Homeಮುಖಪುಟದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

- Advertisement -
- Advertisement -

ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲೆ ಹರಿಯಾಣದ ಶಂಭು ಗಡಿಯಲ್ಲಿ ಇಂದು (ಡಿ.14) ಪೊಲೀಸರು ಮತ್ತೊಮ್ಮೆ ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಪಂಜಾಬ್-ಹರಿಯಾಣ ಗಡಿ ಶಂಭು ಪ್ರದೇಶದ ಪ್ರತಿಭಟನಾ ಸ್ಥಳದಿಂದ 101 ರೈತರು ದೆಹಲಿಯತ್ತ ಕಾಲ್ನಡಿಗೆ ಜಾಥಾ ನಡೆಸಲು ಮುಂದಾದರು. ರೈತರು ಗಡಿ ದಾಟದಂತೆ ಹರಿಯಾಣ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ಬೇಧಿಸಿ ಮುನ್ನುಗ್ಗು ಯತ್ನಿಸಿದರು. ವೇಳೆ ಪೊಲೀಸರು ಅವರ ಮೇಲೆ ಬಲ ಪ್ರಯೋಗಿಸಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನಾತ್ಮಕ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರದ ಸರ್ಕಾರದ ಮೇಲೆ ಒತ್ತಡದ ಹೇರಲು ರೈತರು ಕಳೆದ ಫೆಬ್ರವರಿಯಿಂದ ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಅವರು ಗಡಿದಾಟಿ ದೆಹಲಿ ಪ್ರವೇಶಿಸಲು ಹರಿಯಾಣ ಪೊಲೀಸರು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಇಂದು ಮೂರನೇ ಬಾರಿಗೆ ರೈತರು ತಡೆಯನ್ನು ಬೇಧಿಸಿ ಮುನ್ನಗ್ಗಲು ಯತ್ನಿಸಿದ್ದಾರೆ.

ಈ ಹಿಂದೆ ಡಿಸೆಂಬರ್ 6 ಮತ್ತು 8ರಂದು ರೈತರು ದೆಹಲಿಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದರು. ಆಗ ಹರಿಯಾಣದ ಭದ್ರತಾ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾನೂನುಗಳ ವಿರುದ್ದದ ಸುದೀರ್ಘ ಹೋರಾಟದ ಬಳಿಕ ರೈತರು ಮತ್ತೊಂದು ಹೋರಾಟ ಕೈಗೊಂಡಿದ್ದಾರೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ತಮ್ಮೊಂದಿಗೆ ಮಾತುಕತೆ ನಡೆಸುವಂತೆ ರೈತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆ ತಡೆಯಲು ಹರಿಯಾಣದ ಅಂಬಾಲಾ ಜಿಲ್ಲಾಡಳಿತ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಕಾನೂನುಬಾಹಿರ ಸಭೆ ನಡೆಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಹರಿಯಾಣ ಸರ್ಕಾರ ಅಂಬಾಲಾದ 12 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್‌ಎಂಎಸ್‌ ಸೇವೆಗಳನ್ನು ಡಿಸೆಂಬರ್ 17 ರವರೆಗೆ ಸ್ಥಗಿತಗೊಳಿಸಿದೆ.

ರೈತ ಸಂಘಟನೆಗಳು ರಾಷ್ಟ್ರ ರಾಜಧಾನಿಯ ಆಡಳಿತದಿಂದ ಅನುಮತಿ ಪಡೆದ ನಂತರವೇ ದೆಹಲಿಗೆ ಮೆರವಣಿಗೆ ನಡೆಸಬಹುದು ಎಂದು ಅಂಬಾಲಾ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಇವೆಲ್ಲದದ ನಡುವೆ, ಖಾನೌರಿ ಗಡಿಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಇಂದಿಗೆ (ಶನಿವಾರ) 19 ನೇ ದಿನಕ್ಕೆ ಕಾಲಿಟ್ಟಿದೆ.

ದೀರ್ಘಕಾಲದ ಉಪವಾಸದಿಂದಾಗಿ ಅವರು ದುರ್ಬಲರಾಗಿದ್ದಾರೆ ಎಂದಿರುವ ವೈದ್ಯರು, ಈಗಾಗಲೇ ಆಸ್ಪತ್ರೆಗೆ ದಾಖಲಿಸಲು ಶಿಫಾರಸು ಮಾಡಿದ್ದಾರೆ.

ಪ್ರತಿಭಟನಾನಿರತ ರೈತರು ದಲ್ಲೆವಾಲ್ ಸುತ್ತಲೂ ಭದ್ರತಾ ವೃತ್ತ ರಚಿಸಿದ್ದಾರೆ. ಇದರಿಂದಾಗಿ ಸರ್ಕಾರದ ಅಧಿಕಾರಿಗಳು ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ.

ನವೆಂಬರ್ 26ರಂದು ಆಮರಣಾಂತ ಉಪವಾಸ ಆರಂಭಿಸುವ ಕೆಲವೇ ಗಂಟೆಗಳ ಮೊದಲು, ಪಂಜಾಬ್ ಪೊಲೀಸರು ದಲ್ಲೆವಾಲ್ ಅವರನ್ನು ಖಾನೌರಿ ಗಡಿಯಿಂದ ಬಲವಂತವಾಗಿ ಕರೆದೊಯ್ದಿದ್ದರು.

ಶುಕ್ರವಾರ(ಡಿ.13) ಎಸ್‌ಕೆಎಂ ನಾಯಕ ರಾಕೇಶ್ ಟಿಕಾಯತ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದ್ದು, ‘ಜಂಟಿ ಹೋರಾಟ’ಕ್ಕಾಗಿ ರೈತರ ಗುಂಪುಗಳ ಏಕತೆಗೆ ಕರೆ ನೀಡಿದ್ದಾರೆ.

ಬೆಳೆಗಳಿಗೆ ಎಂಎಸ್‌ಪಿ ನೀಡುವ ಕಾನೂನು ಖಾತರಿ, ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂಬುವುದು ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಗಳಾಗಿವೆ.

2013ರ ಭೂಸ್ವಾಧೀನ ಕಾಯ್ದೆಯ ಮರುಸ್ಥಾಪನೆ ಮತ್ತು 2020-21ರ ಹಿಂದಿನ ಆಂದೋಲನದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ : ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...