Homeಮುಖಪುಟಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಅಪ್ರಾಪ್ತ ಬಾಲಕಿ ಮತ್ತು ದಲಿತ ಯುವ ದಲಿತ ಮಹಿಳೆ ಜುಲೈ 5 ರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಲ್ ಜೈಲಿನಲ್ಲಿದ್ದರು.

- Advertisement -
- Advertisement -

ಪೊಲೀಸರ ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ದಲಿತ ಮಹಿಳೆ ಮತ್ತು ಆಕೆಯ ಸಂಬಂಧಿಯಾದ ಅಪ್ರಾಪ್ತ ಯುವತಿಯ ಮೇಲೆ ಕಸ್ಟಡಿಯಲ್ಲಿಯೇ ಹರಿಯಾಣ ಪೊಲೀಸರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಅಪ್ರಾಪ್ತೆಯ ತಾಯಿ ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ವಿಚಾರಣೆ ನಡೆಸುತ್ತಿದೆ.

ಜುಲೈ 30 ರಂದು ಸೋನಿಪತ್ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ಯುವತಿಯ ತಾಯಿ ದಾಖಲಿಸಿದ ಎಫ್‌ಐಆರ್‌ ಪ್ರಕಾರ, “3 ಜನ ಆರೋಪಿಗಳಾದ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಸಂಜಯ್, ವಿಶೇಷ ಪೊಲೀಸ್ ಅಧಿಕಾರಿ ರಾಢೆ ಮತ್ತು ಕಾನ್‌ಸ್ಟಬಲ್ ಸಂದೀಪ್ ಸೇರಿದಂತೆ 7-9 ಪೊಲೀಸರು ಬಂಧನದಲ್ಲಿದ್ದ ಇಬ್ಬರನ್ನು ಜುಲೈ 3-5ರ ನಡುವೆ ರೋಡಾ ಪೊಲೀಸ್ ಠಾಣೆ ಕಸ್ಟಡಿಯಲ್ಲಿಯೇ ಅತ್ಯಾಚಾರ ಮಾಡಿದ್ದಾರೆ” ಎಂದು ಆರೋಪಿಸಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಿರುವ ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ಮತ್ತು ಐಪಿಸಿ 376(2)(ಎ,ಡಿ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಗಸ್ಟ್ 22 ರಂದು 18 ನೇ ವರ್ಷಕ್ಕೆ ಕಾಲಿಟ್ಟ ಅಪ್ರಾಪ್ತ ಬಾಲಕಿ ಮತ್ತು ದಲಿತ ಮಹಿಳೆ ಜುಲೈ 5 ರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಲ್ ಜೈಲಿನಲ್ಲಿದ್ದರು ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ: ಆಸ್ಪತ್ರೆ ಪಾರ್ಕಿಂಗ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕಳೆದ ಹದಿನೈದು ದಿನಗಳಲ್ಲಿ ಈ ಪ್ರಕರಣವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಗಮನ ಸೆಳೆದಿದ್ದು, ಈ ಪ್ರಕರಣದ ತನಿಖೆ ನಡೆಸಲು ಅಕ್ಟೋಬರ್ 22 ರಂದು ಹರಿಯಾಣ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಇಬ್ಬರು ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಮತ್ತು ಆರೋಪಿ ಪೊಲೀಸರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಹಲವಾರು ದಲಿತ ಸಂಘಟನೆಗಳು ಕೂಡ ಈ ವಿಷಯದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

“ನಾವು ಎಎಸ್‌ಪಿ ನಿಕಿತಾ ಖಟ್ಟರ್ ಅವರ ಮುಂದಾಳತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದೇವೆ. ಇದು ಪ್ರಕರಣದ ತನಿಖೆ ನಡೆಸುತ್ತಿದೆ. ಮಹಿಳಾ ಠಾಣಾಧಿಕಾರಿ ಇನ್ಸ್‌ಪೆಕ್ಟರ್ ಪ್ರಮಿಳಾ ಸಹ ಈ ತಂಡಕ್ಕೆ ಸಹಾಯ ಮಾಡುತ್ತಿದ್ದಾರೆ” ಎಂದು ಸೋನಿಪತ್‌ನ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಶಂದೀಪ್ ಸಿಂಗ್ ರಾಂಧವಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಇಬ್ಬರು ಪೊಲೀಸರ ಹತ್ಯೆಯೊಂದಿಗೆ ಪ್ರಾರಂಭವಾದ ಪ್ರಕರಣ!

ಹತ್ಯೆಯಾದ ಹರಿಯಾಣದ ಪೊಲೀಸ್‌ ಸಿಬ್ಬಂದಿಯೊಬ್ಬರು, ಸಾಯುವ ಮುನ್ನ ತನ್ನ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಾಹನ ಸಂಖ್ಯೆಯನ್ನು ತನ್ನ ಅಂಗೈಯಲ್ಲೇ ಬರೆದುಕೊಂಡಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು.

