Homeಮುಖಪುಟಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

- Advertisement -
- Advertisement -

ಅತ್ಯಾಚಾರ ಹಾಗೂ ಕೊಲೆ ಅಪರಾಧದಲ್ಲಿ ಜೈಲು ಪಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಅಕ್ಟೋಬರ್ 1 ರಂದು 20 ದಿನಗಳ ಪೆರೋಲ್ ನೀಡಿದಾಗ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಂದ ನೇರ ದಾಳಿಗೆ ಒಳಗಾಯಿತು.

ರಾಮ್ ರಹೀಮ್ ಅವರ 15ನೇ ಪೆರೋಲ್ ಕೂಡ ಚುನಾವಣೆಗೆ ಹೊಂದಿಕೆಯಾಗುತ್ತಿದ್ದಂತೆ, “ಬಿಜೆಪಿಯು ತನ್ನ ಬೆಂಬಲವನ್ನು ಪಡೆಯಲು ಅತ್ಯಾಚಾರ ಮತ್ತು ಕೊಲೆ ಅಪರಾಧಿಗೆ ಪೆರೋಲ್ ನೀಡಿದೆ” ಎಂದು ಆರೋಪಿಸಲಾಗಿದೆ. ಆದರೆ, ಕೇವಲ ಬಿಜೆಪಿಗಷ್ಟೇ ಅಲ್ಲ, ಕಾಂಗ್ರೆಸ್‌ಗೂ ಲಾಭ ಎಂಬುದನ್ನು ಚುನಾವಣಾ ಫಲಿತಾಂಶ ತೋರಿಸಿದೆ.

ಡೇರಾ ಅನುಯಾಯಿಗಳಿಗೆ ನೆಲೆಯಾಗಿದೆ ಎಂದು ನಂಬಲಾದ 28 ವಿಧಾನಸಭಾ ಕ್ಷೇತ್ರಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, ಎರಡು ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಅಂದರೆ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶೇ.53.57, ಬಿಜೆಪಿ ಶೇ.35.71, ಐಎನ್‌ಎಲ್‌ಡಿ ಶೇ.7 ಮತ್ತು ಸ್ವತಂತ್ರ ಅಭ್ಯರ್ಥಿ ಶೇ.3.57 ಮತಗಳನ್ನು ಗಳಿಸಿದ್ದಾರೆ. ಬಹುತೇಕ ಹರಿಯಾಣ ಕಾಂಗ್ರೆಸ್ ನಾಯಕರು ರಾಮ್ ರಹೀಮ್ ಪೆರೋಲ್ ಬಗ್ಗೆ ಧ್ವನಿಯೆತ್ತದಿರಲು ಇದೂ ಒಂದು ಕಾರಣವಾಗಿರಬಹುದು ಎಂಬ ಮಾತುಗಳು ಕೇಳಬಂದಿವೆ.

ಫತೇಹಾಬಾದ್, ಕೈತಾಲ್, ಕುರುಕ್ಷೇತ್ರ, ಸಿರ್ಸಾ, ಕರ್ನಾಲ್ ಮತ್ತು ಹಿಸಾರ್ ಎಂಬ ಆರು ಹರ್ಯಾಣ ಜಿಲ್ಲೆಗಳನ್ನು ವ್ಯಾಪಿಸಿರುವ ಈ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ಫತೇಹಾಬಾದ್, ರತಿಯಾ, ತೋಹಾನಾ (ಅತಿ ಹೆಚ್ಚು ಡೇರಾ ಅನುಯಾಯಿಗಳನ್ನು ಹೊಂದಿರುವ), ಕಲಾಯತ್, ಕೈತಾಲ್, ಶಹಾಬಾದ್, ಥಾನೇಸರ್, ಪೆಹೋವಾ, ಕಲನ್‌ವಾಲಿ, ಸಿರ್ಸಾ, ಎಲೆನಾಬಾದ್, ಆದಂಪುರ, ಉಕ್ಲಾನಾ ಮತ್ತು ನಾರ್ನಾಂಡ್‌ಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ಹನ್ಸಿ, ಬರ್ವಾಲಾ, ಹಿಸಾರ್, ನಲ್ವಾ, ಅಸಂಧ್, ಘರೋಂಡಾ, ಕರ್ನಾಲ್, ಇಂದ್ರಿ, ನಿಲೋಖೇರಿ, ಲಾಡ್ವಾ ಮತ್ತು ಪುಂಡ್ರಿಯಲ್ಲಿ ಬಿಜೆಪಿ ಗೆದ್ದಿದೆ. ದಾಬ್ವಾಲಿ ಮತ್ತು ರಾನಿಯಾದಲ್ಲಿ ಐಎನ್‌ಎಲ್‌ಡಿ ಗೆದ್ದರೆ, ಹಿಸಾರ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಸಾವಿತ್ರಿ ಜಿಂದಾಲ್ ಗೆದ್ದಿದ್ದಾರೆ.

