Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...