Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...