Homeಮುಖಪುಟದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

- Advertisement -
- Advertisement -

ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲೆ ಹರಿಯಾಣದ ಶಂಭು ಗಡಿಯಲ್ಲಿ ಇಂದು (ಡಿ.14) ಪೊಲೀಸರು ಮತ್ತೊಮ್ಮೆ ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಪಂಜಾಬ್-ಹರಿಯಾಣ ಗಡಿ ಶಂಭು ಪ್ರದೇಶದ ಪ್ರತಿಭಟನಾ ಸ್ಥಳದಿಂದ 101 ರೈತರು ದೆಹಲಿಯತ್ತ ಕಾಲ್ನಡಿಗೆ ಜಾಥಾ ನಡೆಸಲು ಮುಂದಾದರು. ರೈತರು ಗಡಿ ದಾಟದಂತೆ ಹರಿಯಾಣ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ಬೇಧಿಸಿ ಮುನ್ನುಗ್ಗು ಯತ್ನಿಸಿದರು. ವೇಳೆ ಪೊಲೀಸರು ಅವರ ಮೇಲೆ ಬಲ ಪ್ರಯೋಗಿಸಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನಾತ್ಮಕ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರದ ಸರ್ಕಾರದ ಮೇಲೆ ಒತ್ತಡದ ಹೇರಲು ರೈತರು ಕಳೆದ ಫೆಬ್ರವರಿಯಿಂದ ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಅವರು ಗಡಿದಾಟಿ ದೆಹಲಿ ಪ್ರವೇಶಿಸಲು ಹರಿಯಾಣ ಪೊಲೀಸರು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಇಂದು ಮೂರನೇ ಬಾರಿಗೆ ರೈತರು ತಡೆಯನ್ನು ಬೇಧಿಸಿ ಮುನ್ನಗ್ಗಲು ಯತ್ನಿಸಿದ್ದಾರೆ.

ಈ ಹಿಂದೆ ಡಿಸೆಂಬರ್ 6 ಮತ್ತು 8ರಂದು ರೈತರು ದೆಹಲಿಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದರು. ಆಗ ಹರಿಯಾಣದ ಭದ್ರತಾ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾನೂನುಗಳ ವಿರುದ್ದದ ಸುದೀರ್ಘ ಹೋರಾಟದ ಬಳಿಕ ರೈತರು ಮತ್ತೊಂದು ಹೋರಾಟ ಕೈಗೊಂಡಿದ್ದಾರೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ತಮ್ಮೊಂದಿಗೆ ಮಾತುಕತೆ ನಡೆಸುವಂತೆ ರೈತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆ ತಡೆಯಲು ಹರಿಯಾಣದ ಅಂಬಾಲಾ ಜಿಲ್ಲಾಡಳಿತ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಕಾನೂನುಬಾಹಿರ ಸಭೆ ನಡೆಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಹರಿಯಾಣ ಸರ್ಕಾರ ಅಂಬಾಲಾದ 12 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್‌ಎಂಎಸ್‌ ಸೇವೆಗಳನ್ನು ಡಿಸೆಂಬರ್ 17 ರವರೆಗೆ ಸ್ಥಗಿತಗೊಳಿಸಿದೆ.

ರೈತ ಸಂಘಟನೆಗಳು ರಾಷ್ಟ್ರ ರಾಜಧಾನಿಯ ಆಡಳಿತದಿಂದ ಅನುಮತಿ ಪಡೆದ ನಂತರವೇ ದೆಹಲಿಗೆ ಮೆರವಣಿಗೆ ನಡೆಸಬಹುದು ಎಂದು ಅಂಬಾಲಾ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಇವೆಲ್ಲದದ ನಡುವೆ, ಖಾನೌರಿ ಗಡಿಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಇಂದಿಗೆ (ಶನಿವಾರ) 19 ನೇ ದಿನಕ್ಕೆ ಕಾಲಿಟ್ಟಿದೆ.

ದೀರ್ಘಕಾಲದ ಉಪವಾಸದಿಂದಾಗಿ ಅವರು ದುರ್ಬಲರಾಗಿದ್ದಾರೆ ಎಂದಿರುವ ವೈದ್ಯರು, ಈಗಾಗಲೇ ಆಸ್ಪತ್ರೆಗೆ ದಾಖಲಿಸಲು ಶಿಫಾರಸು ಮಾಡಿದ್ದಾರೆ.

ಪ್ರತಿಭಟನಾನಿರತ ರೈತರು ದಲ್ಲೆವಾಲ್ ಸುತ್ತಲೂ ಭದ್ರತಾ ವೃತ್ತ ರಚಿಸಿದ್ದಾರೆ. ಇದರಿಂದಾಗಿ ಸರ್ಕಾರದ ಅಧಿಕಾರಿಗಳು ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ.

ನವೆಂಬರ್ 26ರಂದು ಆಮರಣಾಂತ ಉಪವಾಸ ಆರಂಭಿಸುವ ಕೆಲವೇ ಗಂಟೆಗಳ ಮೊದಲು, ಪಂಜಾಬ್ ಪೊಲೀಸರು ದಲ್ಲೆವಾಲ್ ಅವರನ್ನು ಖಾನೌರಿ ಗಡಿಯಿಂದ ಬಲವಂತವಾಗಿ ಕರೆದೊಯ್ದಿದ್ದರು.

ಶುಕ್ರವಾರ(ಡಿ.13) ಎಸ್‌ಕೆಎಂ ನಾಯಕ ರಾಕೇಶ್ ಟಿಕಾಯತ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದ್ದು, ‘ಜಂಟಿ ಹೋರಾಟ’ಕ್ಕಾಗಿ ರೈತರ ಗುಂಪುಗಳ ಏಕತೆಗೆ ಕರೆ ನೀಡಿದ್ದಾರೆ.

ಬೆಳೆಗಳಿಗೆ ಎಂಎಸ್‌ಪಿ ನೀಡುವ ಕಾನೂನು ಖಾತರಿ, ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂಬುವುದು ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಗಳಾಗಿವೆ.

2013ರ ಭೂಸ್ವಾಧೀನ ಕಾಯ್ದೆಯ ಮರುಸ್ಥಾಪನೆ ಮತ್ತು 2020-21ರ ಹಿಂದಿನ ಆಂದೋಲನದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ : ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...