Homeಮುಖಪುಟದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

- Advertisement -
- Advertisement -

ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲೆ ಹರಿಯಾಣದ ಶಂಭು ಗಡಿಯಲ್ಲಿ ಇಂದು (ಡಿ.14) ಪೊಲೀಸರು ಮತ್ತೊಮ್ಮೆ ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಪಂಜಾಬ್-ಹರಿಯಾಣ ಗಡಿ ಶಂಭು ಪ್ರದೇಶದ ಪ್ರತಿಭಟನಾ ಸ್ಥಳದಿಂದ 101 ರೈತರು ದೆಹಲಿಯತ್ತ ಕಾಲ್ನಡಿಗೆ ಜಾಥಾ ನಡೆಸಲು ಮುಂದಾದರು. ರೈತರು ಗಡಿ ದಾಟದಂತೆ ಹರಿಯಾಣ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ಬೇಧಿಸಿ ಮುನ್ನುಗ್ಗು ಯತ್ನಿಸಿದರು. ವೇಳೆ ಪೊಲೀಸರು ಅವರ ಮೇಲೆ ಬಲ ಪ್ರಯೋಗಿಸಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನಾತ್ಮಕ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರದ ಸರ್ಕಾರದ ಮೇಲೆ ಒತ್ತಡದ ಹೇರಲು ರೈತರು ಕಳೆದ ಫೆಬ್ರವರಿಯಿಂದ ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಅವರು ಗಡಿದಾಟಿ ದೆಹಲಿ ಪ್ರವೇಶಿಸಲು ಹರಿಯಾಣ ಪೊಲೀಸರು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಇಂದು ಮೂರನೇ ಬಾರಿಗೆ ರೈತರು ತಡೆಯನ್ನು ಬೇಧಿಸಿ ಮುನ್ನಗ್ಗಲು ಯತ್ನಿಸಿದ್ದಾರೆ.

ಈ ಹಿಂದೆ ಡಿಸೆಂಬರ್ 6 ಮತ್ತು 8ರಂದು ರೈತರು ದೆಹಲಿಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದರು. ಆಗ ಹರಿಯಾಣದ ಭದ್ರತಾ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾನೂನುಗಳ ವಿರುದ್ದದ ಸುದೀರ್ಘ ಹೋರಾಟದ ಬಳಿಕ ರೈತರು ಮತ್ತೊಂದು ಹೋರಾಟ ಕೈಗೊಂಡಿದ್ದಾರೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ತಮ್ಮೊಂದಿಗೆ ಮಾತುಕತೆ ನಡೆಸುವಂತೆ ರೈತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆ ತಡೆಯಲು ಹರಿಯಾಣದ ಅಂಬಾಲಾ ಜಿಲ್ಲಾಡಳಿತ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಕಾನೂನುಬಾಹಿರ ಸಭೆ ನಡೆಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಹರಿಯಾಣ ಸರ್ಕಾರ ಅಂಬಾಲಾದ 12 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್‌ಎಂಎಸ್‌ ಸೇವೆಗಳನ್ನು ಡಿಸೆಂಬರ್ 17 ರವರೆಗೆ ಸ್ಥಗಿತಗೊಳಿಸಿದೆ.

ರೈತ ಸಂಘಟನೆಗಳು ರಾಷ್ಟ್ರ ರಾಜಧಾನಿಯ ಆಡಳಿತದಿಂದ ಅನುಮತಿ ಪಡೆದ ನಂತರವೇ ದೆಹಲಿಗೆ ಮೆರವಣಿಗೆ ನಡೆಸಬಹುದು ಎಂದು ಅಂಬಾಲಾ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಇವೆಲ್ಲದದ ನಡುವೆ, ಖಾನೌರಿ ಗಡಿಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಇಂದಿಗೆ (ಶನಿವಾರ) 19 ನೇ ದಿನಕ್ಕೆ ಕಾಲಿಟ್ಟಿದೆ.

ದೀರ್ಘಕಾಲದ ಉಪವಾಸದಿಂದಾಗಿ ಅವರು ದುರ್ಬಲರಾಗಿದ್ದಾರೆ ಎಂದಿರುವ ವೈದ್ಯರು, ಈಗಾಗಲೇ ಆಸ್ಪತ್ರೆಗೆ ದಾಖಲಿಸಲು ಶಿಫಾರಸು ಮಾಡಿದ್ದಾರೆ.

ಪ್ರತಿಭಟನಾನಿರತ ರೈತರು ದಲ್ಲೆವಾಲ್ ಸುತ್ತಲೂ ಭದ್ರತಾ ವೃತ್ತ ರಚಿಸಿದ್ದಾರೆ. ಇದರಿಂದಾಗಿ ಸರ್ಕಾರದ ಅಧಿಕಾರಿಗಳು ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ.

ನವೆಂಬರ್ 26ರಂದು ಆಮರಣಾಂತ ಉಪವಾಸ ಆರಂಭಿಸುವ ಕೆಲವೇ ಗಂಟೆಗಳ ಮೊದಲು, ಪಂಜಾಬ್ ಪೊಲೀಸರು ದಲ್ಲೆವಾಲ್ ಅವರನ್ನು ಖಾನೌರಿ ಗಡಿಯಿಂದ ಬಲವಂತವಾಗಿ ಕರೆದೊಯ್ದಿದ್ದರು.

ಶುಕ್ರವಾರ(ಡಿ.13) ಎಸ್‌ಕೆಎಂ ನಾಯಕ ರಾಕೇಶ್ ಟಿಕಾಯತ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದ್ದು, ‘ಜಂಟಿ ಹೋರಾಟ’ಕ್ಕಾಗಿ ರೈತರ ಗುಂಪುಗಳ ಏಕತೆಗೆ ಕರೆ ನೀಡಿದ್ದಾರೆ.

ಬೆಳೆಗಳಿಗೆ ಎಂಎಸ್‌ಪಿ ನೀಡುವ ಕಾನೂನು ಖಾತರಿ, ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂಬುವುದು ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಗಳಾಗಿವೆ.

2013ರ ಭೂಸ್ವಾಧೀನ ಕಾಯ್ದೆಯ ಮರುಸ್ಥಾಪನೆ ಮತ್ತು 2020-21ರ ಹಿಂದಿನ ಆಂದೋಲನದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ : ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...