Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...