Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...