Homeಮುಖಪುಟಹರಿಯಾಣ ಚುನಾವಣೆ | ಗೋ ರಕ್ಷಣೆ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ: ಕಾಂಗ್ರೆಸ್‌

ಹರಿಯಾಣ ಚುನಾವಣೆ | ಗೋ ರಕ್ಷಣೆ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ: ಕಾಂಗ್ರೆಸ್‌

- Advertisement -
- Advertisement -

ಗೋಸಂರಕ್ಷಣೆಯ ಹೆಸರಿನಲ್ಲಿ ಗುಂಪುಹತ್ಯೆ ವಿರುದ್ಧ ಕಾನೂನು ಪರಿಚಯ ಮತ್ತು ಕಳೆದ ವರ್ಷ ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಕೋಮು ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುತ್ತೇನೆ ಎಂದು ಹರಿಯಾಣದ ಮುಸ್ಲಿಂ ಪ್ರಾಬಲ್ಯದ ನುಹ್ ಕ್ಷೇತ್ರದಿಂದ ಮರು ಆಯ್ಕೆ ಬಯಸುತ್ತಿರುವ ಕಾಂಗ್ರೆಸ್‌ನ ಅಫ್ತಾಬ್ ಅಹ್ಮದ್ ಅವರು ಕ್ಷೇತ್ರ ಜನರಿಗೆ ಭರವಸೆ ನೀಡಿದ್ದಾರೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಆಗಿರುವ ಅಫ್ತಾಬ್ ಅಹ್ಮದ್ ಅವರು, ನುಹ್ ಕೋಮುಗಲಭೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿತ್ತು ಮತ್ತು ತಾನು ಸರ್ಕಾರದೊಂದಿಗೆ ಈ ಬಗ್ಗೆ ಮೊದಲೇ ಆತಂಕ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ. ತಾನು ಈ ಬಗ್ಗೆ ಆತಂಕ ವ್ಯಕ್ತಿಪಡಿಸಿದ್ದರು ಕೂಡಾ ಸರ್ಕಾರ “ಇದು ಸಂಭವಿಸಲಿ” ಎಂದು ಬಯಸಿದ್ದರು ಎಂದು ಹೇಳುದ್ದಾರೆ. ಈ ಗಲಭೆಯು ಜೀವ ಮತ್ತು ಆಸ್ತಿ ನಷ್ಟವನ್ನು ಮಾತ್ರವಲ್ಲದೆ ನಂಬಿಕೆಯನ್ನೂ ನಷ್ಟಮಾಡಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ಕಳೆದ ವರ್ಷ ನುಹ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯು ಬಿಜೆಪಿಯು ಗೋರಕ್ಷಕರ ವೇಷದಲ್ಲಿ ಸಮಾಜವಿರೋಧಿಗಳನ್ನು ಪ್ರಚಾರ ಮಾಡಿತ್ತು. ಅವರು ಭಯದ ವಾತಾವರಣವನ್ನು ಸೃಷ್ಟಿಸಿದರು ಮತ್ತು ಅದನ್ನು ಹೆಚ್ಚಿಸಿದರು. ಶಾಸಕನಾಗಿ ನಾನು ಅದನ್ನು ಸರ್ಕಾರದ ಗಮನಕ್ಕೆ ತಂದಿದ್ದೆ. ನೀವು ಅಂತಹ ಘಟನೆಗಳನ್ನು ತಡೆಯಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದ್ದೆ. ಆದರೆ ಅವರು ಅದನ್ನು ನಡೆಯಲು ಅವಕಾಶ ಮಾಡಿಕೊಡುತ್ತಾರೆ” ಎಂದು ಅಫ್ತಾಬ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹರಿಯಾಣ

“ಮುಖ್ಯಮಂತ್ರಿ ರೇವಾರಿಯಲ್ಲಿ ಸಭೆ ನಡೆಸುವುದರಲ್ಲಿ ನಿರತರಾಗಿದ್ದರು. ಎರಡೂ ಕಡೆಯಿಂದ ಸಮಾಜ ವಿರೋಧಿ ಶಕ್ತಿಗಳು ಸವಾಲು ಹಾಕಿದಾಗಲೂ ಇಡೀ ದಾರಿಗೆ ಕೇವಲ 300 ಪೊಲೀಸರನ್ನು ನಿಯೋಜಿಸಲಾಗಿತ್ತು. ಸರ್ಕಾರ ಅದನ್ನು ನಡೆಯಲು ಅವಕಾಶ ಮಾಡಿಕೊಟ್ಟಿತು. ಅದನ್ನು ನಿರ್ವಹಿಸಿದ ಅಧಿಕಾರಿಗಳು, ಅಂತಹ ಹಿಂಸಾಚಾರಕ್ಕೆ ಕಾರಣಗಳು ಮತ್ತು ಅಧಿಕಾರಿಗಳು ಹಿಂಸಾಚಾರವನ್ನು ನಿರ್ವಹಿಸಿದ ರೀತಿಯನ್ನು ಕಂಡುಹಿಡಿಯಲು ನ್ಯಾಯಾಂಗ ತನಿಖೆ ನಡೆಸಬೇಕೆಂದು ನಾವು ಇಲ್ಲಿಯವರೆಗೆ ಒತ್ತಾಯಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯ ವೇಳೆ ನುಹ್‌ನಲ್ಲಿ ಪ್ರಾರಂಭವಾದ ಗಲಭೆಯು ಗುರುಗ್ರಾಮ್‌ಗೆ ಹರಡಿ ಇಬ್ಬರು ಗೃಹ ರಕ್ಷಕ ದಳ ಮತ್ತು ಧರ್ಮಗುರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು. ನಂತರ ಪೊಲೀಸರು ಈ ಪ್ರಕರಣದಲ್ಲಿ ಕಾಂಗ್ರೆಸ್‌ನ ಫಿರೋಜ್‌ಪುರ ಜಿರ್ಕಾ ಶಾಸಕ ಮಮ್ಮನ್ ಖಾನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಆರೋಪಗಳನ್ನು ಹೊರಿಸಿದ್ದರು.

