Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...