Homeಮುಖಪುಟಹರಿಯಾಣ ಚುನಾವಣೆ | ಗೋ ರಕ್ಷಣೆ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ: ಕಾಂಗ್ರೆಸ್‌

ಹರಿಯಾಣ ಚುನಾವಣೆ | ಗೋ ರಕ್ಷಣೆ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ: ಕಾಂಗ್ರೆಸ್‌

- Advertisement -
- Advertisement -

ಗೋಸಂರಕ್ಷಣೆಯ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ ಮತ್ತು ಕಳೆದ ವರ್ಷ ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಕೋಮು ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುತ್ತೇನೆ ಎಂದು ಹರಿಯಾಣದ ಮುಸ್ಲಿಂ ಪ್ರಾಬಲ್ಯದ ನುಹ್ ಕ್ಷೇತ್ರದಿಂದ ಮರು ಆಯ್ಕೆ ಬಯಸುತ್ತಿರುವ ಕಾಂಗ್ರೆಸ್‌ನ ಅಫ್ತಾಬ್ ಅಹ್ಮದ್ ಅವರು ಕ್ಷೇತ್ರ ಜನರಿಗೆ ಭರವಸೆ ನೀಡಿದ್ದಾರೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಆಗಿರುವ ಅಫ್ತಾಬ್ ಅಹ್ಮದ್ ಅವರು, ನುಹ್ ಕೋಮುಗಲಭೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿತ್ತು ಮತ್ತು ತಾನು ಸರ್ಕಾರದೊಂದಿಗೆ ಈ ಬಗ್ಗೆ ಮೊದಲೇ ಆತಂಕ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ. ತಾನು ಈ ಬಗ್ಗೆ ಆತಂಕ ವ್ಯಕ್ತಿಪಡಿಸಿದ್ದರು ಕೂಡಾ ಸರ್ಕಾರ “ಇದು ಸಂಭವಿಸಲಿ” ಎಂದು ಬಯಸಿದ್ದರು ಎಂದು ಹೇಳುದ್ದಾರೆ. ಈ ಗಲಭೆಯು ಜೀವ ಮತ್ತು ಆಸ್ತಿ ನಷ್ಟವನ್ನು ಮಾತ್ರವಲ್ಲದೆ ನಂಬಿಕೆಯನ್ನೂ ನಷ್ಟಮಾಡಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ಕಳೆದ ವರ್ಷ ನುಹ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯು ಬಿಜೆಪಿಯು ಗೋರಕ್ಷಕರ ವೇಷದಲ್ಲಿ ಸಮಾಜವಿರೋಧಿಗಳನ್ನು ಪ್ರಚಾರ ಮಾಡಿತ್ತು. ಅವರು ಭಯದ ವಾತಾವರಣವನ್ನು ಸೃಷ್ಟಿಸಿದರು ಮತ್ತು ಅದನ್ನು ಹೆಚ್ಚಿಸಿದರು. ಶಾಸಕನಾಗಿ ನಾನು ಅದನ್ನು ಸರ್ಕಾರದ ಗಮನಕ್ಕೆ ತಂದಿದ್ದೆ. ನೀವು ಅಂತಹ ಘಟನೆಗಳನ್ನು ತಡೆಯಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದ್ದೆ. ಆದರೆ ಅವರು ಅದನ್ನು ನಡೆಯಲು ಅವಕಾಶ ಮಾಡಿಕೊಡುತ್ತಾರೆ” ಎಂದು ಅಫ್ತಾಬ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹರಿಯಾಣ

“ಮುಖ್ಯಮಂತ್ರಿ ರೇವಾರಿಯಲ್ಲಿ ಸಭೆ ನಡೆಸುವುದರಲ್ಲಿ ನಿರತರಾಗಿದ್ದರು. ಎರಡೂ ಕಡೆಯಿಂದ ಸಮಾಜ ವಿರೋಧಿ ಶಕ್ತಿಗಳು ಸವಾಲು ಹಾಕಿದಾಗಲೂ ಇಡೀ ದಾರಿಗೆ ಕೇವಲ 300 ಪೊಲೀಸರನ್ನು ನಿಯೋಜಿಸಲಾಗಿತ್ತು. ಸರ್ಕಾರ ಅದನ್ನು ನಡೆಯಲು ಅವಕಾಶ ಮಾಡಿಕೊಟ್ಟಿತು. ಅದನ್ನು ನಿರ್ವಹಿಸಿದ ಅಧಿಕಾರಿಗಳು, ಅಂತಹ ಹಿಂಸಾಚಾರಕ್ಕೆ ಕಾರಣಗಳು ಮತ್ತು ಅಧಿಕಾರಿಗಳು ಹಿಂಸಾಚಾರವನ್ನು ನಿರ್ವಹಿಸಿದ ರೀತಿಯನ್ನು ಕಂಡುಹಿಡಿಯಲು ನ್ಯಾಯಾಂಗ ತನಿಖೆ ನಡೆಸಬೇಕೆಂದು ನಾವು ಇಲ್ಲಿಯವರೆಗೆ ಒತ್ತಾಯಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯ ವೇಳೆ ನುಹ್‌ನಲ್ಲಿ ಪ್ರಾರಂಭವಾದ ಗಲಭೆಯು ಗುರುಗ್ರಾಮ್‌ಗೆ ಹರಡಿ ಇಬ್ಬರು ಗೃಹ ರಕ್ಷಕ ದಳ ಮತ್ತು ಧರ್ಮಗುರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು. ನಂತರ ಪೊಲೀಸರು ಈ ಪ್ರಕರಣದಲ್ಲಿ ಕಾಂಗ್ರೆಸ್‌ನ ಫಿರೋಜ್‌ಪುರ ಜಿರ್ಕಾ ಶಾಸಕ ಮಮ್ಮನ್ ಖಾನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಆರೋಪಗಳನ್ನು ಹೊರಿಸಿದ್ದರು.

