Homeಮುಖಪುಟಹರ್ಯಾಣ: ಖಾಸಗಿ ವಲಯದ ಉದ್ಯೋಗಗಳಲ್ಲಿ 75% ಮೀಸಲಾತಿ ರದ್ದು

ಹರ್ಯಾಣ: ಖಾಸಗಿ ವಲಯದ ಉದ್ಯೋಗಗಳಲ್ಲಿ 75% ಮೀಸಲಾತಿ ರದ್ದು

- Advertisement -
- Advertisement -

ರಾಜ್ಯದ ಜನರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ 75% ಮೀಸಲಾತಿ ಒದಗಿಸುವ ಕಾನೂನನ್ನು ರದ್ದುಗೊಳಿಸಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶ ನೀಡಿದ್ದು, ಇದರ ವಿರುದ್ಧ ಹರ್ಯಾಣ ಸರ್ಕಾರವು ಸುಪ್ರೀಂಕೋರ್ಟ್‌ ಮೊರೆ ಹೋಗಲು ಮುಂದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಹರ್ಯಾಣದ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ, ನಾವು ಹೈಕೋರ್ಟ್ ತೀರ್ಪನ್ನು ಪರಿಶೀಲಿಸುತ್ತೇವೆ ಮತ್ತು ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ. ಈ ಕಾನೂನು ರಾಜ್ಯ ಮತ್ತು ಉದ್ಯಮದ ಹಿತಾಸಕ್ತಿಯನ್ನು ಕಾಪಾಡುತ್ತದೆ. ಸ್ಥಳೀಯ ಯುವಕರಿಗೆ ಉದ್ಯೋಗ ಹಾಗೂ ಕೈಗಾರಿಕೆಗಳಿಗೆ ಕೌಶಲ್ಯ ಹೊಂದಿದ ಕೆಲಸಗಾರರನ್ನು ಒದಗಿಸಿಕೊಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ.

2019ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಾಜ್ಯದ ಖಾಸಗಿ ವಲಯದ ಉದ್ಯೋಗಗಳಲ್ಲಿ 75 ಪ್ರತಿಶತ ರಾಜ್ಯದ ಜನರಿಗೆ ಮೀಸಲಾತಿ ನೀಡುವುದು ಜನನಾಯಕ ಜನತಾ ಪಾರ್ಟಿ (ಜೆಜೆಪಿ)ಯ ಪ್ರಮುಖ ಚುನಾವಣಾ ಭರವಸೆಯಾಗಿತ್ತು. ಹೈಕೋರ್ಟ್‌ ಆದೇಶದಿಂದ ದುಶ್ಯಂತ್ ಚೌಟಾಲಾ ಅವರಿಗೆ ಮತ್ತು ಪಕ್ಷಕ್ಕೆ ಹಿನ್ನಡೆಯಾಗಿದೆ.

ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತನ್ನ 83 ಪುಟಗಳ ತೀರ್ಪಿನಲ್ಲಿ, ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ-2020 ಅಸಂವಿಧಾನಿಕ ಎಂದು ಹೇಳಿದೆ ಮತ್ತು ಅದು ನಿಷ್ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದೆ.

ಕಾಯ್ದೆಯ ಅನುಷ್ಠಾನದ ವಿರುದ್ಧ ಹಲವಾರು ಕೈಗಾರಿಕಾ ಸಂಘಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ಬಳಿಕ ಈ ತೀರ್ಪು ಬಂದಿದೆ.

ಹರ್ಯಾಣದಲ್ಲಿ ಚುನಾವಣೆಯ ನಂತರ  ಜೆಜೆಪಿಯು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲವನ್ನು ನೀಡಿತು.  ರಾಜ್ಯದಲ್ಲಿ ಬಿಜೆಪಿ ಸರಳ ಬಹುಮತವನ್ನು ಸಾಧಿಸಲು ವಿಫಲವಾದ ಕಾರಣ ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ರಚಿಸಿದೆ.

ಜನವರಿ 15, 2022ರಂದು ಜಾರಿಗೆ ಬಂದ ಕಾನೂನಿನ ಪ್ರಕಾರ, ರಾಜ್ಯದ ಅಭ್ಯರ್ಥಿಗಳಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ 75 ಪ್ರತಿಶತ ಮೀಸಲಾತಿಯನ್ನು ಒದಗಿಸಲಾಗಿದೆ. ಖಾಸಗಿ ವಲಯದ ಕಂಪನಿಗಳು, ಸೊಸೈಟಿಗಳು, ಟ್ರಸ್ಟ್‌ಗಳು, ಪಾಲುದಾರಿಕೆಯ ಸಂಸ್ಥೆಗಳು ಮತ್ತು 10 ಅಥವಾ ಅದಕ್ಕಿಂತ ಹೆಚ್ಚು ಜನರಿಗೆ ವೇತನ ಅಥವಾ ಇತರ ಸಂಭಾವನೆಯಲ್ಲಿ ಉತ್ಪಾದನೆ, ವ್ಯಾಪಾರ ಮಾಡುವ ಉದ್ಯೋಗದಾತರಿಗೆ ಈ ಕಾಯಿದೆ ಅನ್ವಯಿಸುತ್ತದೆ.

ಇದನ್ನು ಓದಿ: ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...