Homeಮುಖಪುಟಹರಿಯಾಣ: ಮುಸ್ಲಿಂ ವಲಸೆ ಕಾರ್ಮಿಕರ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಹೈಕೋರ್ಟ್ ತಡೆ

ಹರಿಯಾಣ: ಮುಸ್ಲಿಂ ವಲಸೆ ಕಾರ್ಮಿಕರ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಹರಿಯಾಣದ ಬಿಜೆಪಿ ಸರ್ಕಾರವು ನುಹ್ ಜಿಲ್ಲೆಯಲ್ಲಿನ ವಲಸೆ ಕಾರ್ಮಿಕರ ಕಟ್ಟಡ ಹಾಗೂ ಗುಡಿಸಲುಗಳನ್ನು ನೆಲಸಮ ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದು, ಈ ಕಾರ್ಯಾಚರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ತಡೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗುರುವಾರದಿಂದ ನಾಲ್ಕು ದಿನಗಳ ಕಾಲ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಅಕ್ರಮ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸುತ್ತಿದ್ದಾರೆ, ಅವುಗಳಲ್ಲಿ ಹೆಚ್ಚಿನವು ಮುಸ್ಲಿಂ ವಲಸೆ ಕಾರ್ಮಿಕರಿಗೆ ಸೇರಿದವುಗಳಾಗಿವೆ.

ಕಳೆದ ವಾರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದ ವಿರುದ್ಧದ ಕ್ರಮವಾಗಿ ಈ ಕಾರ್ಯಾಚರಣೆ ನಡೆಸಲಾಯಿತು. ನುಹ್ ಮತ್ತು ನೆರೆಯ ಗುರುಗ್ರಾಮ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು, ಮಸೀದಿಯ ಇಮಾಮ್ ಮತ್ತು ಬಜರಂಗದಳದ ಸದಸ್ಯ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ಸೋಮವಾರ, ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಹರ್‌ಪ್ರೀತ್ ಕೌರ್ ಜೀವನ್ ಅವರ ವಿಭಾಗೀಯ ಪೀಠವು, ಈ ವಿಷಯವನ್ನು ಕೈಗೆತ್ತಿಕೊಂಡಿತು. ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಮನೋಹರ್ ಲಾಲ್ ಖಟ್ಟರ್ ಸರ್ಕಾರಕ್ಕೆ ನ್ಯಾಯಮೂರ್ತಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿವರವಾದ ಆದೇಶವನ್ನು ಇನ್ನೂ ನೀಡಲಾಗಿಲ್ಲ, ಮತ್ತು ನ್ಯಾಯಾಲಯವು ಪ್ರಕರಣವನ್ನು ಒಂದು ದಿನದ ನಂತರ ಮತ್ತೆ ಕೈಗೆತ್ತಿಕೊಳ್ಳಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆಯಲ್ಲಿ ಮೊದಲು ಕೋಮು ಘರ್ಷಣೆಗಳು ಭುಗಿಲೆದ್ದವು. ಆನಂತರ ಅದು ತ್ವರಿತವಾಗಿ ಜಿಲ್ಲೆಯಾದ್ಯಂತ ಹರಡಿತು.

ಗುರುಗ್ರಾಮ್‌ನಲ್ಲಿ ಹಿಂದೂ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57 ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು. ಅದರ ಉಪ ಇಮಾನನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಗುರುವಾರ, ಹರಿಯಾಣ ಸರ್ಕಾರವು ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ ಆರೋಪದ ಮೇಲೆ ಜಿಲ್ಲೆಯ ಟೌರು ಪಟ್ಟಣದಲ್ಲಿ 250ಕ್ಕೂ ಹೆಚ್ಚು ಮುಸ್ಲಿಂ ವಲಸೆ ಕಾರ್ಮಿಕರ ಗುಡಿಸಲುಗಳನ್ನು ನೆಲಸಮಗೊಳಿಸಿದೆ. ಶುಕ್ರವಾರ ಇದೇ ಆಧಾರದ ಮೇಲೆ ಹಲವಾರು ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ.

ಶನಿವಾರ, ನಲ್ಹಾರ್‌ನ ಶಹೀದ್ ಹಸನ್ ಖಾನ್ ಮೇವಾಟಿ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ಸುಮಾರು ಒಂದು ಡಜನ್ ಅಂಗಡಿಗಳನ್ನು, ಹೆಚ್ಚಾಗಿ ಔಷಧಾಲಯಗಳನ್ನು ಧ್ವಂಸಗೊಳಿಸಲಾಯಿತು. ಭಾನುವಾರ, ನುಹ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಹೋಟೆಲ್‌ನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲಾಯಿತು.

ಇದನ್ನೂ ಓದಿ: ಹರಿಯಾಣ: ಪ್ರಚೋದನಕಾರಿ ವಿಡಿಯೋ ಶೇರ್ ಮಾಡುತ್ತಿರುವ ಬಲಪಂಥೀಯ ಮಾಧ್ಯಮಗಳಿಗೆ ಡಿಜಿಪಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...