ ಮೇಲೆ ದೌರ್ಜನ್ಯ ಎಸಗಿದ್ದು, ಒಬ್ಬ ರೈತನನ್ನು ಹತ್ಯೆ ಮಾಡಿದ್ದಾರೆ. ಹಲವರನ್ನು ಗಾಯಗೊಳಿಸಿದ್ದಾರೆ. ಪೊಲೀಸರು ಪಂಜಾಬ್ ಗಡಿಯೊಳಗೆ ನುಗ್ಗಿ ಟ್ರ್ಯಾಕ್ಟರ್‌ಗಳು ಸೇರಿದಂತೆ ರೈತರ ವಾಹನಗಳನ್ನು ಜಖಂಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರು ಶಾಂತಿಯುತವಾಗಿ ಮುಂದುವರಿಯಲು ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕೆಂದು ಅವರು ಬಯಸಿದ್ದರು ಆದರೆ ಪೊಲೀಸರು ಭಾರೀ ಶೆಲ್ ದಾಳಿ ನಡೆಸಿದರು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದರು. “ದೇಶದ ರೈತರ ಹಿತದೃಷ್ಟಿಯಿಂದ ನಾವು ಸಾಯಲು ಮತ್ತು ಗುಂಡು ಹಾರಿಸಲು ಸಿದ್ಧರಿದ್ದೇವೆ, ನಾವು ದೆಹಲಿ ತಲುಪಲು ಅಚಲವಾಗಿದ್ದೇವೆ, ಆದರೆ ಅವರು ಗುಂಡಿನ ದಾಳಿ ಮಾಡಿದರೆ ಅಥವಾ ಬಲಪ್ರಯೋಗ ಮಾಡಿದರೆ, ಏನು ಸಂಭವಿಸಿದರೂ ಈ ಬ್ಯಾರಿಕೇಡ್‌ಗಳನ್ನು ಹಾಕಿದವರ ಜವಾಬ್ದಾರಿ.” ದಲ್ಲೆವಾಲ್ ಮತ್ತು ಪಂಧೇರ್ ಹೇಳಿದರು.

“ರೈತರು ಶಾಂತಿಯುತವಾಗಿ ದೆಹಲಿಗೆ ತೆರಳಲು ಅನುಮತಿಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಾವು ಆಗ್ರಹಿಸುತ್ತೇವೆ. ಪೊಲೀಸರು ಶೆಲ್ ದಾಳಿ ನಡೆಸಿದರೆ, ದೇಶದ ರೈತರಿಗಾಗಿ ಸಾಯಲೂ ನಾವು ಸಿದ್ದ. ದೆಹಲಿಗೆ ತೆರಳುವ ವಿಚಾರದಲ್ಲಿ ನಾವು ಅಚಲವಾಗಿದ್ದೇವೆ. ಭದ್ರತಾ ಪಡೆಗಳ ಬಳಕೆ, ಗುಂಡಿನ ದಾಳಿಯಿಂದ ಏನಾದರು ಸಂಭವಿಸಿದರೆ ಬ್ಯಾರಿಕೇಡ್ ಹಾಕಿದವರೇ ಅದಕ್ಕೆ ನೇರ ಹೊಣೆ” ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ನಾವು ಶಾಂತಿಯುತವಾಗಿ ಮುಂದುವರೆಯಲು ನಿರ್ಧರಿಸಿದ್ದೇವೆ. ಆದರೆ, ಸರ್ಕಾರ ರೈತರ ರಕ್ತದಲ್ಲಿ ಹೋಳಿ ಆಡಲು ಭಯಸುತ್ತಿದೆ. ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ನಾವು ಯಾವುದೇ ಅಡೆತಡೆಗಳಿಲ್ಲದೆ ದೆಹಲಿ ಪ್ರವೇಶಿಸಲು ಅನುಮತಿ ನೀಡಬೇಕು. ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯ ಕರ್ತವ್ಯ ಎಂದು ದಲ್ಲೆವಾಲ್ ಮತ್ತು ಪಂಧೇರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ನಮ್ಮ ಕಡೆಯಿಂದ ಶಾಂತಿಯುತವಾಗಿ ಉಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ಇದು ಗುರುಕಾ ಬಾಗ್‌ನಂತಹ ಮೋರ್ಚಾ ಆಗಿರುತ್ತದೆ, ಅಲ್ಲಿ ನಾವು ಸರ್ಕಾರದ ಮೇಲೆ ಹೊರೆ ಹೊತ್ತಿದ್ದೇವೆ ಆದರೆ ಕೈ ಎತ್ತಲಿಲ್ಲ. ಕೇಂದ್ರವು ರೈತರ ರಕ್ತದಿಂದ ಹೋಳಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ. ಕಾರ್ಮಿಕರು, ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು, ಕೇಂದ್ರವು ಬೇಡಿಕೆಯನ್ನು ಒಪ್ಪಿಕೊಳ್ಳುವಲ್ಲಿ ಸ್ವಲ್ಪ ಅನುಮಾನವಿದೆ ಎಂದು ಭಾವಿಸಿದರೆ, ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯವರ ಕರ್ತವ್ಯ ಎಂದು ನಾವು ವಿನಂತಿಸುತ್ತೇವೆ, ಅದರಂತೆ ನಮಗೆ ಅವಕಾಶ ನೀಡಬೇಕು. ಅಡೆತಡೆಗಳನ್ನು ತೆರೆಯುವ ಮೂಲಕ ದೆಹಲಿಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ”ಎಂದು ದಲ್ಲೆವಾಲ್ ಅವರೊಂದಿಗೆ ಬೆಳಿಗ್ಗೆ ಮಾಧ್ಯಮಗೋಷ್ಠಿಯಲ್ಲಿ ಪಂಧೇರ್ ಹೇಳಿದರು.

ಇದನ್ನೂ ಓದಿ : ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...