ಸೋನಿಪತ್‌ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ 43 ವರ್ಷದ ವಿಶೇಷ ಪೊಲೀಸ್‌ ಅಧಿಕಾರಿ ಕಪ್ತಾನ್‌ ಸಿಂಗ್ ಮತ್ತು ರವೀಂದ್ರ ಕುಮಾರ್‌ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಹತ್ಯೆಯಾದ ಪೊಲೀಸ್‌ ಸಿಬ್ಬಂದಿ ಪೈಕಿ 28 ವರ್ಷದ ರವೀಂದ್ರ ಕುಮಾರ್‌, ಸಾವಿಗೂ ಮುನ್ನ ತಮ್ಮ ಅಂಗೈಯಲ್ಲಿ ಆರೋಪಿಗಳ ವಾಹನ ಸಂಖ್ಯೆಯಲ್ಲಿ ಬರೆದಿದ್ದರು. ಈ ಸಂಖ್ಯೆಯನ್ನೇ ಬಳಸಿಕೊಂಡು ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. ಇದರ ಆಧಾರದ ಮೇಲೆ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ಜಿಂದ್‌ ಜಿಲ್ಲೆಯಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವನ್ನಪಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾ

ಮೃತದೇಹದ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ರವೀಂದ್ರ ಕುಮಾರ್‌ ಅಂಗೈಯಲ್ಲಿದ್ದ ಸಂಖ್ಯೆ ಬೆಳಕಿಗೆ ಬಂದಿತ್ತು. ಮರಣೋತ್ತರ ಪೊಲೀಸ್‌ ಪದಕಕ್ಕೆ ರವೀಂದ್ರ ಕುಮಾರ್‌ ಅವರ ಹೆಸರನ್ನು ಶಿಫಾರಸು ಮಾಡಲಾಗುವುದು’ ಎಂದು ಹರಿಯಾಣ ಪೊಲೀಸ್‌ ಮುಖ್ಯಸ್ಥ ಮನೋಜ್‌ ಯಾದವ್‌ ತಿಳಿಸಿದ್ದರು.

ಸೋನಿಪತ್‌–ಜಿಂದ್‌ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಆರೋಪಿಗಳನ್ನು ರವೀಂದ್ರ ಕುಮಾರ್‌ ಹಾಗೂ ಕಪ್ತಾನ್‌ ಸಿಂಗ್‌ ತಡೆದಿದ್ದರು. ಅದರಲ್ಲಿ ಅಪ್ರಾಪ್ತ ಬಾಲಕಿ ಸೇರಿದಂತೆ ಆರೋಪಿಗಳ ಸಂಬಂಧಿಕರು ಇದ್ದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ, ಜಿಂದ್‌ ಕಡೆಗೆ ಪರಾರಿಯಾಗಿದ್ದರು. ಅದೇ ದಿನ ಅಮಿತ್ ಎಂಬುವವನನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿತ್ತು. ಈತನೂ ಸೇರಿದಂತೆ 3 ಜನರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಇದಾದ ನಂತರ ಅಪ್ರಾಪ್ತ ಬಾಲಕಿ ಮತ್ತು ಮಹಿಳೆಯನ್ನು ಬಂಧಿಸಲಾಗಿತ್ತು” ಎಂದು ಪೊಲಿಸರು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ಇದನ್ನು ನಿರಾಕರಿಸಿದ ಅಪ್ರಾಪ್ತ ಬಾಲಕಿಯ ತಾಯಿ, “ಪ್ರಕರಣದ ಪ್ರಮುಖ ಆರೋಪಿ ಅಮಿತ್ ಮತ್ತು ತನ್ನ ಮಗಳಿಗೆ ಮದುವೆ ನಿಶ್ಚಯವಾಗಿತ್ತು. ಅವನನ್ನು ಭೇಟಿ ಮಾಡಲು ತನ್ನ ಸಂಬಂಧಿಯೊಂದಿಗೆ ಹೋಗಿದ್ದಳು. ಆ ಸಂದರ್ಭದಲ್ಲಿ, ಯುವತಿಯನ್ನು ತಮ್ಮೊಟ್ಟಿಗೆ ಕಳುಹಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಇದರಿಂದ ಪರಿಸ್ಥಿತಿ ಉಲ್ಬಣವಾಯಿತು. ಪೊಲೀಸರು ಈ ಪ್ರಕರಣದಲ್ಲಿ ನಮಗೆ ಕಿರುಕುಳ ನೀಡುತ್ತಿದ್ದರು. ಹಾಗಾಗಿ ತನ್ನ ಮಗಳನ್ನು ಜುಲೈ 2 ರಂದು ಶರಣಾಗಲು ಠಾಣೆಗೆ ಕರೆದೊಯ್ದಿದ್ದೆ. ಅಲ್ಲಿ ಕಸ್ಟಡಿಯಲ್ಲಿಯೇ ಅವರ ಮೇಲೆ ದೌರ್ಜನ್ಯ ಎಸಗಿ, ಬರ್ಬರವಾಗಿ ಅತ್ಯಾಚಾರ ಮಾಡಲಾಗಿದೆ. ಆದರೆ ವೈದ್ಯಕೀಯ ಪರೀಕ್ಷೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ” ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತನಿಖಾ ತಂಡ ಹೇಳಿದೆ. ಆದರೆ ಅದರಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಸಾಕ್ಷ್ಯಗಳಿಲ್ಲ. ಆದರೆ ದೈಹಿಕ ಹಿಂಸೆ ನೀಡಿರುವುದರ ಬಗ್ಗೆ ಗುರುತುಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದರ ಕುರಿತು ಸಂತ್ರಸ್ತರ ಹೇಳಿಕೆಗಳು ಬಹುತೇಕ ಒಂದೇ ರೀತಿಯಲ್ಲಿವೆ. ಹಾಗಾಗಿ ಇದು ಗಂಭೀರ ಸ್ವರೂಪದ ಪ್ರಕರಣವಾಗಿದ್ದು, ಅವರನ್ನು ಅಪರಾಧ ಸ್ಥಳಕ್ಕೆ ವಿಚಾರಣೆಗೆಂದು ಕರೆದೊಯ್ಯಲಾಗುತ್ತಿದೆ ಎಂದು ತನಿಖಾ ತಂಡ ಹೇಳಿದೆ.


ಇದನ್ನೂ ಓದಿ: ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...