Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...