Homeಮುಖಪುಟಹರಿಯಾಣ ಚುನಾವಣೆ | 5 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಹರಿಯಾಣ ಚುನಾವಣೆ | 5 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಐವರು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಒಟ್ಟು ಘೋಷಣೆಯಾದ ಅಭ್ಯರ್ಥಿಗಳ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ಪಕ್ಷವು ಅಂಬಾಲಾ ಕ್ಯಾಂಟ್‌ನಿಂದ ಪರಿಮಲ್ ಪಾರಿ, ಪಾಣಿಪತ್ ಗ್ರಾಮಾಂತರದಿಂದ ಸಚಿನ್ ಕುಂದು, ನರ್ವಾನಾ (ಎಸ್‌ಸಿ)ಯಿಂದ ಸತ್ಬೀರ್ ದುಬ್ಲೇನ್, ರಾನಿಯಾದಿಂದ ಸರ್ವ ಮಿತ್ರ ಕಾಂಬೋಜ್ ಮತ್ತು ಟಿಗಾಂವ್‌ನಿಂದ ರೋಹಿತ್ ನಗರ್ ಅವರನ್ನು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೈತಾಲ್‌ನಿಂದ ಪಕ್ಷದ ಸಂಸದ ರಣದೀಪ್ ಸುರ್ಜೇವಾಲಾ ಅವರ ಪುತ್ರ ಆದಿತ್ಯ ಸುರ್ಜೇವಾಲಾ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ತನ್ನ 40 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಈ ಪಟ್ಟಿ ಹೊರಬಿದ್ದಿದೆ. ಕಾಂಗ್ರೆಸ್ ಇನ್ನೂ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿಲ್ಲ, ಆ ಸ್ಥಾನಗಳಲ್ಲಿ ಕೊನೆಯ ಕ್ಷಣದಲ್ಲಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಹರಿಯಾಣ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ತೊಡಗಿದ್ದು, ಎರಡೂ ಕಡೆಯಿಂದ ಭಾರಿ ಚೌಕಾಸಿ ನಡೆಯುತ್ತಿದೆ. ಆದಾಗ್ಯೂ, ಮಾತುಕತೆಗಳು ಸ್ಥಗಿತಗೊಂಡಿದ್ದು, AAP ಅಂದಿನಿಂದ ಅನೇಕ ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ: ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ; 46 ಮಂದಿಯ ಬಂಧನ

ಕಾಂಗ್ರೆಸ್ ಶುಕ್ರವಾರ ಚುನಾವಣೆಗೆ 32 ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಗರ್ಹಿ ಸಂಪ್ಲಾ-ಕಿಲೋಯ್‌ನಿಂದ, ರಾಜ್ಯ ಘಟಕದ ಅಧ್ಯಕ್ಷ ಉದಯ್ ಭಾನ್ ಹೊಡಾಲ್‌ನಿಂದ ಮತ್ತು ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಜೂಲಾನಾದಿಂದ ಕಣಕ್ಕಿಳಿಸಿದೆ.

ಪಕ್ಷವು ಮೊದಲು 31 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಭಾನುವಾರ ಒಂಬತ್ತು ಅಭ್ಯರ್ಥಿಗಳನ್ನು ಪಕ್ಷ ಘೋಷಿಸಿತ್ತು. ಪಕ್ಷವು ತನ್ನ ಎಲ್ಲಾ 28 ಹಾಲಿ ಶಾಸಕರನ್ನು ಮರು ಆಯ್ಕೆಗೆ ಟಿಕೆಟ್ ಘೋಷಿಸಿದೆ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹರಿಯಾಣದಲ್ಲಿ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...