Homeಮುಖಪುಟಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ' ಎಂದು ಹೇಳಿದ್ದಾರೆ.

- Advertisement -
- Advertisement -

ಹರಿಯಾಣದ ಜೆಜೆಪಿ ಶಾಸಕರ ಮನೆ ಮುತ್ತಿಗೆ ಹಾಕಿದ್ದಕ್ಕಾಗಿ ಬಂಧಿಸಲಾಗಿದ್ದ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫತೇಬಾದ್‌ನ ತೋಹಾನ ಪೊಲೀಸ್‌ ಠಾಣೆಯಲ್ಲಿ ಹಸುವನ್ನು ಸೇರಿಸಿಕೊಂಡು ರೈತರು ರಾತ್ರಿಯಿಡೀ ಧರಣಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ರೈತರನ್ನು ಬಿಡುಗಡೆ ಮಾಡಿದ್ದಾರೆ.

ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣಾ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ’ ಎಂದು ಹೇಳಿದ್ದಾರೆ.

ಪ್ರತಿಭಟನೆ ಭುಗಿಲೆದ್ದ ನಂತರ ಬಂಧನಕ್ಕೊಳಗಾಗಿದ್ದ ಇಬ್ಬರು ರೈತರನ್ನು ಭಾನುವಾರ ತಡರಾತ್ರಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರೈತರು ಬಿಡುಗಡೆಯಾಗಿದ್ದರಿಂದ, ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ತೋಹಾನದಲ್ಲಿ ಪೊಲೀಸ್‌ ಠಾಣೆಗಳನ್ನು ಮುತ್ತಿಗೆ ಹಾಕುವ ಯೋಜನೆಯನ್ನು ರದ್ದುಗೊಳಿಸಿದೆ. ಆದರೆ ಪ್ರತಿಭಟನೆ ಮುಂದುವರೆದಿದೆ.

Photo Courtesy: ANI

ಹಸುವಿಗೆ ಆಹಾರ ಮತ್ತು ನೀರು ನೀಡುವ ಜವಾಬ್ದಾರಿ ಪೊಲೀಸ್‌ ಅಧಿಕಾರಿಗಳ ಮೇಲಿದೆ ಎಂದು ರೈತರು ಆಗ್ರಹಿಸಿದ್ದಾರೆ. ಹಸುವನ್ನು ಪೊಲೀಸ್‌ ಠಾಣೆಯ ಆವರಣದಲ್ಲಿ ಕಂಬಕ್ಕೆ ಕಟ್ಟಿಹಾಕಲಾಗಿದ್ದು, ಅದರ ಮುಂದೆ ಹುಲ್ಲು ಮತ್ತು ನೀರು ಇಡಲಾಗಿದೆ.

`ಆಡಳಿತಾರೂಢ ಸರ್ಕಾರ ತನ್ನನ್ನು ಹಸು ಆರಾಧಕರು ಅಥವಾ ಹಸು ಪ್ರಿಯರ ಸರ್ಕಾರವೆಂದು ಪರಿಗಣಿಸುತ್ತದೆ. ನಾವು ಆ ಪವಿತ್ರ ಪ್ರಾಣಿಯನ್ನು ಪ್ರತಿಭಟನೆಯ ಸಂಕೇತವಾಗಿ ತಂದಿದ್ದೇವೆ. ಏಕೆಂದರೆ ಅದನ್ನು ಶುದ್ಧ ಮತ್ತು ಧರ್ಮನಿಷ್ಠವೆಂದು ಪರಿಗಣಿಸಲಾಗಿದೆ. ಅದರ ಉಪಸ್ಥಿತಿಯಲ್ಲಿ ಸರ್ಕಾರ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಲು ಅದು ಸಹಾಯ ಮಾಡುತ್ತದೆ’ ಎಂದು ಪ್ರತಿಭಟನಾಕಾರ ರೈತರೊಬ್ಬರು ತಿಳಿಸಿದ್ದಾರೆ.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣೆಯಲ್ಲಿ ಧರಣಿ ನಡೆದಿದ್ದು, ರೈತ ಮುಖಂಡರು ಮತ್ತು ಜಿಲ್ಲಾಡಳಿತದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಒಮ್ಮತ ಮೂಡಿಬರದಿದ್ದರಿಂದ ಪ್ರತಿಭಟನೆ ಮುಂದುವರೆಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಕೈಗೊಂಡಿತ್ತು.

ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಜೆಪಿಯ ಹರಿಯಾಣದ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಅವರ ನಿವಾಸವನ್ನು ಮುತ್ತಿಗೆ ಹಾಕಿದ್ದ ಕಾರಣಕ್ಕಾಗಿ ರೈತ ಮುಖಂಡರಾದ ವಿಕಾಸ್‌ ಸಿಸಾರ್‌ ಮತ್ತು ರವಿ ಆಜಾದ್ ಅವರನ್ನು ಬಂಧಿಸಲಾಗಿತ್ತು. ‌ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿ-ಜೆಜೆಪಿ ಶಾಸಕರ ಸಾರ್ವಜನಿಕ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿರುವ ಹರಿಯಾಣದ ರೈತ ಸಂಘಟನೆಗಳು, ಪಕ್ಷಗಳ ಜನಪ್ರತಿನಿಧಿಗಳು ಕಂಡಲ್ಲೆಲ್ಲಾ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಬಾಬ್ಲಿ ಅವರು ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿದ್ದರು ಎಂಬ ಆರೋಪದ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ರೈತರು ಆಗ್ರಹಿಸಿದ್ದರು. ಈ ಕುರಿತು ಪ್ರತಿಭಟನಾ ನಿರತ ರೈತರ ಹತ್ತಿರ ಕ್ಷಮೆ ಕೋರಿದ್ದ ಬಾಬ್ಲಿ ಅವರು ಜನಪ್ರತಿನಿಧಿಯಾಗಿ ಅವಾಚ್ಯ ಪದಗಳನ್ನು ಬಳಸಿದ್ದಕ್ಕಾಗಿ ವಿಷಾಧಿಸುತ್ತೇನೆ ಎಂದಿದ್ದರು.


ಇದನ್ನೂ ಓದಿ: ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...