ಇದನ್ನೂಓದಿ: ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

“ಹಿಂಸಾಚಾರದ ಒಂದು ದಿನದ ನಂತರ, ಹಿಂಸಾಚಾರದಲ್ಲಿ ಭಾಗಿಯಾಗದ ಕೆಲವು ಜನರ ಮನೆಗಳನ್ನು ಕೆಡವಿದರು. ಸಾವಿರಾರು ಕಟ್ಟಡಗಳನ್ನು ನೆಲಸಮಗೊಳಿಸಿದರು. ಆದರೆ ಅವರು ಯಾರೂ ಈ ಘಟನೆಯಲ್ಲಿ ಭಾಗಿಯಾಗಿರಲಿಲ್ಲ. ಅಷ್ಟೆ ಅಲ್ಲದೆ, ಅವರ ವಿರುದ್ಧ ಕಠಿಣ UAPA ಪ್ರಕರಣ ದಾಖಲಿಸಲಾಯಿತು. ಹಾಗಾಗಿಯೆ ಈ ಕೋಮು ಘಟನೆಗೆ ಕಾರಣವೇನು ಎಂಬುದರ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದೆ. ಈ ಘಟನೆಯಿಂದ ಕೇವಲ ಜೀವ ಮತ್ತು ಆಸ್ತಿ ನಷ್ಟದ ಮಾತ್ರವಲ್ಲ, ಜನರಲ್ಲಿ ನಂಬಿಕೆ ಕೂಡಾ ನಷ್ಟವಾಗಿದೆ. ನಾವು ಗೋಸಂರಕ್ಷಣೆ ಹೆಸರಿನಲ್ಲಿ ಹತ್ಯೆ ಮಾಡುವುದರ ವಿರುದ್ಧ ಕಾನೂನು ತರುತ್ತೇವೆ” ಎಂದು ಅಫ್ತಾಬ್ ಹೇಳಿದ್ದಾರೆ.

58 ವರ್ಷದ ಅಫ್ತಾಬ್ ಅವರು ಸೋಹ್ನಾ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಸಂಜಯ್ ಸಿಂಗ್ ವಿರುದ್ಧ ನುಹ್‌ನಲ್ಲಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ತಾಹಿರ್ ಹುಸೇನ್ ಅವರನ್ನು ಕಣಕ್ಕಿಳಿಸಿದೆ. ತಾಹಿರ್ ಹುಸೇನ್ ಅವರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮತ್ತು ಹರಿಯಾಣ ವಕ್ಫ್ ಮಂಡಳಿಯ ಅಧ್ಯಕ್ಷರಾದ ಜಾಕಿರ್ ಹುಸೇನ್ ಅವರ ಪುತ್ರರಾಗಿದ್ದಾರೆ. ಅವರು ಇತ್ತೀಚೆಗೆ INLD ಗೆ ಸೇರಿದ್ದರು.

ನುಹ್‌ ಕ್ಷೇತ್ರದಲ್ಲಿ ಬಿಜೆಪಿ ಎಂದಿಗೂ ಗೆದ್ದಿಲ್ಲ ಮತ್ತು ಇಲ್ಲಿನ ಮತದಾರರು ಐತಿಹಾಸಿಕವಾಗಿ ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿಯನ್ನು ಬೆಂಬಲಿಸಿದ್ದಾರೆ. ನುಹ್ ಅನ್ನು 2005 ರಲ್ಲಿ ಗುರ್ಗಾಂವ್ ಮತ್ತು ಫರಿದಾಬಾದ್ ಭಾಗಗಳಿಂದ ಪ್ರತ್ಯೇಕ ಜಿಲ್ಲೆಯಾಗಿ ಸ್ಥಾಪಿಸಲಾಯಿತು. ಇದು ನುಹ್, ಫಿರೋಜ್‌ಪುರ ಜಿರ್ಕಾ ಮತ್ತು ಪುನ್ಹಾನಾ ಎಂಬ ಮೂರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಹರ್ಯಾಣದಲ್ಲಿ ಅಕ್ಟೋಬರ್ 5 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...