Homeಮುಖಪುಟಹರಿಯಾಣ ಸೋಲು | ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಹರಿಯಾಣ ಸೋಲು | ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

- Advertisement -
- Advertisement -

ಪ್ರಸ್ತುತ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವ್ಯವಸ್ಥೆಯು ಮತದಾರರ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಕಾಂಗ್ರೆಸ್‌ಗೆ ದಿಗ್ಭ್ರಮೆ ಮೂಡಿಸಿದ ಕೆಲವೇ ದಿನಗಳಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಹರಿಯಾಣ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಂತೆ, ಅಂಚೆ ಮತಪತ್ರಗಳಿಗೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ ಎಂದು ಅವರು ಹೇಳಿದ್ದಾರೆ. ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಕೂಡಾ ಹಲವಾರು ಸಂದರ್ಭಗಳಲ್ಲಿ ಇವಿಎಂಗಳ ಮೂಲಕ ಚಲಾಯಿಸಿದ ಮತಗಳ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಹರಿಯಾಣ ಸೋಲು

ಇದನ್ನೂಓದಿ: ‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

“ನಾನು ಮತದಾರನಾಗಿದ್ದು, ನನ್ನ ಮತ ನನ್ನ ಆಯ್ಕೆಯ ಅಭ್ಯರ್ಥಿಗೆ ಹೋಗಬೇಕೆಂಬುದು ನನ್ನ ಸಂವಿಧಾನದ ಹಕ್ಕು. ನಾನು ಮತಯಂತ್ರವನ್ನು ನನ್ನ ಕೈಯಿಂದ ಮತಪೆಟ್ಟಿಗೆಗೆ ಹಾಕಬೇಕು ಮತ್ತು ಈ ಮೂಲಕ ಚಲಾವಣೆಯಾದ ಮತಗಳನ್ನು 100 ಪ್ರತಿಶತ ಎಣಿಸಬೇಕು. ಆದರೆ ನನ್ನ ಸಾಂವಿಧಾನಿಕ ಹಕ್ಕನ್ನು ಪ್ರಸ್ತುತ ಇವಿಎಂ ವ್ಯವಸ್ಥೆಯಿಂದ ಕಸಿದುಕೊಳ್ಳಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನವೆಂಬರ್ 2023 ರಲ್ಲಿ ನಡೆದ ಎಂಪಿ ಚುನಾವಣೆಯಲ್ಲಿ, ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅವರ ಪಕ್ಷವು 230 ಸ್ಥಾನಗಳಲ್ಲಿ 199 ಸ್ಥಾನಗಳನ್ನು ಗೆದ್ದಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೊಂಡಿದ್ದಾರೆ. ಆದರೆ ಇವಿಎಂಗಳ ಮೂಲಕ ಚಲಾವಣೆಯಾದ ಮತಗಳ ಎಣಿಕೆಯ ನಂತರ ಅದು ಕೇವಲ 66 ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು.

ಇದನ್ನೂಓದಿ: ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಅಂಚೆ ಮತ ಪದ್ಧತಿಯಲ್ಲಿ ಮತಪತ್ರಗಳ ವಿತರಣೆ ಮತ್ತು ಗುರುತು ಮಾಡಿದ ಮತಪತ್ರದ ವಾಪಸಾತಿ ಅಂಚೆ ಮೂಲಕವೇ ನಡೆಯುತ್ತದೆ. ಹರಿಯಾಣದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ 90 ಸ್ಥಾನಗಳ ಪೈಕಿ 76 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ, ಇವಿಎಂಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪಕ್ಷದ ಸ್ಥಾನಗಳ ಸಂಖ್ಯೆ 37ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ದೇಶದ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. “ನೀವು ಕಳೆದ ದಶಕಗಳ ಜನಸಂಖ್ಯೆಯ ಅಂಕಿಅಂಶಗಳನ್ನು ನೋಡಬಹುದು. ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಹಿಂದೂಗಳಿಗಿಂತ ಹೆಚ್ಚು ವೇಗವಾಗಿ ಕುಸಿಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಅವರು ದೇಶದಲ್ಲಿ ಜಾತಿ ಆಧಾರಿತ ಜನಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಯಬೇಕು ಎಂದು ಪ್ರತಿಪಾದಿಸಿದ್ದಾರೆ. “ಈ ಗಣತಿ ಮತ್ತು ಸಮೀಕ್ಷೆ ವಿವಿಧ ಜಾತಿಗಳು ಮತ್ತು ಉಪಜಾತಿಗಳ ಸಾಮಾಜಿಕ-ಆರ್ಥಿಕ ಹಿಂದುಳಿದಿರುವಿಕೆಯ ಬಗ್ಗೆ ನಿಖರವಾದ ಮಾಹಿತಿಯನ್ನು ಒದಗಿಸುತ್ತದೆ. ಈ ಮಾಹಿತಿ ಆಧರಿಸಿ ಅವರ ಅಭಿವೃದ್ಧಿಗೆ ಯೋಜನೆ ರೂಪಿಸಬಹುದು” ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ‘ಜಯವೋ ನಮ್ಮ ಭಾರತ, ಸಂವಿಧಾನವೇ ನಮ್ಮ ಗ್ರಂಥ’ -ದಲಿತ ಐಕ್ಯತಾ ಸಮಾವೇಶದಲ್ಲಿ ಗೊಲ್ಲಹಳ್ಳಿ ಶಿವಪ್ರಸಾದ್‌ರವರ ಹಾಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...