Homeಮುಖಪುಟಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಅಪ್ರಾಪ್ತ ಬಾಲಕಿ ಮತ್ತು ದಲಿತ ಯುವ ದಲಿತ ಮಹಿಳೆ ಜುಲೈ 5 ರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಲ್ ಜೈಲಿನಲ್ಲಿದ್ದರು.

- Advertisement -
- Advertisement -

ಪೊಲೀಸರ ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ದಲಿತ ಮಹಿಳೆ ಮತ್ತು ಆಕೆಯ ಸಂಬಂಧಿಯಾದ ಅಪ್ರಾಪ್ತ ಯುವತಿಯ ಮೇಲೆ ಕಸ್ಟಡಿಯಲ್ಲಿಯೇ ಹರಿಯಾಣ ಪೊಲೀಸರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಅಪ್ರಾಪ್ತೆಯ ತಾಯಿ ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ವಿಚಾರಣೆ ನಡೆಸುತ್ತಿದೆ.

ಜುಲೈ 30 ರಂದು ಸೋನಿಪತ್ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ಯುವತಿಯ ತಾಯಿ ದಾಖಲಿಸಿದ ಎಫ್‌ಐಆರ್‌ ಪ್ರಕಾರ, “3 ಜನ ಆರೋಪಿಗಳಾದ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಸಂಜಯ್, ವಿಶೇಷ ಪೊಲೀಸ್ ಅಧಿಕಾರಿ ರಾಢೆ ಮತ್ತು ಕಾನ್‌ಸ್ಟಬಲ್ ಸಂದೀಪ್ ಸೇರಿದಂತೆ 7-9 ಪೊಲೀಸರು ಬಂಧನದಲ್ಲಿದ್ದ ಇಬ್ಬರನ್ನು ಜುಲೈ 3-5ರ ನಡುವೆ ರೋಡಾ ಪೊಲೀಸ್ ಠಾಣೆ ಕಸ್ಟಡಿಯಲ್ಲಿಯೇ ಅತ್ಯಾಚಾರ ಮಾಡಿದ್ದಾರೆ” ಎಂದು ಆರೋಪಿಸಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಿರುವ ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ಮತ್ತು ಐಪಿಸಿ 376(2)(ಎ,ಡಿ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಗಸ್ಟ್ 22 ರಂದು 18 ನೇ ವರ್ಷಕ್ಕೆ ಕಾಲಿಟ್ಟ ಅಪ್ರಾಪ್ತ ಬಾಲಕಿ ಮತ್ತು ದಲಿತ ಮಹಿಳೆ ಜುಲೈ 5 ರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಲ್ ಜೈಲಿನಲ್ಲಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ: ಆಸ್ಪತ್ರೆ ಪಾರ್ಕಿಂಗ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕಳೆದ ಹದಿನೈದು ದಿನಗಳಲ್ಲಿ ಈ ಪ್ರಕರಣವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಗಮನ ಸೆಳೆದಿದ್ದು, ಈ ಪ್ರಕರಣದ ತನಿಖೆ ನಡೆಸಲು ಅಕ್ಟೋಬರ್ 22 ರಂದು ಹರಿಯಾಣ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಇಬ್ಬರು ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಮತ್ತು ಆರೋಪಿ ಪೊಲೀಸರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಹಲವಾರು ದಲಿತ ಸಂಘಟನೆಗಳು ಕೂಡ ಈ ವಿಷಯದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

“ನಾವು ಎಎಸ್‌ಪಿ ನಿಕಿತಾ ಖಟ್ಟರ್ ಅವರ ಮುಂದಾಳತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದೇವೆ. ಇದು ಪ್ರಕರಣದ ತನಿಖೆ ನಡೆಸುತ್ತಿದೆ. ಮಹಿಳಾ ಠಾಣಾಧಿಕಾರಿ ಇನ್ಸ್‌ಪೆಕ್ಟರ್ ಪ್ರಮಿಳಾ ಸಹ ಈ ತಂಡಕ್ಕೆ ಸಹಾಯ ಮಾಡುತ್ತಿದ್ದಾರೆ” ಎಂದು ಸೋನಿಪತ್‌ನ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಶಂದೀಪ್ ಸಿಂಗ್ ರಾಂಧವಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಇಬ್ಬರು ಪೊಲೀಸರ ಹತ್ಯೆಯೊಂದಿಗೆ ಪ್ರಾರಂಭವಾದ ಪ್ರಕರಣ!

ಹತ್ಯೆಯಾದ ಹರಿಯಾಣದ ಪೊಲೀಸ್‌ ಸಿಬ್ಬಂದಿಯೊಬ್ಬರು, ಸಾಯುವ ಮುನ್ನ ತನ್ನ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಾಹನ ಸಂಖ್ಯೆಯನ್ನು ತನ್ನ ಅಂಗೈಯಲ್ಲೇ ಬರೆದುಕೊಂಡಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು.