ಬಿಜೆಪಿಗೆ ಡೇರಾದ ಬೆಂಬಲ?

ಅಕ್ಟೋಬರ್ 3 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥರು ಬಿಜೆಪಿಗೆ ಮತ ಹಾಕುವಂತೆ ಸಿರ್ಸಾದ ಡೇರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳು ಈ ಸಂದೇಶವನ್ನು ಸತ್ಸಂಗ (ಸಭೆ) ಸಮಯದಲ್ಲಿ ತಿಳಿಸಲಾಗಿದೆ ಎಂದು ಹೇಳುತ್ತದೆ. ಅಲ್ಲಿ ಅನುಯಾಯಿಗಳಿಗೆ ಕನಿಷ್ಠ ಐದು ಮತದಾರರನ್ನು ಬೂತ್‌ಗೆ ಕರೆತರಲು ಸೂಚಿಸಲಾಯಿತು ಎಂದು ತಿಳಿದುಬಂದಿದೆ.

ಗುರ್ಮೀತ್ ರಾಮ್ ರಹೀಮ್ ಈ ಸತ್ಸಂಗವನ್ನು ವಾಸ್ತವಿಕವಾಗಿ ಆಯೋಜಿಸಿದ್ದಾರೋ ಇಲ್ಲವೋ ಎಂಬುದು ಅಸ್ಪಷ್ಟವಾಗಿದೆ. ಏಕೆಂದರೆ, ಭಾರತದ ಚುನಾವಣಾ ಆಯೋಗವು ಆನ್‌ಲೈನ್‌ನಲ್ಲಿ ಸತ್ಸಂಗಗಳನ್ನು ಪ್ರಚಾರ ಮಾಡುವುದನ್ನು ಅಥವಾ ನಡೆಸುವುದನ್ನು ನಿಷೇಧಿಸಿದೆ.

ಡೇರಾ ಮೂಲಗಳು ಪಂಥದ ಅನುಯಾಯಿಗಳ ಸಂಖ್ಯೆ ಸುಮಾರು 1.25 ಕೋಟಿ ಎಂದು ಅಂದಾಜಿಸಿದೆ. ಅದರ 38 ಶಾಖೆಗಳಲ್ಲಿ 21 ಹರಿಯಾಣದಲ್ಲಿದೆ.

ಡೇರಾ ಸಚ್ಚಾ ಸೌಧದ ರಾಜಕೀಯ ಪ್ರಭಾವ

ಧಾರ್ಮಿಕ ಪಂಥವಾಗಿದ್ದರೂ, ಡೇರಾ ಸಚ್ಚಾ ಸೌದಾ ಗಮನಾರ್ಹ ರಾಜಕೀಯ ಹಿಡಿತವನ್ನು ಹೊಂದಿದೆ. ಗುರ್ಮೀತ್ ರಾಮ್ ರಹೀಮ್ ನೇತೃತ್ವದಲ್ಲಿ ರಾಜಕೀಯ ವಿಭಾಗವನ್ನು ನಿರ್ವಹಿಸುತ್ತಿದೆ. ಈ ಪಂಥವು ಈ ಹಿಂದೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. 2007 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಡೇರಾ ಕಾಂಗ್ರೆಸ್ ಅನ್ನು ಬೆಂಬಲಿಸಿತು.

2014ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. 2015 ರಲ್ಲಿ, ಡೇರಾ ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹಿರಂಗವಾಗಿ ಬೆಂಬಲಿಸಿತು. ಅಂದಾಜು 3,000 ಅನುಯಾಯಿಗಳು ಬಿಹಾರದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು.

ಡೇರಾದ ರಾಜಕೀಯ ಪ್ರಭಾವವು ಅದರ ದೊಡ್ಡ ತಳ ಸಮುದಾಯದ ಅನುಯಾಯಿಗಳ ನೆಲೆಯಿಂದ ಹುಟ್ಟಿಕೊಂಡಿದೆ. ಇದು ಗಮನಾರ್ಹ ಸಂಖ್ಯೆಯ ದಲಿತರನ್ನು ಒಳಗೊಂಡಿದೆ. ಉದಾಹರಣೆಗೆ ಮಜಾಬಿ ಸಿಖ್‌ಗಳು (ಪರಿವರ್ತಿತ ಸಿಖ್ಖರು).

ರಾಜಕೀಯ ವಿಶ್ಲೇಷಕರು ಗಮನಿಸಿದಂತೆ ಹರಿಯಾಣದಲ್ಲಿ ಮೇಲ್ಜಾತಿ ಮತಗಳು ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಿಭಜನೆಯಾಗುತ್ತವೆ. ಕೆಳಜಾತಿಯ ಡೇರಾ ಅನುಯಾಯಿಗಳು ತಮ್ಮ ನಾಯಕನ ಸೂಚನೆಗಳಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ.

ಇದನ್ನೂ ಓದಿ; ಅತ್ಯಾಚಾರಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಸೋಲು : ಕಾಂಗ್ರೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...