Homeಮುಖಪುಟಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಅಪ್ರಾಪ್ತ ಬಾಲಕಿ ಮತ್ತು ದಲಿತ ಯುವ ದಲಿತ ಮಹಿಳೆ ಜುಲೈ 5 ರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಲ್ ಜೈಲಿನಲ್ಲಿದ್ದರು.

- Advertisement -
- Advertisement -

ಪೊಲೀಸರ ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ದಲಿತ ಮಹಿಳೆ ಮತ್ತು ಆಕೆಯ ಸಂಬಂಧಿಯಾದ ಅಪ್ರಾಪ್ತ ಯುವತಿಯ ಮೇಲೆ ಕಸ್ಟಡಿಯಲ್ಲಿಯೇ ಹರಿಯಾಣ ಪೊಲೀಸರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಅಪ್ರಾಪ್ತೆಯ ತಾಯಿ ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ವಿಚಾರಣೆ ನಡೆಸುತ್ತಿದೆ.

ಜುಲೈ 30 ರಂದು ಸೋನಿಪತ್ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ಯುವತಿಯ ತಾಯಿ ದಾಖಲಿಸಿದ ಎಫ್‌ಐಆರ್‌ ಪ್ರಕಾರ, “3 ಜನ ಆರೋಪಿಗಳಾದ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಸಂಜಯ್, ವಿಶೇಷ ಪೊಲೀಸ್ ಅಧಿಕಾರಿ ರಾಢೆ ಮತ್ತು ಕಾನ್‌ಸ್ಟಬಲ್ ಸಂದೀಪ್ ಸೇರಿದಂತೆ 7-9 ಪೊಲೀಸರು ಬಂಧನದಲ್ಲಿದ್ದ ಇಬ್ಬರನ್ನು ಜುಲೈ 3-5ರ ನಡುವೆ ರೋಡಾ ಪೊಲೀಸ್ ಠಾಣೆ ಕಸ್ಟಡಿಯಲ್ಲಿಯೇ ಅತ್ಯಾಚಾರ ಮಾಡಿದ್ದಾರೆ” ಎಂದು ಆರೋಪಿಸಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಿರುವ ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ಮತ್ತು ಐಪಿಸಿ 376(2)(ಎ,ಡಿ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಗಸ್ಟ್ 22 ರಂದು 18 ನೇ ವರ್ಷಕ್ಕೆ ಕಾಲಿಟ್ಟ ಅಪ್ರಾಪ್ತ ಬಾಲಕಿ ಮತ್ತು ದಲಿತ ಮಹಿಳೆ ಜುಲೈ 5 ರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಲ್ ಜೈಲಿನಲ್ಲಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ: ಆಸ್ಪತ್ರೆ ಪಾರ್ಕಿಂಗ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕಳೆದ ಹದಿನೈದು ದಿನಗಳಲ್ಲಿ ಈ ಪ್ರಕರಣವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಗಮನ ಸೆಳೆದಿದ್ದು, ಈ ಪ್ರಕರಣದ ತನಿಖೆ ನಡೆಸಲು ಅಕ್ಟೋಬರ್ 22 ರಂದು ಹರಿಯಾಣ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಇಬ್ಬರು ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಮತ್ತು ಆರೋಪಿ ಪೊಲೀಸರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಹಲವಾರು ದಲಿತ ಸಂಘಟನೆಗಳು ಕೂಡ ಈ ವಿಷಯದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

“ನಾವು ಎಎಸ್‌ಪಿ ನಿಕಿತಾ ಖಟ್ಟರ್ ಅವರ ಮುಂದಾಳತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದೇವೆ. ಇದು ಪ್ರಕರಣದ ತನಿಖೆ ನಡೆಸುತ್ತಿದೆ. ಮಹಿಳಾ ಠಾಣಾಧಿಕಾರಿ ಇನ್ಸ್‌ಪೆಕ್ಟರ್ ಪ್ರಮಿಳಾ ಸಹ ಈ ತಂಡಕ್ಕೆ ಸಹಾಯ ಮಾಡುತ್ತಿದ್ದಾರೆ” ಎಂದು ಸೋನಿಪತ್‌ನ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಶಂದೀಪ್ ಸಿಂಗ್ ರಾಂಧವಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಇಬ್ಬರು ಪೊಲೀಸರ ಹತ್ಯೆಯೊಂದಿಗೆ ಪ್ರಾರಂಭವಾದ ಪ್ರಕರಣ!

ಹತ್ಯೆಯಾದ ಹರಿಯಾಣದ ಪೊಲೀಸ್‌ ಸಿಬ್ಬಂದಿಯೊಬ್ಬರು, ಸಾಯುವ ಮುನ್ನ ತನ್ನ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಾಹನ ಸಂಖ್ಯೆಯನ್ನು ತನ್ನ ಅಂಗೈಯಲ್ಲೇ ಬರೆದುಕೊಂಡಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು.

