Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...