Homeಮುಖಪುಟಹರಿಯಾಣ ಸೋಲು | ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಹರಿಯಾಣ ಸೋಲು | ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

- Advertisement -
- Advertisement -

ಪ್ರಸ್ತುತ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವ್ಯವಸ್ಥೆಯು ಮತದಾರರ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಕಾಂಗ್ರೆಸ್‌ಗೆ ದಿಗ್ಭ್ರಮೆ ಮೂಡಿಸಿದ ಕೆಲವೇ ದಿನಗಳಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಹರಿಯಾಣ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಂತೆ, ಅಂಚೆ ಮತಪತ್ರಗಳಿಗೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದಿದೆ ಎಂದು ಅವರು ಹೇಳಿದ್ದಾರೆ. ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಕೂಡಾ ಹಲವಾರು ಸಂದರ್ಭಗಳಲ್ಲಿ ಇವಿಎಂಗಳ ಮೂಲಕ ಚಲಾಯಿಸಿದ ಮತಗಳ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಹರಿಯಾಣ ಸೋಲು

ಇದನ್ನೂಓದಿ: ‘ಪೆನ್ ಪಿಂಟರ್’ ಪ್ರಶಸ್ತಿಯನ್ನು ಈಜಿಪ್ಟ್ ಬರಹಗಾರ ಅಲಾ ಅಬ್ದುಲ್ ಫತ್ತಾಹ್ ಅವರೊಂದಿಗೆ ಹಂಚಿಕೊಂಡ ಅರುಂಧತಿ ರಾಯ್

“ನಾನು ಮತದಾರನಾಗಿದ್ದು, ನನ್ನ ಮತ ನನ್ನ ಆಯ್ಕೆಯ ಅಭ್ಯರ್ಥಿಗೆ ಹೋಗಬೇಕೆಂಬುದು ನನ್ನ ಸಂವಿಧಾನದ ಹಕ್ಕು. ನಾನು ಮತಯಂತ್ರವನ್ನು ನನ್ನ ಕೈಯಿಂದ ಮತಪೆಟ್ಟಿಗೆಗೆ ಹಾಕಬೇಕು ಮತ್ತು ಈ ಮೂಲಕ ಚಲಾವಣೆಯಾದ ಮತಗಳನ್ನು 100 ಪ್ರತಿಶತ ಎಣಿಸಬೇಕು. ಆದರೆ ನನ್ನ ಸಾಂವಿಧಾನಿಕ ಹಕ್ಕನ್ನು ಪ್ರಸ್ತುತ ಇವಿಎಂ ವ್ಯವಸ್ಥೆಯಿಂದ ಕಸಿದುಕೊಳ್ಳಲಾಗಿದೆ” ಎಂದು ದಿಗ್ವಿಜಯ್ ಸಿಂಗ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನವೆಂಬರ್ 2023 ರಲ್ಲಿ ನಡೆದ ಎಂಪಿ ಚುನಾವಣೆಯಲ್ಲಿ, ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅವರ ಪಕ್ಷವು 230 ಸ್ಥಾನಗಳಲ್ಲಿ 199 ಸ್ಥಾನಗಳನ್ನು ಗೆದ್ದಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೊಂಡಿದ್ದಾರೆ. ಆದರೆ ಇವಿಎಂಗಳ ಮೂಲಕ ಚಲಾವಣೆಯಾದ ಮತಗಳ ಎಣಿಕೆಯ ನಂತರ ಅದು ಕೇವಲ 66 ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು.

ಇದನ್ನೂಓದಿ: ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಅಂಚೆ ಮತ ಪದ್ಧತಿಯಲ್ಲಿ ಮತಪತ್ರಗಳ ವಿತರಣೆ ಮತ್ತು ಗುರುತು ಮಾಡಿದ ಮತಪತ್ರದ ವಾಪಸಾತಿ ಅಂಚೆ ಮೂಲಕವೇ ನಡೆಯುತ್ತದೆ. ಹರಿಯಾಣದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ 90 ಸ್ಥಾನಗಳ ಪೈಕಿ 76 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ, ಇವಿಎಂಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪಕ್ಷದ ಸ್ಥಾನಗಳ ಸಂಖ್ಯೆ 37ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ದೇಶದ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. “ನೀವು ಕಳೆದ ದಶಕಗಳ ಜನಸಂಖ್ಯೆಯ ಅಂಕಿಅಂಶಗಳನ್ನು ನೋಡಬಹುದು. ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಹಿಂದೂಗಳಿಗಿಂತ ಹೆಚ್ಚು ವೇಗವಾಗಿ ಕುಸಿಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಅವರು ದೇಶದಲ್ಲಿ ಜಾತಿ ಆಧಾರಿತ ಜನಗಣತಿ ಮತ್ತು ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಯಬೇಕು ಎಂದು ಪ್ರತಿಪಾದಿಸಿದ್ದಾರೆ. “ಈ ಗಣತಿ ಮತ್ತು ಸಮೀಕ್ಷೆ ವಿವಿಧ ಜಾತಿಗಳು ಮತ್ತು ಉಪಜಾತಿಗಳ ಸಾಮಾಜಿಕ-ಆರ್ಥಿಕ ಹಿಂದುಳಿದಿರುವಿಕೆಯ ಬಗ್ಗೆ ನಿಖರವಾದ ಮಾಹಿತಿಯನ್ನು ಒದಗಿಸುತ್ತದೆ. ಈ ಮಾಹಿತಿ ಆಧರಿಸಿ ಅವರ ಅಭಿವೃದ್ಧಿಗೆ ಯೋಜನೆ ರೂಪಿಸಬಹುದು” ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ‘ಜಯವೋ ನಮ್ಮ ಭಾರತ, ಸಂವಿಧಾನವೇ ನಮ್ಮ ಗ್ರಂಥ’ -ದಲಿತ ಐಕ್ಯತಾ ಸಮಾವೇಶದಲ್ಲಿ ಗೊಲ್ಲಹಳ್ಳಿ ಶಿವಪ್ರಸಾದ್‌ರವರ ಹಾಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...