ಇದನ್ನೂಓದಿ: ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

“ಹಿಂಸಾಚಾರದ ಒಂದು ದಿನದ ನಂತರ, ಹಿಂಸಾಚಾರದಲ್ಲಿ ಭಾಗಿಯಾಗದ ಕೆಲವು ಜನರ ಮನೆಗಳನ್ನು ಕೆಡವಿದರು. ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಿದರು. ಆದರೆ ಅವರು ಯಾರೂ ಈ ಘಟನೆಯಲ್ಲಿ ಭಾಗಿಯಾಗಿರಲಿಲ್ಲ. ಅಷ್ಟೆ ಅಲ್ಲದೆ, ಅವರ ವಿರುದ್ಧ ಕಠಿಣ UAPA ಪ್ರಕರಣ ದಾಖಲಿಸಲಾಯಿತು. ಹಾಗಾಗಿಯೆ ಈ ಕೋಮು ಘಟನೆಗೆ ಕಾರಣವೇನು ಎಂಬುದರ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದೆ. ಈ ಘಟನೆಯಿಂದ ಕೇವಲ ಜೀವ ಮತ್ತು ಆಸ್ತಿ ನಷ್ಟದ ಮಾತ್ರವಲ್ಲ, ಜನರಲ್ಲಿ ನಂಬಿಕೆ ಕೂಡಾ ನಷ್ಟವಾಗಿದೆ. ನಾವು ಗೋಸಂರಕ್ಷಣೆ ಹೆಸರಿನಲ್ಲಿ ಹತ್ಯೆ ಮಾಡುವುದರ ವಿರುದ್ಧ ಕಾನೂನು ತರುತ್ತೇವೆ” ಎಂದು ಅಫ್ತಾಬ್ ಹೇಳಿದ್ದಾರೆ.

58 ವರ್ಷದ ಅಫ್ತಾಬ್ ಅವರು ಸೋಹ್ನಾ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಸಂಜಯ್ ಸಿಂಗ್ ವಿರುದ್ಧ ನುಹ್‌ನಲ್ಲಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ತಾಹಿರ್ ಹುಸೇನ್ ಅವರನ್ನು ಕಣಕ್ಕಿಳಿಸಿದೆ. ತಾಹಿರ್ ಹುಸೇನ್ ಅವರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮತ್ತು ಹರಿಯಾಣ ವಕ್ಫ್ ಮಂಡಳಿಯ ಅಧ್ಯಕ್ಷರಾದ ಜಾಕಿರ್ ಹುಸೇನ್ ಅವರ ಪುತ್ರರಾಗಿದ್ದಾರೆ. ಅವರು ಇತ್ತೀಚೆಗೆ INLD ಗೆ ಸೇರಿದ್ದರು.

ನುಹ್‌ ಕ್ಷೇತ್ರದಲ್ಲಿ ಬಿಜೆಪಿ ಎಂದಿಗೂ ಗೆದ್ದಿಲ್ಲ ಮತ್ತು ಇಲ್ಲಿನ ಮತದಾರರು ಐತಿಹಾಸಿಕವಾಗಿ ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿಯನ್ನು ಬೆಂಬಲಿಸಿದ್ದಾರೆ. ನುಹ್ ಅನ್ನು 2005 ರಲ್ಲಿ ಗುರ್ಗಾಂವ್ ಮತ್ತು ಫರಿದಾಬಾದ್ ಭಾಗಗಳಿಂದ ಪ್ರತ್ಯೇಕ ಜಿಲ್ಲೆಯಾಗಿ ಸ್ಥಾಪಿಸಲಾಯಿತು. ಇದು ನುಹ್, ಫಿರೋಜ್‌ಪುರ ಜಿರ್ಕಾ ಮತ್ತು ಪುನ್ಹಾನಾ ಎಂಬ ಮೂರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಹರ್ಯಾಣದಲ್ಲಿ ಅಕ್ಟೋಬರ್ 5 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...