Homeಮುಖಪುಟಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ' ಎಂದು ಹೇಳಿದ್ದಾರೆ.

- Advertisement -
- Advertisement -

ಹರಿಯಾಣದ ಜೆಜೆಪಿ ಶಾಸಕರ ಮನೆ ಮುತ್ತಿಗೆ ಹಾಕಿದ್ದಕ್ಕಾಗಿ ಬಂಧಿಸಲಾಗಿದ್ದ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫತೇಬಾದ್‌ನ ತೋಹಾನ ಪೊಲೀಸ್‌ ಠಾಣೆಯಲ್ಲಿ ಹಸುವನ್ನು ಸೇರಿಸಿಕೊಂಡು ರೈತರು ರಾತ್ರಿಯಿಡೀ ಧರಣಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ರೈತರನ್ನು ಬಿಡುಗಡೆ ಮಾಡಿದ್ದಾರೆ.

ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣಾ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ’ ಎಂದು ಹೇಳಿದ್ದಾರೆ.

ಪ್ರತಿಭಟನೆ ಭುಗಿಲೆದ್ದ ನಂತರ ಬಂಧನಕ್ಕೊಳಗಾಗಿದ್ದ ಇಬ್ಬರು ರೈತರನ್ನು ಭಾನುವಾರ ತಡರಾತ್ರಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರೈತರು ಬಿಡುಗಡೆಯಾಗಿದ್ದರಿಂದ, ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ತೋಹಾನದಲ್ಲಿ ಪೊಲೀಸ್‌ ಠಾಣೆಗಳನ್ನು ಮುತ್ತಿಗೆ ಹಾಕುವ ಯೋಜನೆಯನ್ನು ರದ್ದುಗೊಳಿಸಿದೆ. ಆದರೆ ಪ್ರತಿಭಟನೆ ಮುಂದುವರೆದಿದೆ.

Photo Courtesy: ANI

ಹಸುವಿಗೆ ಆಹಾರ ಮತ್ತು ನೀರು ನೀಡುವ ಜವಾಬ್ದಾರಿ ಪೊಲೀಸ್‌ ಅಧಿಕಾರಿಗಳ ಮೇಲಿದೆ ಎಂದು ರೈತರು ಆಗ್ರಹಿಸಿದ್ದಾರೆ. ಹಸುವನ್ನು ಪೊಲೀಸ್‌ ಠಾಣೆಯ ಆವರಣದಲ್ಲಿ ಕಂಬಕ್ಕೆ ಕಟ್ಟಿಹಾಕಲಾಗಿದ್ದು, ಅದರ ಮುಂದೆ ಹುಲ್ಲು ಮತ್ತು ನೀರು ಇಡಲಾಗಿದೆ.

`ಆಡಳಿತಾರೂಢ ಸರ್ಕಾರ ತನ್ನನ್ನು ಹಸು ಆರಾಧಕರು ಅಥವಾ ಹಸು ಪ್ರಿಯರ ಸರ್ಕಾರವೆಂದು ಪರಿಗಣಿಸುತ್ತದೆ. ನಾವು ಆ ಪವಿತ್ರ ಪ್ರಾಣಿಯನ್ನು ಪ್ರತಿಭಟನೆಯ ಸಂಕೇತವಾಗಿ ತಂದಿದ್ದೇವೆ. ಏಕೆಂದರೆ ಅದನ್ನು ಶುದ್ಧ ಮತ್ತು ಧರ್ಮನಿಷ್ಠವೆಂದು ಪರಿಗಣಿಸಲಾಗಿದೆ. ಅದರ ಉಪಸ್ಥಿತಿಯಲ್ಲಿ ಸರ್ಕಾರ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಲು ಅದು ಸಹಾಯ ಮಾಡುತ್ತದೆ’ ಎಂದು ಪ್ರತಿಭಟನಾಕಾರ ರೈತರೊಬ್ಬರು ತಿಳಿಸಿದ್ದಾರೆ.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣೆಯಲ್ಲಿ ಧರಣಿ ನಡೆದಿದ್ದು, ರೈತ ಮುಖಂಡರು ಮತ್ತು ಜಿಲ್ಲಾಡಳಿತದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಒಮ್ಮತ ಮೂಡಿಬರದಿದ್ದರಿಂದ ಪ್ರತಿಭಟನೆ ಮುಂದುವರೆಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಕೈಗೊಂಡಿತ್ತು.

ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಜೆಪಿಯ ಹರಿಯಾಣದ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಅವರ ನಿವಾಸವನ್ನು ಮುತ್ತಿಗೆ ಹಾಕಿದ್ದ ಕಾರಣಕ್ಕಾಗಿ ರೈತ ಮುಖಂಡರಾದ ವಿಕಾಸ್‌ ಸಿಸಾರ್‌ ಮತ್ತು ರವಿ ಆಜಾದ್ ಅವರನ್ನು ಬಂಧಿಸಲಾಗಿತ್ತು. ‌ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿ-ಜೆಜೆಪಿ ಶಾಸಕರ ಸಾರ್ವಜನಿಕ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿರುವ ಹರಿಯಾಣದ ರೈತ ಸಂಘಟನೆಗಳು, ಪಕ್ಷಗಳ ಜನಪ್ರತಿನಿಧಿಗಳು ಕಂಡಲ್ಲೆಲ್ಲಾ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಬಾಬ್ಲಿ ಅವರು ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿದ್ದರು ಎಂಬ ಆರೋಪದ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ರೈತರು ಆಗ್ರಹಿಸಿದ್ದರು. ಈ ಕುರಿತು ಪ್ರತಿಭಟನಾ ನಿರತ ರೈತರ ಹತ್ತಿರ ಕ್ಷಮೆ ಕೋರಿದ್ದ ಬಾಬ್ಲಿ ಅವರು ಜನಪ್ರತಿನಿಧಿಯಾಗಿ ಅವಾಚ್ಯ ಪದಗಳನ್ನು ಬಳಸಿದ್ದಕ್ಕಾಗಿ ವಿಷಾಧಿಸುತ್ತೇನೆ ಎಂದಿದ್ದರು.


ಇದನ್ನೂ ಓದಿ: ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...