Homeಚಳವಳಿಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

ಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

- Advertisement -
- Advertisement -

ಹರಿಯಾಣ ರಾಜ್ಯದ ಸಿರ್ಸಾದ ಎಲ್ಲೆನಾಬಾದ್‌ನಲ್ಲಿ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ. ಬಿಜೆಪಿ ಗೋವಿಂದ್ ಕಂದಾ ಅವರಿಗೆ ಟಿಕೆಟ್ ನೀಡಿದೆ. ಆದರೆ, ಸಿರ್ಸಾದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ರಸ್ತೆಗಳಲ್ಲಿ ಪ್ರಚಾರಕ್ಕೆ ಹಾಕಿದ್ದ ಬಿಜೆಪಿ ಧ್ವಜಗಳನ್ನು ಕಿತ್ತು ಒಂದೆಡೆ ಹಾಕಿ ಬೆಂಕಿ ಹಚ್ಚಿದ್ದಾರೆ.

ಭಾರತೀಯ ಜನತಾ ಪಾರ್ಟಿ ಇಂದು ಗೋವಿಂದ್ ಕಂದಾ ಅವರಿಗೆ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿತ್ತು. ಹರಿಯಾಣದಲ್ಲಿ ಬಿಜೆಪಿ ನಾಯಕರ ಯಾವುದೇ ಕಾಯ್ರಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದಿರುವ ರೈತರು ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ಅಭ್ಯರ್ಥಿ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು.

ನಾಮಪತ್ರ ಸಲ್ಲಿಕೆಗಾಗಿ ರಸ್ತೆಯುದ್ದಕ್ಕೂ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ಕಿತ್ತು, ಒಂದು ಕಡೆ ಗುಡ್ಡೆ ಹಾಕಿದ ಪ್ರತಿಭಟನಾ ನಿರತ ರೈತರು ಆಕ್ರೋಶದಲ್ಲಿ ಬೆಂಕಿ ಹಾಕಿದ್ದಾರೆ. ಪ್ರತಿಭಟನೆಯನ್ನು ಮೊದಲೆ ಊಹಿಸಿದ್ದ ಸರ್ಕಾರ ಭಾರಿ ಬಿಗಿ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಿತ್ತು. ಪೊಲೀಸ್ ರಕ್ಷಣೆಯಲ್ಲಿ ಹೋಗಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತರ ಪರ ಟ್ವೀಟ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ, ಮೇನಕಾ ಗಾಂಧಿ ಔಟ್

“ನಾವು ಈ ಧ್ವಜಗಳನ್ನು ದ್ವೇಷಿಸುತ್ತೇವೆ. ಈ ಧ್ವಜಗಳ ಅಡಿಯಲ್ಲಿ ಅಧಿಕಾರಕ್ಕೆ ಬಂದವರು ನಮ್ಮವರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾರೆ. ಹೀಗಾಗಿ ಇವುಗಳಿಗೆ ಬೆಂಕಿ ಹಾಕಿದ್ದೇವೆ” ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದ್ದಾರೆ.

ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಹತ್ಯೆ ಮಾಡಲಾಗಿದೆ. ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಸಮನ್ಸ್ ನೀಡಿದ್ದಾರೆ. ಆದರೆ, ಆರೋಪಿ ತಪ್ಪಿಸಿಕೊಂಡಿದ್ದಾರೆ.

“3 ಪೊಲೀಸ್ ತಂಡಗಳು ಕಾಣೆಯಾದ ಆರೋಪಿ ಆಶಿಶ್ ಮಿಶ್ರಾ ಅವರನ್ನು ಹುಡುಕುತ್ತಿವೆ. ಇಬ್ಬರನ್ನು ಬಂಧಿಸಲಾಗಿದೆ ಮತ್ತು ಮೂರು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆದರೆ ಯುಪಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವ ಕೊಳಕು ಆಟಗಳನ್ನು ನಿಲ್ಲಿಸಬೇಕು” ಎಂದು ಎಸ್‌ಕೆಎಂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ವಿಡಿಯೋ ನೋಡಿ…


ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...