ಸೋನಿಪತ್‌ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ 43 ವರ್ಷದ ವಿಶೇಷ ಪೊಲೀಸ್‌ ಅಧಿಕಾರಿ ಕಪ್ತಾನ್‌ ಸಿಂಗ್ ಮತ್ತು ರವೀಂದ್ರ ಕುಮಾರ್‌ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಹತ್ಯೆಯಾದ ಪೊಲೀಸ್‌ ಸಿಬ್ಬಂದಿ ಪೈಕಿ 28 ವರ್ಷದ ರವೀಂದ್ರ ಕುಮಾರ್‌, ಸಾವಿಗೂ ಮುನ್ನ ತಮ್ಮ ಅಂಗೈಯಲ್ಲಿ ಆರೋಪಿಗಳ ವಾಹನ ಸಂಖ್ಯೆಯಲ್ಲಿ ಬರೆದಿದ್ದರು. ಈ ಸಂಖ್ಯೆಯನ್ನೇ ಬಳಸಿಕೊಂಡು ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. ಇದರ ಆಧಾರದ ಮೇಲೆ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ಜಿಂದ್‌ ಜಿಲ್ಲೆಯಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವನ್ನಪಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾ

ಮೃತದೇಹದ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ರವೀಂದ್ರ ಕುಮಾರ್‌ ಅಂಗೈಯಲ್ಲಿದ್ದ ಸಂಖ್ಯೆ ಬೆಳಕಿಗೆ ಬಂದಿತ್ತು. ಮರಣೋತ್ತರ ಪೊಲೀಸ್‌ ಪದಕಕ್ಕೆ ರವೀಂದ್ರ ಕುಮಾರ್‌ ಅವರ ಹೆಸರನ್ನು ಶಿಫಾರಸು ಮಾಡಲಾಗುವುದು’ ಎಂದು ಹರಿಯಾಣ ಪೊಲೀಸ್‌ ಮುಖ್ಯಸ್ಥ ಮನೋಜ್‌ ಯಾದವ್‌ ತಿಳಿಸಿದ್ದರು.

ಸೋನಿಪತ್‌–ಜಿಂದ್‌ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಆರೋಪಿಗಳನ್ನು ರವೀಂದ್ರ ಕುಮಾರ್‌ ಹಾಗೂ ಕಪ್ತಾನ್‌ ಸಿಂಗ್‌ ತಡೆದಿದ್ದರು. ಅದರಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಆರೋಪಿಗಳ ಸಂಬಂಧಿಕರು ಇದ್ದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ, ಜಿಂದ್‌ ಕಡೆಗೆ ಪರಾರಿಯಾಗಿದ್ದರು. ಅದೇ ದಿನ ಅಮಿತ್ ಎಂಬುವವನನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿತ್ತು. ಈತನೂ ಸೇರಿದಂತೆ 3 ಜನರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಇದಾದ ನಂತರ ಅಪ್ರಾಪ್ತ ಬಾಲಕಿ ಮತ್ತು ಮಹಿಳೆಯನ್ನು ಬಂಧಿಸಲಾಗಿತ್ತು” ಎಂದು ಪೊಲಿಸರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಇದನ್ನು ನಿರಾಕರಿಸಿದ ಅಪ್ರಾಪ್ತ ಬಾಲಕಿಯ ತಾಯಿ, “ಪ್ರಕರಣದ ಪ್ರಮುಖ ಆರೋಪಿ ಅಮಿತ್ ಮತ್ತು ತನ್ನ ಮಗಳಿಗೆ ಮದುವೆ ನಿಶ್ಚಯವಾಗಿತ್ತು. ಅವನನ್ನು ಭೇಟಿ ಮಾಡಲು ತನ್ನ ಸಂಬಂಧಿಯೊಂದಿಗೆ ಹೋಗಿದ್ದಳು. ಆ ಸಂದರ್ಭದಲ್ಲಿ, ಯುವತಿಯನ್ನು ತಮ್ಮೊಟ್ಟಿಗೆ ಕಳುಹಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಇದರಿಂದ ಪರಿಸ್ಥಿತಿ ಉಲ್ಬಣವಾಯಿತು. ಪೊಲೀಸರು ಈ ಪ್ರಕರಣದಲ್ಲಿ ನಮಗೆ ಕಿರುಕುಳ ನೀಡುತ್ತಿದ್ದರು. ಹಾಗಾಗಿ ತನ್ನ ಮಗಳನ್ನು ಜುಲೈ 2 ರಂದು ಶರಣಾಗಲು ಠಾಣೆಗೆ ಕರೆದೊಯ್ದಿದ್ದೆ. ಅಲ್ಲಿ ಕಸ್ಟಡಿಯಲ್ಲಿಯೇ ಅವರ ಮೇಲೆ ದೌರ್ಜನ್ಯ ಎಸಗಿ, ಬರ್ಬರವಾಗಿ ಅತ್ಯಾಚಾರ ಮಾಡಲಾಗಿದೆ. ಆದರೆ ವೈದ್ಯಕೀಯ ಪರೀಕ್ಷೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ” ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತನಿಖಾ ತಂಡ ಹೇಳಿದೆ. ಆದರೆ ಅದರಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಸಾಕ್ಷ್ಯಗಳಿಲ್ಲ. ಆದರೆ ದೈಹಿಕ ಹಿಂಸೆ ನೀಡಿರುವುದರ ಬಗ್ಗೆ ಗುರುತುಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದರ ಕುರಿತು ಸಂತ್ರಸ್ತರ ಹೇಳಿಕೆಗಳು ಬಹುತೇಕ ಒಂದೇ ರೀತಿಯಲ್ಲಿವೆ. ಹಾಗಾಗಿ ಇದು ಗಂಭೀರ ಸ್ವರೂಪದ ಪ್ರಕರಣವಾಗಿದ್ದು, ಅವರನ್ನು ಅಪರಾಧ ಸ್ಥಳಕ್ಕೆ ವಿಚಾರಣೆಗೆಂದು ಕರೆದೊಯ್ಯಲಾಗುತ್ತಿದೆ ಎಂದು ತನಿಖಾ ತಂಡ ಹೇಳಿದೆ.


ಇದನ್ನೂ ಓದಿ: ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...