ಸೋನಿಪತ್‌ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ 43 ವರ್ಷದ ವಿಶೇಷ ಪೊಲೀಸ್‌ ಅಧಿಕಾರಿ ಕಪ್ತಾನ್‌ ಸಿಂಗ್ ಮತ್ತು ರವೀಂದ್ರ ಕುಮಾರ್‌ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಹತ್ಯೆಯಾದ ಪೊಲೀಸ್‌ ಸಿಬ್ಬಂದಿ ಪೈಕಿ 28 ವರ್ಷದ ರವೀಂದ್ರ ಕುಮಾರ್‌, ಸಾವಿಗೂ ಮುನ್ನ ತಮ್ಮ ಅಂಗೈಯಲ್ಲಿ ಆರೋಪಿಗಳ ವಾಹನ ಸಂಖ್ಯೆಯಲ್ಲಿ ಬರೆದಿದ್ದರು. ಈ ಸಂಖ್ಯೆಯನ್ನೇ ಬಳಸಿಕೊಂಡು ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. ಇದರ ಆಧಾರದ ಮೇಲೆ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ಜಿಂದ್‌ ಜಿಲ್ಲೆಯಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವನ್ನಪಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾ

ಮೃತದೇಹದ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ರವೀಂದ್ರ ಕುಮಾರ್‌ ಅಂಗೈಯಲ್ಲಿದ್ದ ಸಂಖ್ಯೆ ಬೆಳಕಿಗೆ ಬಂದಿತ್ತು. ಮರಣೋತ್ತರ ಪೊಲೀಸ್‌ ಪದಕಕ್ಕೆ ರವೀಂದ್ರ ಕುಮಾರ್‌ ಅವರ ಹೆಸರನ್ನು ಶಿಫಾರಸು ಮಾಡಲಾಗುವುದು’ ಎಂದು ಹರಿಯಾಣ ಪೊಲೀಸ್‌ ಮುಖ್ಯಸ್ಥ ಮನೋಜ್‌ ಯಾದವ್‌ ತಿಳಿಸಿದ್ದರು.

ಸೋನಿಪತ್‌–ಜಿಂದ್‌ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಆರೋಪಿಗಳನ್ನು ರವೀಂದ್ರ ಕುಮಾರ್‌ ಹಾಗೂ ಕಪ್ತಾನ್‌ ಸಿಂಗ್‌ ತಡೆದಿದ್ದರು. ಅದರಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಆರೋಪಿಗಳ ಸಂಬಂಧಿಕರು ಇದ್ದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ, ಜಿಂದ್‌ ಕಡೆಗೆ ಪರಾರಿಯಾಗಿದ್ದರು. ಅದೇ ದಿನ ಅಮಿತ್ ಎಂಬುವವನನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿತ್ತು. ಈತನೂ ಸೇರಿದಂತೆ 3 ಜನರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಇದಾದ ನಂತರ ಅಪ್ರಾಪ್ತ ಬಾಲಕಿ ಮತ್ತು ಮಹಿಳೆಯನ್ನು ಬಂಧಿಸಲಾಗಿತ್ತು” ಎಂದು ಪೊಲಿಸರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಇದನ್ನು ನಿರಾಕರಿಸಿದ ಅಪ್ರಾಪ್ತ ಬಾಲಕಿಯ ತಾಯಿ, “ಪ್ರಕರಣದ ಪ್ರಮುಖ ಆರೋಪಿ ಅಮಿತ್ ಮತ್ತು ತನ್ನ ಮಗಳಿಗೆ ಮದುವೆ ನಿಶ್ಚಯವಾಗಿತ್ತು. ಅವನನ್ನು ಭೇಟಿ ಮಾಡಲು ತನ್ನ ಸಂಬಂಧಿಯೊಂದಿಗೆ ಹೋಗಿದ್ದಳು. ಆ ಸಂದರ್ಭದಲ್ಲಿ, ಯುವತಿಯನ್ನು ತಮ್ಮೊಟ್ಟಿಗೆ ಕಳುಹಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಇದರಿಂದ ಪರಿಸ್ಥಿತಿ ಉಲ್ಬಣವಾಯಿತು. ಪೊಲೀಸರು ಈ ಪ್ರಕರಣದಲ್ಲಿ ನಮಗೆ ಕಿರುಕುಳ ನೀಡುತ್ತಿದ್ದರು. ಹಾಗಾಗಿ ತನ್ನ ಮಗಳನ್ನು ಜುಲೈ 2 ರಂದು ಶರಣಾಗಲು ಠಾಣೆಗೆ ಕರೆದೊಯ್ದಿದ್ದೆ. ಅಲ್ಲಿ ಕಸ್ಟಡಿಯಲ್ಲಿಯೇ ಅವರ ಮೇಲೆ ದೌರ್ಜನ್ಯ ಎಸಗಿ, ಬರ್ಬರವಾಗಿ ಅತ್ಯಾಚಾರ ಮಾಡಲಾಗಿದೆ. ಆದರೆ ವೈದ್ಯಕೀಯ ಪರೀಕ್ಷೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ” ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತನಿಖಾ ತಂಡ ಹೇಳಿದೆ. ಆದರೆ ಅದರಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಸಾಕ್ಷ್ಯಗಳಿಲ್ಲ. ಆದರೆ ದೈಹಿಕ ಹಿಂಸೆ ನೀಡಿರುವುದರ ಬಗ್ಗೆ ಗುರುತುಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದರ ಕುರಿತು ಸಂತ್ರಸ್ತರ ಹೇಳಿಕೆಗಳು ಬಹುತೇಕ ಒಂದೇ ರೀತಿಯಲ್ಲಿವೆ. ಹಾಗಾಗಿ ಇದು ಗಂಭೀರ ಸ್ವರೂಪದ ಪ್ರಕರಣವಾಗಿದ್ದು, ಅವರನ್ನು ಅಪರಾಧ ಸ್ಥಳಕ್ಕೆ ವಿಚಾರಣೆಗೆಂದು ಕರೆದೊಯ್ಯಲಾಗುತ್ತಿದೆ ಎಂದು ತನಿಖಾ ತಂಡ ಹೇಳಿದೆ.


ಇದನ್ನೂ ಓದಿ: ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...