Homeಮುಖಪುಟಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರನ್ನು ತಡೆಯಲು ಹರಿಯಾಣ-ಪಂಜಾಬ್‌ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಣಾಮ ಗಡಿ ಪ್ರದೇಶ ಯುದ್ಧ ಭೂಮಿಯಂತಾಗಿದೆ.

ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಪಂಜಾಬ್‌ನ ಭೂ ಪ್ರದೇಶದೊಳಗೆ ನುಗ್ಗಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ನಮ್ಮ ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ 100ಕ್ಕೂ ಅಧಿಕ ಪ್ರತಿಭಟನಾ ನಿರತರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನ 12:30ರ ಸುಮಾರಿಗೆ ಪಂಜಾಬ್‌-ಹರಿಯಾಣ ಗಡಿಯಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳ ಬಳಿ ರೈತರು ತಲುಪಿದಾಗ ಪೊಲೀಸರು ಅಶ್ರುವಾಯು ಶೆಲ್ ದಾಳಿ ಆರಂಭಿಸಿದ್ದರು. ಅಪರಾಹ್ನ 2 ಗಂಟೆಯವರೆಗೆ ಶೆಲ್ ದಾಳಿ ಮುಂದುವರೆದಿತ್ತು. ಈ ವೇಳೆ ಪೊಲೀಸರುನ್ನು ಎದುರಿಸಲು ರೈತರು ಜಮೀನಿಗೆ ತೆರಳಿ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಸಂಜೆ 3:15ರ ಸುಮಾರಿಗೆ ಪೊಲೀಸರು ಮತ್ತೆ ಶೆಲ್ ದಾಳಿ ಪುನರಾರಂಭಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಪೊಲೀಸರು ಪಂಜಾಬ್‌ನ ಭೂ ಪ್ರದೇಶದ ಕೃಷಿ ಭೂಮಿಗೆ ನುಗ್ಗಿ ರೈತರ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಎದುರಿಸಲು ರೈತರು ಹುಲ್ಲಿಗೆ ಬೆಂಕಿ ಹಾಕಿದಷ್ಟೆ, ಅವರಿಗೆ ಬಹಳ ಹಿಂಸೆಯಾಗಿದೆ. ಕಳೆದ ಒಂದು ವಾರದಿಂದ ಅವರು ರೈತರಿಗೆ ಅದೇ ರೀತಿಯ ಹಿಂಸೆ ನೀಡುತ್ತಿದ್ದಾರೆ. ಪೊಲೀಸರು 12 ಬೋರ್ ಗನ್‌ಗಳಿಂದ ನಮ್ಮ ಮೇಲೆ ಗುಂಡು ಹಾರಿಸಿದ್ದಾರೆ. ನಾವು ರೈತರು, ಭಯೋತ್ಪಾದಕರಲ್ಲ” ಎಂದು ಪೊಲೀಸ್ ದಾಳಿಯಿಂದ ಗಾಯಗೊಂಡ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸರೋನ್ ಗ್ರಾಮದ ರೈತ ಜರ್ನೈಲ್ ಸಿಂಗ್ (46) ಹೇಳಿದ್ದಾರೆ

ಹರಿಯಾಣ ಪೊಲೀಸರು ತಮ್ಮ ಗಡಿಯೊಳಗೆ ನುಗ್ಗಿರುವುದನ್ನು ಪಂಜಾಬ್‌ ಪೊಲೀಸರು ನಿರಾಕರಿಸಿದ್ದಾರೆ. ಬ್ಯಾರಿಕೇಡ್‌ನಿಂದ ಸುಮಾರು 500 ಮೀಟರ್ ಜಾಗ ಹರಿಯಾಣ ರಾಜ್ಯಕ್ಕೆ ಸೇರಿದ್ದು ಎಂದು ಪತ್ರಾನ್ ಡಿಎಸ್ಪಿ ದಲ್ಜಿತ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

“ಎರಡೂ ಕಡೆಯಿಂದ ಸಂಘರ್ಷದ ವರದಿಗಳು ಬಂದಿರುವುದರಿಂದ ನಾನು ಸತ್ಯಾಸತ್ಯತೆ ಪರಿಶೀಲಿಸುತ್ತೇನೆ. ಹರಿಯಾಣದ ವಾದವನ್ನು ಆಲಿಸುತ್ತೇನೆ. ಪ್ರತಿಭಟನಾ ನಿರತ ರೈತರು ಹುಲ್ಲು ಸುಟ್ಟಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆಯ ಸಂದರ್ಭ ನಾನು ಸ್ಥಳಲದಲ್ಲಿ ಇರಲಿಲ್ಲ. ಸತ್ಯಾಸತ್ಯತೆ ತಿಳಿದು ಮಾತನಾಡುತ್ತೇನೆ” ಎಂದು ಪಟಿಯಾಲ ಡೆಪ್ಯುಟಿ ಕಮಿಷನರ್ ಶೌಖತ್ ಅಹ್ಮದ್ ಪರ್ರೆ ಹೇಳಿದ್ದಾರೆ.

“ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ರೈತರ ಮೇಲೆ ದೌರ್ಜನ್ಯ ಎಸಗಿದ್ದು, ಒಬ್ಬ ರೈತನನ್ನು ಹತ್ಯೆ ಮಾಡಿದ್ದಾರೆ. ಹಲವರನ್ನು ಗಾಯಗೊಳಿಸಿದ್ದಾರೆ. ಪೊಲೀಸರು ಪಂಜಾಬ್ ಗಡಿಯೊಳಗೆ ನುಗ್ಗಿ ಟ್ರ್ಯಾಕ್ಟರ್‌ಗಳು ಸೇರಿದಂತೆ ರೈತರ ವಾಹನಗಳನ್ನು ಜಖಂಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರು ಶಾಂತಿಯುತವಾಗಿ ಮುಂದುವರಿಯಲು ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕೆಂದು ಅವರು ಬಯಸಿದ್ದರು ಆದರೆ ಪೊಲೀಸರು ಭಾರೀ ಶೆಲ್ ದಾಳಿ ನಡೆಸಿದರು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದರು. “ದೇಶದ ರೈತರ ಹಿತದೃಷ್ಟಿಯಿಂದ ನಾವು ಸಾಯಲು ಮತ್ತು ಗುಂಡು ಹಾರಿಸಲು ಸಿದ್ಧರಿದ್ದೇವೆ, ನಾವು ದೆಹಲಿ ತಲುಪಲು ಅಚಲವಾಗಿದ್ದೇವೆ, ಆದರೆ ಅವರು ಗುಂಡಿನ ದಾಳಿ ಮಾಡಿದರೆ ಅಥವಾ ಬಲಪ್ರಯೋಗ ಮಾಡಿದರೆ, ಏನು ಸಂಭವಿಸಿದರೂ ಈ ಬ್ಯಾರಿಕೇಡ್‌ಗಳನ್ನು ಹಾಕಿದವರ ಜವಾಬ್ದಾರಿ.” ದಲ್ಲೆವಾಲ್ ಮತ್ತು ಪಂಧೇರ್ ಹೇಳಿದರು.

“ರೈತರು ಶಾಂತಿಯುತವಾಗಿ ದೆಹಲಿಗೆ ತೆರಳಲು ಅನುಮತಿಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಾವು ಆಗ್ರಹಿಸುತ್ತೇವೆ. ಪೊಲೀಸರು ಶೆಲ್ ದಾಳಿ ನಡೆಸಿದರೆ, ದೇಶದ ರೈತರಿಗಾಗಿ ಸಾಯಲೂ ನಾವು ಸಿದ್ದ. ದೆಹಲಿಗೆ ತೆರಳುವ ವಿಚಾರದಲ್ಲಿ ನಾವು ಅಚಲವಾಗಿದ್ದೇವೆ. ಭದ್ರತಾ ಪಡೆಗಳ ಬಳಕೆ, ಗುಂಡಿನ ದಾಳಿಯಿಂದ ಏನಾದರು ಸಂಭವಿಸಿದರೆ ಬ್ಯಾರಿಕೇಡ್ ಹಾಕಿದವರೇ ಅದಕ್ಕೆ ನೇರ ಹೊಣೆ” ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ನಾವು ಶಾಂತಿಯುತವಾಗಿ ಮುಂದುವರೆಯಲು ನಿರ್ಧರಿಸಿದ್ದೇವೆ. ಆದರೆ, ಸರ್ಕಾರ ರೈತರ ರಕ್ತದಲ್ಲಿ ಹೋಳಿ ಆಡಲು ಭಯಸುತ್ತಿದೆ. ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ನಾವು ಯಾವುದೇ ಅಡೆತಡೆಗಳಿಲ್ಲದೆ ದೆಹಲಿ ಪ್ರವೇಶಿಸಲು ಅನುಮತಿ ನೀಡಬೇಕು. ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯ ಕರ್ತವ್ಯ ಎಂದು ದಲ್ಲೆವಾಲ್ ಮತ್ತು ಪಂಧೇರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ನಮ್ಮ ಕಡೆಯಿಂದ ಶಾಂತಿಯುತವಾಗಿ ಉಳಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ಇದು ಗುರುಕಾ ಬಾಗ್‌ನಂತಹ ಮೋರ್ಚಾ ಆಗಿರುತ್ತದೆ, ಅಲ್ಲಿ ನಾವು ಸರ್ಕಾರದ ಮೇಲೆ ಹೊರೆ ಹೊತ್ತಿದ್ದೇವೆ ಆದರೆ ಕೈ ಎತ್ತಲಿಲ್ಲ. ಕೇಂದ್ರವು ರೈತರ ರಕ್ತದಿಂದ ಹೋಳಿ ಆಡುತ್ತದೆ ಎಂದು ನಾವು ಭಾವಿಸುತ್ತೇವೆ. ಕಾರ್ಮಿಕರು, ಪ್ರಧಾನ ಮಂತ್ರಿಗಳು ಮುಂದೆ ಬಂದು ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು, ಕೇಂದ್ರವು ಬೇಡಿಕೆಯನ್ನು ಒಪ್ಪಿಕೊಳ್ಳುವಲ್ಲಿ ಸ್ವಲ್ಪ ಅನುಮಾನವಿದೆ ಎಂದು ಭಾವಿಸಿದರೆ, ಸಂವಿಧಾನವನ್ನು ರಕ್ಷಿಸುವುದು ಪ್ರಧಾನಿಯವರ ಕರ್ತವ್ಯ ಎಂದು ನಾವು ವಿನಂತಿಸುತ್ತೇವೆ, ಅದರಂತೆ ನಮಗೆ ಅವಕಾಶ ನೀಡಬೇಕು. ಅಡೆತಡೆಗಳನ್ನು ತೆರೆಯುವ ಮೂಲಕ ದೆಹಲಿಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ”ಎಂದು ದಲ್ಲೆವಾಲ್ ಅವರೊಂದಿಗೆ ಬೆಳಿಗ್ಗೆ ಮಾಧ್ಯಮಗೋಷ್ಠಿಯಲ್ಲಿ ಪಂಧೇರ್ ಹೇಳಿದರು.

ಇದನ್ನೂ ಓದಿ : ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...