Homeಮುಖಪುಟಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ' ಎಂದು ಹೇಳಿದ್ದಾರೆ.

- Advertisement -
- Advertisement -

ಹರಿಯಾಣದ ಜೆಜೆಪಿ ಶಾಸಕರ ಮನೆ ಮುತ್ತಿಗೆ ಹಾಕಿದ್ದಕ್ಕಾಗಿ ಬಂಧಿಸಲಾಗಿದ್ದ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫತೇಬಾದ್‌ನ ತೋಹಾನ ಪೊಲೀಸ್‌ ಠಾಣೆಯಲ್ಲಿ ಹಸುವನ್ನು ಸೇರಿಸಿಕೊಂಡು ರೈತರು ರಾತ್ರಿಯಿಡೀ ಧರಣಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ರೈತರನ್ನು ಬಿಡುಗಡೆ ಮಾಡಿದ್ದಾರೆ.

ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣಾ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ’ ಎಂದು ಹೇಳಿದ್ದಾರೆ.

ಪ್ರತಿಭಟನೆ ಭುಗಿಲೆದ್ದ ನಂತರ ಬಂಧನಕ್ಕೊಳಗಾಗಿದ್ದ ಇಬ್ಬರು ರೈತರನ್ನು ಭಾನುವಾರ ತಡರಾತ್ರಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರೈತರು ಬಿಡುಗಡೆಯಾಗಿದ್ದರಿಂದ, ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ತೋಹಾನದಲ್ಲಿ ಪೊಲೀಸ್‌ ಠಾಣೆಗಳನ್ನು ಮುತ್ತಿಗೆ ಹಾಕುವ ಯೋಜನೆಯನ್ನು ರದ್ದುಗೊಳಿಸಿದೆ. ಆದರೆ ಪ್ರತಿಭಟನೆ ಮುಂದುವರೆದಿದೆ.

Photo Courtesy: ANI

ಹಸುವಿಗೆ ಆಹಾರ ಮತ್ತು ನೀರು ನೀಡುವ ಜವಾಬ್ದಾರಿ ಪೊಲೀಸ್‌ ಅಧಿಕಾರಿಗಳ ಮೇಲಿದೆ ಎಂದು ರೈತರು ಆಗ್ರಹಿಸಿದ್ದಾರೆ. ಹಸುವನ್ನು ಪೊಲೀಸ್‌ ಠಾಣೆಯ ಆವರಣದಲ್ಲಿ ಕಂಬಕ್ಕೆ ಕಟ್ಟಿಹಾಕಲಾಗಿದ್ದು, ಅದರ ಮುಂದೆ ಹುಲ್ಲು ಮತ್ತು ನೀರು ಇಡಲಾಗಿದೆ.

`ಆಡಳಿತಾರೂಢ ಸರ್ಕಾರ ತನ್ನನ್ನು ಹಸು ಆರಾಧಕರು ಅಥವಾ ಹಸು ಪ್ರಿಯರ ಸರ್ಕಾರವೆಂದು ಪರಿಗಣಿಸುತ್ತದೆ. ನಾವು ಆ ಪವಿತ್ರ ಪ್ರಾಣಿಯನ್ನು ಪ್ರತಿಭಟನೆಯ ಸಂಕೇತವಾಗಿ ತಂದಿದ್ದೇವೆ. ಏಕೆಂದರೆ ಅದನ್ನು ಶುದ್ಧ ಮತ್ತು ಧರ್ಮನಿಷ್ಠವೆಂದು ಪರಿಗಣಿಸಲಾಗಿದೆ. ಅದರ ಉಪಸ್ಥಿತಿಯಲ್ಲಿ ಸರ್ಕಾರ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಲು ಅದು ಸಹಾಯ ಮಾಡುತ್ತದೆ’ ಎಂದು ಪ್ರತಿಭಟನಾಕಾರ ರೈತರೊಬ್ಬರು ತಿಳಿಸಿದ್ದಾರೆ.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣೆಯಲ್ಲಿ ಧರಣಿ ನಡೆದಿದ್ದು, ರೈತ ಮುಖಂಡರು ಮತ್ತು ಜಿಲ್ಲಾಡಳಿತದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಒಮ್ಮತ ಮೂಡಿಬರದಿದ್ದರಿಂದ ಪ್ರತಿಭಟನೆ ಮುಂದುವರೆಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಕೈಗೊಂಡಿತ್ತು.

ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಜೆಪಿಯ ಹರಿಯಾಣದ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಅವರ ನಿವಾಸವನ್ನು ಮುತ್ತಿಗೆ ಹಾಕಿದ್ದ ಕಾರಣಕ್ಕಾಗಿ ರೈತ ಮುಖಂಡರಾದ ವಿಕಾಸ್‌ ಸಿಸಾರ್‌ ಮತ್ತು ರವಿ ಆಜಾದ್ ಅವರನ್ನು ಬಂಧಿಸಲಾಗಿತ್ತು. ‌ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿ-ಜೆಜೆಪಿ ಶಾಸಕರ ಸಾರ್ವಜನಿಕ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿರುವ ಹರಿಯಾಣದ ರೈತ ಸಂಘಟನೆಗಳು, ಪಕ್ಷಗಳ ಜನಪ್ರತಿನಿಧಿಗಳು ಕಂಡಲ್ಲೆಲ್ಲಾ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಬಾಬ್ಲಿ ಅವರು ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿದ್ದರು ಎಂಬ ಆರೋಪದ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ರೈತರು ಆಗ್ರಹಿಸಿದ್ದರು. ಈ ಕುರಿತು ಪ್ರತಿಭಟನಾ ನಿರತ ರೈತರ ಹತ್ತಿರ ಕ್ಷಮೆ ಕೋರಿದ್ದ ಬಾಬ್ಲಿ ಅವರು ಜನಪ್ರತಿನಿಧಿಯಾಗಿ ಅವಾಚ್ಯ ಪದಗಳನ್ನು ಬಳಸಿದ್ದಕ್ಕಾಗಿ ವಿಷಾಧಿಸುತ್ತೇನೆ ಎಂದಿದ್ದರು.


ಇದನ್ನೂ ಓದಿ: ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...