Homeಚಳವಳಿಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

ಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

- Advertisement -
- Advertisement -

ಹರಿಯಾಣ ರಾಜ್ಯದ ಸಿರ್ಸಾದ ಎಲ್ಲೆನಾಬಾದ್‌ನಲ್ಲಿ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ. ಬಿಜೆಪಿ ಗೋವಿಂದ್ ಕಂದಾ ಅವರಿಗೆ ಟಿಕೆಟ್ ನೀಡಿದೆ. ಆದರೆ, ಸಿರ್ಸಾದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ರಸ್ತೆಗಳಲ್ಲಿ ಪ್ರಚಾರಕ್ಕೆ ಹಾಕಿದ್ದ ಬಿಜೆಪಿ ಧ್ವಜಗಳನ್ನು ಕಿತ್ತು ಒಂದೆಡೆ ಹಾಕಿ ಬೆಂಕಿ ಹಚ್ಚಿದ್ದಾರೆ.

ಭಾರತೀಯ ಜನತಾ ಪಾರ್ಟಿ ಇಂದು ಗೋವಿಂದ್ ಕಂದಾ ಅವರಿಗೆ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿತ್ತು. ಹರಿಯಾಣದಲ್ಲಿ ಬಿಜೆಪಿ ನಾಯಕರ ಯಾವುದೇ ಕಾಯ್ರಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದಿರುವ ರೈತರು ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ಅಭ್ಯರ್ಥಿ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು.

ನಾಮಪತ್ರ ಸಲ್ಲಿಕೆಗಾಗಿ ರಸ್ತೆಯುದ್ದಕ್ಕೂ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ಕಿತ್ತು, ಒಂದು ಕಡೆ ಗುಡ್ಡೆ ಹಾಕಿದ ಪ್ರತಿಭಟನಾ ನಿರತ ರೈತರು ಆಕ್ರೋಶದಲ್ಲಿ ಬೆಂಕಿ ಹಾಕಿದ್ದಾರೆ. ಪ್ರತಿಭಟನೆಯನ್ನು ಮೊದಲೆ ಊಹಿಸಿದ್ದ ಸರ್ಕಾರ ಭಾರಿ ಬಿಗಿ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಿತ್ತು. ಪೊಲೀಸ್ ರಕ್ಷಣೆಯಲ್ಲಿ ಹೋಗಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತರ ಪರ ಟ್ವೀಟ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ, ಮೇನಕಾ ಗಾಂಧಿ ಔಟ್

“ನಾವು ಈ ಧ್ವಜಗಳನ್ನು ದ್ವೇಷಿಸುತ್ತೇವೆ. ಈ ಧ್ವಜಗಳ ಅಡಿಯಲ್ಲಿ ಅಧಿಕಾರಕ್ಕೆ ಬಂದವರು ನಮ್ಮವರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾರೆ. ಹೀಗಾಗಿ ಇವುಗಳಿಗೆ ಬೆಂಕಿ ಹಾಕಿದ್ದೇವೆ” ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದ್ದಾರೆ.

ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಹತ್ಯೆ ಮಾಡಲಾಗಿದೆ. ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಸಮನ್ಸ್ ನೀಡಿದ್ದಾರೆ. ಆದರೆ, ಆರೋಪಿ ತಪ್ಪಿಸಿಕೊಂಡಿದ್ದಾರೆ.

“3 ಪೊಲೀಸ್ ತಂಡಗಳು ಕಾಣೆಯಾದ ಆರೋಪಿ ಆಶಿಶ್ ಮಿಶ್ರಾ ಅವರನ್ನು ಹುಡುಕುತ್ತಿವೆ. ಇಬ್ಬರನ್ನು ಬಂಧಿಸಲಾಗಿದೆ ಮತ್ತು ಮೂರು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆದರೆ ಯುಪಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವ ಕೊಳಕು ಆಟಗಳನ್ನು ನಿಲ್ಲಿಸಬೇಕು” ಎಂದು ಎಸ್‌ಕೆಎಂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ವಿಡಿಯೋ ನೋಡಿ…


ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...