Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...