Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...