Homeದಲಿತ್ ಫೈಲ್ಸ್ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

- Advertisement -
- Advertisement -

ಹರಿಯಾಣದ ಸಾರ್ವಜನಿಕ ಆರೋಗ್ಯ ಇಲಾಖೆಯ ದಲಿತ ಗುತ್ತಿಗೆ ಕಾರ್ಮಿಕರೊಬ್ಬರನ್ನು ರಾಜ್ಯ ನಾಗರಿಕ ಸೇವಾ ಅಧಿಕಾರಿಯೊಬ್ಬರು ಗನ್‌ಪಾಯಿಂಟ್‌ನಲ್ಲಿ ಇಟ್ಟು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ವರದಿಯಾಗಿದ್ದು, ಗುರುವಾರ ಪೊಲೀಸರು ದೂರುದಾರರನ್ನು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಕೇಳಿಕೊಂಡಿದ್ದಾರೆ. ಹರಿಯಾಣ

ಈ ನಡುವೆ ಜಿಲ್ಲೆಯೊಂದರಲ್ಲಿ ನಿಯೋಜಿಸಲಾದ ಹರಿಯಾಣ ನಾಗರಿಕ ಸೇವೆಗಳ (ಎಚ್‌ಸಿಎಸ್) ಅಧಿಕಾರಿಯನ್ನು ರಾಜ್ಯ ಸರ್ಕಾರ ಗುರುವಾರ ಸಂಜೆ ಅಮಾನತುಗೊಳಿಸಿದೆ. ಅದಾಗ್ಯೂ, ಅವರ ಅಮಾನತು ಆದೇಶದಲ್ಲಿ ಯಾವುದೇ ಕಾರಣವನ್ನು ಉಲ್ಲೇಖಿಸಲಾಗಿಲ್ಲ. ಅಧಿಕಾರಿಯು ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂತ್ರಸ್ತ ದಲಿತ ವ್ಯಕ್ತಿ ಆರೋಪಿಸಿದ್ದಾರೆ. ಸಂತ್ರಸ್ತ ವ್ಯಕ್ತಿಯು ಅಂಚೆ ಮೂಲಕ ದೂರನ್ನು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆ ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅವರು ಆರೋಪಿಸಿದ್ದು, ತನ್ನ ದೂರಿನ ಪ್ರತಿಯನ್ನು ಪೊಲೀಸರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿರುವುದಾಗಿ ಹೇಳಿದ್ದಾರೆ.

ಎಚ್‌ಸಿಎಸ್ ಅಧಿಕಾರಿ ತನ್ನನ್ನು ಗುತ್ತಿಗೆ ಆಧಾರದ ಮೇಲೆ ಪ್ಯೂನ್ ಆಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಹೇಳಿಕೊಂಡ ಸಂತ್ರಸ್ತ ವ್ಯಕ್ತಿ ಹೇಳಿಕೊಂಡಿದ್ದಾರೆ. ಹರಿಯಾಣ

“ಅವರು ತಮ್ಮ ಅಧಿಕೃತ ನಿವಾಸದಲ್ಲಿ ಮಸಾಜ್‌ಗಾಗಿ ನನ್ನನ್ನು ಕರೆಯುತ್ತಿದ್ದರು. ಅವರು ತಪ್ಪು ಕೆಲಸ ಮಾಡಲು ಪ್ರಾರಂಭಿಸಿದಾಗ, ಅದಕ್ಕೆ ಹಲವಾರು ಬಾರಿ ನಾನು ನಿರಾಕರಿಸಿದ್ದೆ. ಆದರೆ ಅವರು ಪಿಸ್ತೂಲ್ ಹಿಡಿದು ಬೆದರಿಸಿ ನನ್ನನ್ನು ಕೆಲಸದಿಂದ ತೆಗೆದುಹಾಕುವುದಾಗಿ ಹೇಳಿದ್ದರು. ಅದರ ನಂತರ, ನಾನು ಸಾಕ್ಷ್ಯವನ್ನು ಸಂಗ್ರಹಿಸಲು ಈ ಶೋಷಣೆಯ ವೀಡಿಯೊವನ್ನು ಚಿತ್ರೀಕರಿಸಿದ್ದೇನೆ” ಎಂದು ಸಂತ್ರಸ್ತ ದಲಿತ ವ್ಯಕ್ತಿ ಹೇಳಿದ್ದಾರೆ.

“ಅದರ ನಂತರ ನಾನು ಅಲ್ಲಿಗೆ ಹೋಗುವುದನ್ನು ನಿಲ್ಲಿಸಿದೆ. ನಾನು ಸಾಯಲು ಅಥವಾ ಅವರ ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದೆ. ನಾನು ಹೃದ್ರೋಗ ರೋಗಿಯಾಗಿದ್ದು, ಈ ಶೋಷಣೆ ಕಳೆದ ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಸಂತ್ರಸ್ತ ವ್ಯಕ್ತಿಯಿಂದ ಅಂಚೆ ಮೂಲಕ ದೂರು ಸ್ವೀಕರಿಸಿದ್ದೇವೆ ಎಂದು ಹಿಸಾರ್‌ನ ಪೊಲೀಸ್ ವರಿಷ್ಠಾಧಿಕಾರಿ ಶಶಾಂಕ್ ಕುಮಾರ್ ಸಾವನ್ ಗುರುವಾರ ಹೇಳಿದ್ದಾರೆ. ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನಾವು ಅವರನ್ನು ಕರೆಸಿದ್ದೇವೆ ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: ‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...