Homeಮುಖಪುಟರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್‌ನಿಂದ ದೆಹಲಿಗೆ ‘ದಿಲ್ಲಿ ಚಲೋ’ ಮೆರವಣಿಗೆ ಹಮ್ಮಿಕೊಂಡಿದ್ದ ರೈತರನ್ನು ರಾಜ್ಯದ ಗಡಿಯಲ್ಲಿ ತಡೆದು ನಿಲ್ಲಿಸಿದ್ದಕ್ಕಾಗಿ ಹರಿಯಾಣ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳು ಮತ್ತು ಮೂವರು ಹೆಚ್‌ಪಿಎಸ್ (ಹರಿಯಾಣ ಪೊಲೀಸ್ ಸೇವೆ) ಅಧಿಕಾರಿಗಳಿಗೆ “ಶೌರ್ಯ ಪೊಲೀಸ್ ಪದಕ” ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆಬ್ರವರಿಯಲ್ಲಿ ದೆಹಲಿ ಚಲೋಗೆ ಕರೆ ಕೊಟ್ಟಿದ್ದರು. ಪಂಜಾಬ್‌ನಿಂದ ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಹರಿಯಾಣದ ಬಿಜೆಪಿ ಸರ್ಕಾರ ಅಂಬಾಲಾದ ಶಂಭು ಮತ್ತು ಜಿಂದ್‌ನ ಖಾನೌರಿ ಗಡಿಗಳಲ್ಲಿ ತಡೆದಿತ್ತು.

ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ಹರಿಯಾಣ ಸರ್ಕಾರಕ್ಕೆ ಜುಲೈ 10 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಆದೇಶವನ್ನು ಹರಿಯಾಣ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಜುಲೈ 22 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಜುಲೈ 2 ರಂದು ಕೇಂದ್ರಕ್ಕೆ ಕಳುಹಿಸಲಾದ ಶಿಫಾರಸುಗಳಲ್ಲಿ ಹರಿಯಾಣ ಸರ್ಕಾರವು ಐಪಿಎಸ್ ಅಧಿಕಾರಿಗಳಾದ ಸಿಬಾಶ್ ಕಬಿರಾಜ್ (ಐಜಿಪಿ, ಕರ್ನಾಲ್), ಜಶನ್ದೀಪ್ ಸಿಂಗ್ ರಾಂಧವಾ (ಎಸ್ಪಿ, ಕುರುಕ್ಷೇತ್ರ) ಮತ್ತು ಸುಮಿತ್ ಕುಮಾರ್ (ಎಸ್ಪಿ, ಜಿಂದ್) ಅವರಿಗೆ ಶೌರ್ಯ ಪದಕ ನೀಡುವಂತೆ ಕೋರಿದೆ. ಮೂವರು ಹೆಚ್‌ಪಿಎಸ್ ಅಧಿಕಾರಿಗಳಾದ ನರೇಂದ್ರ ಸಿಂಗ್, ರಾಮ್ ಕುಮಾರ್ ಮತ್ತು ಅಮಿತ್ ಭಾಟಿಯಾ (ಎಲ್ಲಾ ಡಿಎಸ್‌ಪಿಗಳು) ಪ್ರಶಸ್ತಿಗೆ ಶಿಫಾರಸು ಮಾಡಿದವರಲ್ಲಿ ಸೇರಿದ್ದಾರೆ. ಅಸಾಧಾರಣ ಶೌರ್ಯ ಮತ್ತು ನಾಯಕತ್ವದ ಕಾರಣ ನೀಡಿ ಡಿಜಿಪಿ ಶತ್ರುಜೀತ್ ಕಪೂರ್ ಅವರು ಮೇಲೆ ಉಲ್ಲೇಖಿಸಲಾದ ಅಧಿಕಾರಿಗಳ ಹೆಸರುಗಳನ್ನು ಪ್ರಶಸ್ತಿಗೆ ಶಿಫಾರಸು ಮಾಡಿದ್ದರು. ಅದನ್ನು ಸರ್ಕಾರ ಸ್ವೀಕರಿಸಿ, ನಂತರ ಕೇಂದ್ರಕ್ಕೆ ರವಾನಿಸಿದೆ.

ಇದನ್ನೂ ಓದಿ : ಎತ್ತಿನ ಗಾಡಿಗೆ ಸಾರಿಗೆ ಬಸ್ ಡಿಕ್ಕಿ; ಚಾಲಕನ ರೀಲ್ಸ್‌ ಹುಚ್ಚಿಗೆ 2 ಎತ್ತುಗಳ ಸಾವು, ರೈತನಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...